ಅಕ್ರಮ ಸಕ್ರಮ ರೈತರಿಗೆ ನ್ಯಾಯ: ರಮಾನಾಥ ರೈ
Team Udayavani, Feb 8, 2018, 6:05 AM IST
ವಿಧಾನ ಪರಿಷತ್: ಡೀಮ್ಡ್ ಅರಣ್ಯ ಪರದೇಶದಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿಕೊಂಡಿರುವ ರೈತರಿಗೆ ಸರ್ಕಾರ ನ್ಯಾಯ ಒದಗಿಸಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.
ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 1997 ರಲ್ಲಿ ರಾಜ್ಯದಲ್ಲಿ 10 ಲಕ್ಷ ಎಕರೆ ಡೀಮ್ಡ್ ಅರಣ್ಯ ಪ್ರದೇಶ ಎಂದು ಗುರುತಿಸಲಾಗಿತ್ತು. ನಂತರ ಕುಮ್ಕಿ, ಕಾನ್ ಬಾನೆ ಪ್ರದೇಶಗಳನ್ನು ಹೊರತು ಪಡಿಸಿ 3 ಲಕ್ಷ 30 ಸಾವಿರ ಎಕರೆ ಪ್ರದೇಶ ಎಂದು ಅಂತಿಮಗೊಳಿಸಲಾಗಿದೆ ಎಂದರು.
ಆದರೆ, ಅವರ ಲಿಖೀತ ಉತ್ತರದಲ್ಲಿ ಸಂಪುಟದ ನಿರ್ಣಯದಂತೆ ಡೀಮ್ಡ್ ಫಾರೆಸ್ಟ್ನಿಂದ ಕೈ ಬಿಡಬಹುದಾದ ಭೂಮಿಯನ್ನು ಯಾವುದೇ ಖಾಸಗಿ ವ್ಯಕ್ತಿಗೆ ನೀಡದೇ ಸಾರ್ವಜನಿಕ ಯೋಜನೆಗಳಿಗೆ ಉಪಯೋಗಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದರು.
ಅದನ್ನು ಪ್ರಶ್ನಿಸಿದ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಸರ್ಕಾರ ಸಾರ್ವಜನಿಕ ಉದ್ದೇಶಗಳಿಗೆ ಬಳಸಿಕೊಳ್ಳುತ್ತದೆ ಎಂದರೆ, ಸಾಗುವಳಿ ಮಾಡಿಕೊಂಡು 94ಸಿ, 94ಸಿಸಿ ಯಲ್ಲಿ ಅರ್ಜಿ ಹಾಕಿದ ಬಡ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಸರ್ಕಾರ ಅವರಿಗೆ ಜಮೀನು ನೀಡುವುದಿಲ್ಲವೇ ಎಂದು ಪ್ರಶ್ನಿಸಿದರು. ಆಗ ರಮಾನಾಥ ರೈ, ಡೀಮ್ಡ್ ಫಾರೆಸ್ಟ್ನಲ್ಲಿ ಸಾಗುವಳಿ ಮಾಡಿಕೊಂಡಿರುವ ರೈತರಿಗೆ ಯಾವುದೇ ತೊಂದರೆ ಕೊಡುವುದಿಲ್ಲ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ