ಅಯೋಧ್ಯೆ ಸಾಧಾರಣ ಭೂ ವಿವಾದ: ಸುಪ್ರೀಂಕೋರ್ಟ್
Team Udayavani, Feb 9, 2018, 9:10 AM IST
ಹೊಸದಿಲ್ಲಿ: ದಶಕಗಳಿಂದ ಚಾಲ್ತಿಯಲ್ಲಿರುವ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದ ಪ್ರಕರಣವು ಸಾಧಾ ರಣ ಭೂವಿವಾದವಾಗಿದ್ದು, ಅದನ್ನು ಸಹಜ ಕಲಾಪದಂ ತೆಯೇ ವಿಚಾರಣೆಗೊಳಪಡಿಸಿ ಇತ್ಯರ್ಥಪಡಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣದ ಅಂತಿಮ ಹಂತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ, ಗುರುವಾರ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಯಿತು. ಈ ವೇಳೆ, ಅಲಹಾಬಾದ್ ಹೈಕೋರ್ಟ್ನಲ್ಲಿ ಈ ಪ್ರಕರಣವಿದ್ದಾಗ, ಪ್ರಕರಣದ ಕಕ್ಷಿದಾರರಾಗಿದ್ದವರೇ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲೂ ಕಕ್ಷಿದಾರರಾಗಿರಬೇಕೆಂದು, ಇತ್ತೀಚೆಗೆ ಪ್ರಕರಣದ ಬಗ್ಗೆ ವಿವಿಧ ನಾಗರಿಕರು, ಸಂಸ್ಥೆಗಳು ಸಲ್ಲಿಸಿರುವ ಮನವಿಗಳನ್ನು ಆನಂತರ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಸೂಚಿಸಿತು. ಅಲ್ಲದೆ, ಹೊಸ ಕಕ್ಷಿದಾರರು ಸಲ್ಲಿಸಿರುವ ದಾಖಲೆಗಳನ್ನು ಇಂಗ್ಲೀಷ್ಗೆ ತರ್ಜುಮೆ ಮಾಡಿ 2 ವಾರಗಳ ಒಳಗೆ ನೀಡುವಂತೆ ನ್ಯಾಯಪೀಠ ಸೂಚಿಸಿತು. ನಂತರ ಮುಂದಿನ ವಿಚಾರಣೆ ಮಾ.14ಕ್ಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ