ಬಿಜೆಪಿಯಿಂದ ರಮ್ಯಾ ವಿರುದ್ಧ ದೂರು
Team Udayavani, Feb 8, 2018, 12:28 PM IST
ಬೆಂಗಳೂರು: ಐಟಿ ಕಾಯ್ದೆ ಮತ್ತು ಫೇಸ್ಬುಕ್ ನಿಯಮ ಉಲ್ಲಂಘಿಸಿ ಸಾಮಾಜಿಕ ಜಾಲ ತಾಣದಲ್ಲಿ ನಕಲಿ ಖಾತೆ ತೆರೆಯಲು ಉತ್ತೇಜನ ನೀಡಿದ ಆರೋಪದ ಮೇಲೆ ಎಐಸಿಸಿ ಸಮಾಜಿಕ ಜಾಲತಾಣ ಮತ್ತು ಡಿಜಿಟಲ್ ಕಮ್ಯೂನಿಕೇಷನ್ ಮುಖ್ಯಸ್ಥೆ ದಿವ್ಯಸ್ಪಂದನಾ (ನಟಿ ರಮ್ಯಾ) ವಿರುದ್ಧ ಬಿಜೆಪಿ ಐಟಿ ಘಟಕದಿಂದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ರಮ್ಯಾ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆಯುವುದು ಹೇಗೆ ಎಂಬುದನ್ನು ಹೇಳಿಕೊಡುತ್ತಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಕಲಿ ಖಾತೆ ಹೇಗೆ ತೆರೆಯುವ ಮತ್ತು ಅದರ ನಿರ್ವಹಣೆ ಹೇಗೆ ಎಂಬುದನ್ನು ಕಾರ್ಯಕರ್ತರಿಗೆ ತಿಳಿಸುತ್ತಿರುವ ಮಾಹಿತಿ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಇದು 2000ನೇ ಸಾಲಿನ ಐಟಿ ಕಾಯ್ದೆ ಮತ್ತು ಫೇಸ್ಬುಕ್ ನೀತಿ ನಿಯಮಗಳಿಗೆ ವಿರುದ್ಧವಾಗಿದೆ.
ಎಐಸಿಸಿ ಸಮಾಜಿಕ ಜಾಲತಾಣ ಮತ್ತು ಡಿಜಿಟಲ್ ಕಮ್ಯೂನಿಕೇಷನ್ ಮುಖ್ಯಸ್ಥೆಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ರಮ್ಯಾ ಸಮಾಜವನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನಿನನ್ವಯ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.
ರಾಜ್ಯ ಬಿಜೆಪಿ ವಕ್ತಾರರಾದ ಸುರೇಶ್ ಕುಮಾರ್, ಡಾ.ವಾಮನ್ ಆಚಾರ್ಯ, ಸಹ ವಕ್ತಾರರಾದ ಎಸ್.ಪ್ರಕಾಶ್, ಮಾಳವಿಕಾ ಅವಿನಾಶ್, ಸಿ.ಮಂಜುಳಾ, ಬಿಜೆಪಿ ಸಮಾಜಿಕ ಜಾಲತಾಣ ನಿರ್ವಾಹಕ ಬಾಲಾಜಿ ಇತರರು ಬುಧವಾರ ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಸಿಂಗ್ ಅವರಿಗೆ ಈ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.