ಸಮ್ಮೇಳನದ ನಿರ್ಣಯಗಳ ಜಾರಿ ಮಾಡಿ


Team Udayavani, Feb 8, 2018, 3:16 PM IST

cham-.jpg

ಹನೂರು: ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಸಾಕಾರಗೊಳಿಸಲು ಮತ್ತು ಕನ್ನಡದ ಕಡೆಗೆ ಜನರನ್ನು ಆಕರ್ಷಿಸುವಂತಹ ಸರ್ಕಾರಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಸಮ್ಮೇಳನದ ಸರ್ವಾಧ್ಯಕ್ಷ ಸಿ.ನಾಗರಾಜು ಅಭಿಪ್ರಾಯಪಟ್ಟರು.

ಪಟ್ಟಣದ ವಾಸವಿ ಮಹಲ್‌ ಕಲ್ಯಾಣ ಮಂಟಪದ ಮೀಣ್ಯ ಗುರುಸಿದ್ಧ ವೇದಿಕೆಯಲ್ಲಿ ಏರ್ಪಡಿಸಿದ್ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ನಾಗರಾಜು, ಕೊಳ್ಳೇಗಾಲ ತಾಲೂಕು ಗಡಿಯಂಚಿನಲ್ಲಿದ್ದು, ತಮಿಳುನಾಡಿನ ಪ್ರಭಾವಕ್ಕೆ ಒಳಗಾಗಿದ್ದರೂ ಕನ್ನಡ ಅಭಿವೃದ್ಧಿಯಾಗುತ್ತಿದೆ ಇದು ಹೆಮ್ಮೆ ಪಡುವಂತಹ ವಿಚಾರ. ಕನ್ನಡದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿಯೊಬ್ಬ ಕನ್ನಡಿಗನೂ ಸ್ವಯಂಪ್ರೇರಿತವಾಗಿ ಮಾಡ ಬೇಕು. ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣಕ್ಕೆ ಪ್ರಾತಿನಿಧ್ಯ ನೀಡಿ ಕನ್ನಡದಲ್ಲೇ ಶಿಕ್ಷಣ ನೀಡುವಂತಾಗಬೇಕು ಎಂದು ತಿಳಿಸಿದರು. 

ಸಮ್ಮೇಳನದ ನಿರ್ಣಯಗಳು: ಕೊಳ್ಳೇಗಾಲ ಮತ್ತು ಹನೂರು ಕಸಾಪ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸ್ವಂತ ಕಟ್ಟಡ ಕಲ್ಪಿಸಬೇಕು, ಸಭಾಭವನ, ಗ್ರಂಥಾಲಯಗಳ ನಿರ್ಮಾಣಕ್ಕಾಗಿ ಸ್ವಂತ ಕಟ್ಟಡ ಹೊಂದಲು ಅಗತ್ಯ ನಿವೇಶನ ಮಂಜೂರು ಮಾಡಿಕೊಡಬೇಕು. 

ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರವಾಸಿಗಳು ಮತ್ತು ಸ್ಥಳೀಯರ ಅನುಕೂಲಕ್ಕಾಗಿ ಸುಸಜ್ಜಿತ ಗ್ರಂಥಾಲಯ ಪ್ರಾರಂಭಿಸಬೇಕು, ಧರ್ಮಸ್ಥಳ ಮಾದರಿಯಲ್ಲಿ ವಸ್ತು ಸಂಗ್ರಹಾಲಯ ಪ್ರಾರಂಭಿಸಬೇಕು. ಕ್ಷೇತ್ರ ವ್ಯಾಪ್ತಿಯ ಗುಂಡಾಲ್‌ ಜಲಾಶಯ ಕೃಷ್ಣರಾಜ ಸಾಗರ ಜಲಶಯಕ್ಕಿಂತಲೂ ರಮಣೀಯ ಪ್ರವಾಸಿ ತಾಣವಾಗಿದ್ದು, 2 ಕಡೆ ಬೆಟ್ಟಗುಡ್ಡಗಳಿಂದ ಕೂಡಿದೆ. ಈ ಜಲಾಶಯವನ್ನು ಪ್ರವಾಸಿ ತಾಣವನ್ನಾಗಿ ನಿರ್ಮಾಣ ಮಾಡಬೇಕು, ಅಗತ್ಯ ರಸ್ತೆ ಸಂಪರ್ಕ ಕಲ್ಪಿಸಬೇಕು. 

ತಮಿಳುನಾಡು ರಸ್ತೆ ಸಾರಿಗೆ ಮತ್ತು ಅಂತಾರಾಜ್ಯ ಪರವಾನಗಿ ಪಡೆದ ಖಾಸಗಿ ಬಸ್‌ಗಳಲ್ಲಿ ಕನ್ನಡದ ನಾಮಫ‌ಲಕ ಸಮರ್ಪಕವಾಗಿ ಹಾಕಬೇಕು, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಇಂಗ್ಲಿಷ್‌ ಮತ್ತು ಹಿಂದಿ ಭಾಷೆ ಬಳಕೆಯಾಗುತ್ತಿದ್ದು, ಸಂವಹನ ನಡೆಸಲು ಕನ್ನಡಿಗರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಕನ್ನಡವನ್ನೂ ಬಳಕೆ ಮಾಡಬೇಕು.

ಬ್ಯಾಂಕುಗಳಲ್ಲಿ ಪರಭಾಷಿಗರ ನೌಕರರು ಹೆಚ್ಚಾಗಿದ್ದು, ಕನ್ನಡ ಬಳಕೆ ಮಾಡುತ್ತಿಲ್ಲ, ರಾಜಧಾನಿ ಬೆಂಗಳೂರಿಗೆ ಕನಕಪುರ ಮಾರ್ಗವಾಗಿ ಸಂಪರ್ಕ ರಸ್ತೆ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಾಧ್ಯಾಪಕ ದೊಡ್ಡಲಿಂಗೇಗೌಡ ನಿರ್ಣಯಗಳನ್ನು ಮಂಡಿಸಿದರು. 

ವಿವಿಧ ಸಾಧಕರಿಗೆ ಸನ್ಮಾನ: ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ರಾಮಾಪುರ ರಾಜೇಂದ್ರ, ಮಾಂಬಳ್ಳಿ ಅರುಣ್‌ಕುಮಾರ್‌, ಪಾಳ್ಯ ಪುಟ್ಟಬಸಮ್ಮ, ಜಾಗೇರಿ ಪಳನಿಸ್ವಾಮಿ, ಮುಳ್ಳೂರು ಉಷಾರಾವ್‌, ಭಾರತೀಯ ಸೇನೆಯ ಹೂವಯ್ಯ, ಮಾರ್ಟಳ್ಳಿ ಸೇಸುನಾಥನ್‌, ಬಂಡಳ್ಳಿ ನಾಗಲಿಂಗಪ್ಪ ಅವರನ್ನು ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಸಾಹಿತಿ ಹನೂರು ಚೆನ್ನಪ್ಪ, ಡಾ.ಶಿವರುದ್ರಸ್ವಾಮಿ, ಕಸಾಪ ತಾಲೂಕು ಅಧ್ಯಕ್ಷ ನಂಜುಂಡಸ್ವಾಮಿ, ಹನೂರು ವಲಯದ ಅಧ್ಯಕ್ಷ ಶ್ರೀನಿವಾಸ್‌ನಾಯ್ಕ, ಕನ್ನಡಪರ ಸಂಘಟನೆಗಳ ಮುಖಂಡರು ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.