ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಿ
Team Udayavani, Feb 7, 2018, 4:11 PM IST
ಇಂಡಿ: ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಶಿಕ್ಷಣ ನೀಡುವುದರ ಜೊತೆಗೆ
ಸಮಾಜಕ್ಕೆ ಒಬ್ಬ ಒಳ್ಳೆಯ ನಾಗರಿಕನಾಗಿ ಬದುಕಬೇಕೆಂಬ ತಿಳಿವಳಿಕೆ ಮೂಡಿಸಿಸುವುದು ಮುಖ್ಯವಾಗಿದೆ ಎಂದು ಉಪ ವಿಭಾಗಾಧಿ ಕಾರಿ ಡಾ| ಪಿ. ರಾಜು ಹೇಳಿದರು.
ಚವಡಿಹಾಳದ ಗುರುಬಸವ ವಿಜ್ಞಾನ ಪದವಿ ಮಹಾವಿದ್ಯಾಲಯ ಹಾಗೂ ಗುರುಬಸವ ಕಿರಿಯ ಪ್ರಾಥಮಿಕ ಶಾಲೆ (ಕನ್ನಡ ಮತ್ತು ಆಂಗ್ಲ ಮಾಧ್ಯಮ)ಯಲ್ಲಿ 2017-18ನೇ ಸಾಲಿನ ರಾಜ್ಯಮಟ್ಟದ ಅಬ್ಯಾಕಸ್ ಪರೀಕ್ಷಾ ಸ್ಪರ್ಧೆಯಲ್ಲಿ ಭಾಗವಹಿಸಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಮತ್ತು ಪದವಿ ವಿದ್ಯಾರ್ಥಿಗಳಿಗಾಗಿ ಗಣಕಯಂತ್ರದ ಸಾಧಕ ಬಾಧಕಗಳ
ಬಗ್ಗೆ ಚರ್ಚಾಕೂಟದಲ್ಲಿ ಅವರು ಮಾತನಾಡಿದರು.
ಇಂಡಿಯಂಥ ಹಿಂದುಳಿದ ತಾಲೂಕಿನಲ್ಲಿ ಆಂಗ್ಲ ಮಾಧ್ಯಮ ಹಾಗೂ ವಿಜ್ಞಾನ ಶಿಕ್ಷಣ ನೀಡುತ್ತಿರುವ ಸಂಸ್ಥೆಯ ಕಾರ್ಯ ಮೆಚ್ಚುವಂಥದ್ದು ಎಂದು ಸಂಸ್ಥೆ ಅಧ್ಯಕ್ಷರಿಗೆ ಶ್ಲಾಘಿಸಿದರು. ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಗಣಕಯಂತ್ರದ ಸಾಧಕ ಬಾಧಕಗಳ ಬಗ್ಗೆ ಕುಮಾರ ಆದರ್ಶ ಖೇಡಗಿ, ಐಶ್ವರ್ಯ ಬಿರಾದಾರ, ರಾಣಿ ಪ್ರಚಂಡಿ ಹಾಗೂ ಪುಷ್ಪಾ ಪವಾರ, ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಆಧಾರಿತ ಜೀವನ ಶೈಲಿಯಿಂದ ಉಂಟಾಗುತ್ತಿರುವ ಅನುಕೂಲಗಳು ಹಾಗೂ ಅನಾನುಕೂಲಗಳ ಬಗ್ಗೆ ಉದಾಹರಣೆ ಸಹಿತವಾಗಿ
ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಅಧ್ಯಕ್ಷ ಎಂ.ಬಿ. ಬಿರಾದಾರ ಮಾತನಾಡಿ, ಬೆಳೆವಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಲ್ಲಿರುವ ಅಗಾಧ ಶಕ್ತಿಯನ್ನು ಹೊರ ತರಬೇಕಾದರೆ ಸೂಕ್ತ ಮಾರ್ಗದರ್ಶನ ಮಾಡಬೇಕಾದುದು ಪಾಲಕರ ಹಾಗೂ ಶಿಕ್ಷಕರ ಕರ್ತವ್ಯ. ಅಬ್ಯಾಕಸ್ ಪರೀಕ್ಷೆಯಲ್ಲಿ ಭಾಗವಹಿಸಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳ ಸಾಧನೆ ಸ್ಮರಣೀಯ ಎಂದರು.
ಈ ವೇಳೆ ಅಬ್ಯಾಕಸ್ ತರಬೇತಿ ನೀಡಿದ ಶಿಕ್ಷಕಿಯರಾದ ಸುಜಾತಾ ಮಡ್ನಳ್ಳಿ ಅವರಿಗೆ ಸನ್ಮಾನಿಸಿ ಐದು ಸಾವಿರ ನಗದು ಬಹುಮಾನ ವಿತರಿಸಲಾಯಿತು. ರಾಜ್ಯಮಟ್ಟದ ಅಬ್ಯಾಕಸ್ ಪರೀಕ್ಷಾ ಸ್ಪರ್ಧೆಯಲ್ಲಿ ರ್ಯಾಂಕ ಪಡೆದ ವಿದ್ಯಾರ್ಥಿಗಳಾದ ದೀಪಿಕಾ ಧೂಮಕನಾಳ, ದರ್ಶನ ಬಿರಾದಾರ, ವಿಶ್ವಕುಮಾರ ದಶವಂತ, ಸಿದ್ಧಾರ್ಥ ಬಿರಾದಾರ, ಅಯಾಜ ಚೌಧರಿ ಹಾಗೂ ರೋಶನಿ ಜಾಧವ ರಾಜ್ಯ ಮಟ್ಟದಲ್ಲಿ ಶಾಲೆಯ ಹೆಸರನ್ನು ತಂದ ಪ್ರಯುಕ್ತ ಪಾಲಕರು ವಿದ್ಯಾರ್ಥಿಗಳು ಶಿಕ್ಷಕರು ಆಡಳಿತ ಮಂಡಳಿಯವರು ಹರ್ಷ ವ್ಯಕ್ತಪಡಿಸಿದರು.
ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಎಸ್. ಸಾರವಾಡ, ಪ್ರಾಚಾರ್ಯರಾದ ಎ.ಎಸ್. ಪಾಟೀಲ, ಮುಖ್ಯ ಗುರುಗಳಾದ ಜಿ.ಜಿ. ದೇಸಾಯಿ ಕಾರ್ಯಕ್ರಮದಲ್ಲಿ ಇದ್ದರು. ಪ್ರಾಥಮಿಕ ಶಾಲಾ ಮುಖ್ಯಗುರು ಪಿ.ಆರ್. ಹೂಗಾರ ಸ್ವಾಗತಿಸಿದರು. ಪೂಜಾ ನರೋಣಿ ನಿರೂಪಿಸಿದರು. ಪದವಿ ಕಾಲೇಜಿನ ವಿದ್ಯಾರ್ಥಿನಿ ಸಿರಿನಾ, ಶೃತಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ