112 ಗ್ರಾಪಂಗಳಲ್ಲಿಲ್ಲ ಸಿಸಿ ಕ್ಯಾಮರಾ!


Team Udayavani, Feb 8, 2018, 10:28 AM IST

BIPRO-EC550VF-2.jpg

ಯಾದಗಿರಿ: ರಾಜ್ಯ ಸರಕಾರ ಸ್ಥಳೀಯ ಸಂಸ್ಥೆಗಳಲ್ಲಿ ಪಾರದರ್ಶಕತೆ ಆಡಳಿತ ನೀಡುವ ಉದ್ದೇಶದಿಂದ ಗ್ರಾಪಂಗಳಿಗೂ ಸಿಸಿ ಕ್ಯಾಮರಾ ಅಳವಡಿಸಬೇಕೆಂದು ಆದೇಶ ಹೊರಡಿಸಿದೆ. ಆದರೆ ಜಿಲ್ಲೆಯ 123 ಗ್ರಾಪಂಗಳ ಪೈಕಿ ಕೇವಲ 11 ಗ್ರಾಪಂ ಕಚೇರಿಗಳು ಸಿಸಿ ಕ್ಯಾಮರಾ ಹೊಂದಿದ್ದು, ಇನ್ನೂ 112 ಗ್ರಾಪಂ ಸಿಸಿ ಕ್ಯಾಮರಾ ಅಳವಡಿಸಿಲ್ಲದಿರುವುದು ಬೆಳಕಿಗೆ ಬಂದಿದೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅ ಧಿನಿಯಮ 1999 ಮತ್ತು 2000 ಕಟ್ಟುನಿಟ್ಟಾಗಿ ಪಾಲಿಸಿ ಆಯಾ ಗ್ರಾಪಂಗಳು ತಮ್ಮ ಸ್ವಂತ ನಿಧಿಯಿಂದ ವೆಚ್ಚ ಭರಿಸಿ ಸಿಸಿ ಕ್ಯಾಮರಾ ಅಳವಡಿಸಬೇಕೆಂದು ರಾಜ್ಯ ಸರಕಾರ ಕಳೆದ ಜೂನ್‌ 12, 2017ರಂದು ಆದೇಶ ಹೊರಡಿಸಿದೆ. ಆದರೆ ಎಂಟು ತಿಂಗಳು ಕಳೆದರೂ ಬಹುತೇಕ ಗ್ರಾಪಂಗಳು ಇನ್ನೂ ಸಿಸಿ ಕ್ಯಾಮರಾ ಅಳವಡಿಸದೆ ಬೇಜವಾಬ್ದಾರಿತನ ವರ್ತಿಸಿವೆ.

ಜಿಲ್ಲೆಯ ಶಹಾಪುರ ತಾಲೂಕಿನ ಒಟ್ಟು 41 ಗ್ರಾಪಂಗಳ ಪೈಕಿ ಮೂರು ಗ್ರಾಪಂಗಳು, ಯಾದಗಿರಿ ತಾಲೂಕಿನ 40 ಗ್ರಾಪಂಗಳ ಪೈಕಿ ಕೇವಲ ಎರಡು ಗ್ರಾಪಂಗಳು ಹಾಗೂ ಸುರಪುರ ತಾಲೂಕಿನ 42 ಗ್ರಾಪಂ ಪೈಕಿ ಆರು ಗ್ರಾಪಂಗಳು ಸಿಸಿ ಕ್ಯಾಮರಾ ಅಳವಡಿಸಿಕೊಂಡಿದ್ದು, ಉಳಿದೆಲ್ಲ ಗ್ರಾಪಂಗಳು ಸಿಸಿ ಕ್ಯಾಮರಾ ಅಳವಡಿಸದೆ ನಿರ್ಲಕ್ಷ್ಯವಹಿಸಿವೆ.

ಯಾದಗಿರಿ ತಾಲೂಕಿನಲ್ಲಿ ಯರಗೋಳ ಮತ್ತು ಅಲ್ಲಿಪುರ ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಸುರಪುರ ತಾಲೂಕಿನಲ್ಲಿ ಕಾಮನಟಗಿ, ಯಾಳಗಿ, ಅರಕೇರಾ (ಜೆ), ಜೋಗುಂಡಭಾವಿ, ಅರಕೇರಾ (ಕೆ) ಮತ್ತು ಹುಸಣಗಿ ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಲಾಗಿದೆ. ಶಹಾಪುರ ತಾಲೂಕಿನ ಹಯ್ನಾಳ (ಬಿ), ವನದುರ್ಗ, ಹೊಸಕೇರಾ ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಂಡಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಜಿಪಂ ಸಿಇಒ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌ ಅವರು ಕಳೆದ ಆಗಸ್ಟ್‌ 18, 2017ರಂದು ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿರುವ ಕುರಿತು ಪ್ರಗತಿ ವರದಿಯನ್ನು ಪಂಚ ತಂತ್ರದಲ್ಲಿ ಅಳವಡಿಸುವಂತೆ ಯಾದಗಿರಿ, ಶಹಾಪುರ ಮತ್ತು ಸುರಪುರ ತಾಪಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ ಅಧಿಕಾರಿಗಳು ಈ ಸೂಚನೆ ಸರಿಯಾಗಿ ಪಾಲಿಸಿಲ್ಲ ಎಂಬುದು ತಿಳಿದು ಬಂದಿದೆ. ಗ್ರಾಪಂಗಳ ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸಿಸಿ ಕ್ಯಾಮರಾ ಅಳವಡಿಸಲು ರಾಜ್ಯ ಸರಕಾರ ಹೊರಡಿಸಿದ
ಆದೇಶ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಸಕ್ತಿ ವಹಿಸುವವರೇ ಕಾಯ್ದು ನೋಡಬೇಕಿ¨

ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಗ್ರಾಪಂಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳುವಂತೆ ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವ ಕಾರಣಕ್ಕೆ ಸಿಸಿ ಕ್ಯಾಮರಾ ಅಳವಡಿಸಿಕೊಂಡಿಲ್ಲ ಎಂಬ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 
 ಬಲವಂತ ರಾಠೊಡ, ಇಒ, ತಾಪಂ ಯಾದಗಿರಿ 

 ರಾಜೇಶ ಪಾಟೀಲ್‌ ಯಡ್ಡಳಿ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.