ಹಗಲು ಹೊತ್ತು ರಸ್ತೆ ಕಾಮಗಾರಿ


Team Udayavani, Feb 8, 2018, 1:48 PM IST

8-Feb-12.jpg

ಮಹಾನಗರ : ನಗರ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಬೆಳಗ್ಗೆ ಮಧ್ಯಾಹ್ನ ಸಂಜೆ ವಾಹನಗಳ ದಟ್ಟಣೆ ಅಧಿಕವಾಗಿ ಸಂಚಾರ ಅಸ್ತವ್ಯವಸ್ಥಗೊಳ್ಳುತ್ತಿರುವ ಸಂಗತಿ ಘಟಿಸುತ್ತಲೇ ಇದೆ. ಇದಕ್ಕೆ ಸೇರ್ಪಡೆ ಎಂಬಂತೆ, ಮಂಗಳೂರು ಪಾಲಿಕೆ ಆಯೋಜಿತ ರಸ್ತೆ ಕಾಮಗಾರಿಯನ್ನು ಬೆಳಗ್ಗೆ ಮಾಡುವ ಮೂಲಕ ವಾಹನ ದಟ್ಟಣೆ ಉಂಟಾಗಿ ಸುಮಾರು ಹೊತ್ತು ವಾಹನಗಳು ರಸ್ತೆಯಲ್ಲಿಯೇ ಬಾಕಿಯಾದ ಘಟನೆ ಬುಧವಾರ ಕಂಕನಾಡಿಯಲ್ಲಿ ಸಂಭವಿಸಿದೆ.

ಕಂಕನಾಡಿಯ ಕರಾವಳಿ ವೃತ್ತದಿಂದ ಬೆಂದೂರ್‌ವೆಲ್‌ ವರೆಗೆ ರಸ್ತೆ ಹೊಂಡ ಗುಂಡಿ ಸರಿಪಡಿಸುವ ಉದ್ದೇಶದಿಂದ ಹಾಗೂ ಪ್ರಯಾಣಿಕರಿಗೆ ನೆರವಾಗುವ ಉದ್ದೇಶದಿಂದ ಸಂಪೂರ್ಣ ಡಾಮರು ಕಾಮಗಾರಿಗೆ ಪಾಲಿಕೆ ನಿರ್ಧರಿಸಿತ್ತು. ಇದರಿಂದ ಕರಾವಳಿ ವೃತ್ತದಿಂದ ಬುಧವಾರ ಬೆಳಗ್ಗೆ ಕಾಮಗಾರಿ ಆರಂಭಿಸಲಾಗಿತ್ತು.

ಒಂದು ಬದಿಯಿಂದ ಕಾಮಗಾರಿ ನಡೆಯುತ್ತಿದ್ದರೆ, ಇನ್ನೊಂದು ಬದಿಯಿಂದ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಕಂನಾಡಿ ಕರಾವಳಿ ವೃತ್ತಕ್ಕೆ ಪಂಪ್‌ವೆಲ್‌ ಹಾಗೂ ವೆಲೆನ್ಸಿಯಾ ಭಾಗದಿಂದ ವಾಹನಗಳು
ಪ್ರವೇಶಿಸುವ ಕಾರಣ ಇಲ್ಲಿ ವಾಹನದಟ್ಟಣೆ ಉಂಟಾಗಿ ವಾಹನಗಳೆಲ್ಲ ಸಾಲುಗಟ್ಟಲೆ ರಸ್ತೆಯಲ್ಲಿಯೇ ನಿಲ್ಲುವಂತಾಯಿತು. ಪಂಪ್‌ವೆಲ್‌ವರೆಗೆ ವಾಹನಗಳು ಸಂಚರಿಸದೆ ರಸ್ತೆಯಲ್ಲೇ ಬಾಕಿಯಾದವು.

ವಿದ್ಯಾರ್ಥಿ, ಉದ್ಯೋಗಿಗಳಿಗೆ ಸಂಕಷ್ಟ
ಪ್ರಯಾಣಿಕರ ದೃಷ್ಟಿಯಿಂದ ಕಂಕನಾಡಿಯಲ್ಲಿ ಕಾಮಗಾರಿ ಮಾಡಿರುವುದು ಉಪಯೋಗವಾದರೆ, ಕಾಮಗಾರಿಯ ನೆಪದಲ್ಲಿ ರಸ್ತೆ ತಡೆಗೆ ಕಾರಣವಾಗುವುದು ಎಷ್ಟು ಸರಿ? ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬಂದಿದೆ. ಬೆಳಗ್ಗಿನ ಸಮಯ ಉದ್ಯೋಗ, ಶಾಲೆ, ಕಾಲೇಜುಗಳಿಗೆ ತೆರಳುವವರು ಕಾಮಗಾರಿಯ ಹಿನ್ನೆಲೆಯಲ್ಲಿ ಕೆಲವು ಹೊತ್ತು ಕಂಕನಾಡಿ ವ್ಯಾಪ್ತಿಯ ಬ್ಲಾಕ್‌ನಲ್ಲಿ ಬಾಕಿಯಾಗಿದ್ದರು.

ಕಂಕನಾಡಿ ಪಂಪ್‌ ವೆಲ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಕೆಲವು ಬಾರಿ ನಡೆದಿದೆ. ಸಣ್ಣ ವಾಹನವು ರಿಪೇರಿಗೆಂದು ರಸ್ತೆ ಬದಿ ನಿಂತರೂ ಇಲ್ಲಿ ವಾಹನಗಳ ಸರತಿ ಸಾಲು ಉದ್ದವಿರುತ್ತದೆ. ಕರಾವಳಿ ವೃತ್ತ ಸಮೀಪ ಅಲ್ಲಲ್ಲಿ ಹೊಂಡಗುಂಡಿಗಳಿದ್ದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಈ ಹಿಂದೆ ರಿಪೇರಿ ಮಾಡುವ ಕಾಲದಲ್ಲೂ ಹಲವು ಬಾರಿ ಸಂಚಾರದಟ್ಟಣೆ ಸಮಸ್ಯೆ ಎದುರಾಗಿತ್ತು.

ರಾತ್ರಿ ವೇಳೆ ಕಾಮಗಾರಿ ನಡೆಸಿ
ಹಗಲು ಹೊತ್ತಿನಲ್ಲಿ ಇಂತಹ ಅಗತ್ಯ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳುವ ಬದಲು ರಾತ್ರಿ ಸಮಯದಲ್ಲಿ ಇದರ ಕಾಮಗಾರಿ ಕೈಗೊಂಡರೆ, ವಾಹನಗಳ ಸಂಚಾರಕ್ಕೆ ತಡೆ ಉಂಟಾಗುವುದು ಕಡಿಮೆ ಆಗಬಹುದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.