ರಾಮಾಯಣ ವಿವಾದ


Team Udayavani, Feb 9, 2018, 8:15 AM IST

43.jpg

ಹೊಸದಿಲ್ಲಿ: ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ ಅವರ ಕುರಿತು ಪ್ರಧಾನಿ ಮೋದಿ ಅವರು ನೀಡಿದ ಹೇಳಿಕೆ ಗುರುವಾರ ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಜತೆಗೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕೆಂದು ಟಿಡಿಪಿ ಸದಸ್ಯರೂ ನಿರಂತರ ಪ್ರತಿಭಟನೆ ನಡೆಸಿದ ಕಾರಣ, ಮೇಲ್ಮನೆಯು ಗದ್ದಲದ ಗೂಡಾಗಿ ಪರಿಣಮಿಸಿತು.

ಮಾಜಿ ಸದಸ್ಯರಾದ ಫ್ರೀಡಾ ಟೋಪ್ನೊ ಅವರ ನಿಧನ ಹಿನ್ನೆಲೆಯಲ್ಲಿ ಕಲಾಪ ಆರಂಭವಾಗುತ್ತಲೇ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದಾದ ಕೂಡಲೇ ಕಾಂಗ್ರೆಸ್‌ ಸದಸ್ಯರು ಆಸನದಿಂದ ಎದ್ದು, ಚೌಧರಿ ವಿರುದ್ಧದ ಮೋದಿ ಹೇಳಿಕೆ ಖಂಡಿಸಿ ಪ್ರತಿಭಟಿಸತೊಡಗಿದರು. ಕೊನೆಗೆ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಸಂಸತ್‌ಭವನದ ಹೊರಗೆ ಮಾತನಾಡಿದ ಚೌಧರಿ, “ಪ್ರಧಾನಿ ಮೋದಿ ಮಹಿಳೆಯರ ಸ್ಥಾನಮಾನಕ್ಕೆ ಅವಹೇಳನ ಮಾಡಿದ್ದಾರೆ. ನಾನು ಇಬ್ಬರು ಹೆಣ್ಣುಮಕ್ಕಳ ತಾಯಿ ಎಂಬುದು ನೆನಪಿರಲಿ. ನಗುವಿಗೇನೂ ಜಿಎಸ್‌ಟಿ ಹಾಕಿಲ್ಲ ತಾನೇ? ನಾನು ನಗುವುದನ್ನು ಮುಂದುವರಿಸುತ್ತೇನೆ,’ ಎಂದಿದ್ದಾರೆ.

ಏತನ್ಮಧ್ಯೆ, ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ಚೌಧರಿ ಅವರ ಕಾಲೆಳೆಯುವಂತೆ ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್‌ ಮಾಡಿದ್ದು, ನಂತರ ಡಿಲೀಟ್‌ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಚೌಧರಿ, “ಸಚಿವ ರಿಜಿಜು ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ’ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ನಾಯಕ ವಿನಯ್‌ ಸಹಸ್ರಬುದ್ಧೆ ಅವರು, ಪ್ರಧಾನಿ ಅವರಿಗೆ ಅಗೌರವ ತೋರಿಸಿದ್ದಕ್ಕಾಗಿ ಚೌಧರಿ ವಿರುದ್ಧವೂ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದಿದ್ದಾರೆ.

ಬುಧವಾರ ಪ್ರಧಾನಿ ಮಾತನಾಡುತ್ತಿದ್ದಾಗ, ಚೌಧರಿ  ಜೋರಾಗಿ ನಕ್ಕಿದ್ದರು. ಆಗ ಮೋದಿ “ರೇಣುಕಾ ಚೌಧರಿಗೆ ಏನೂ  ಹೇಳಬೇಡಿ. ರಾಮಾಯಣ ಧಾರಾವಾಹಿಯ ನಂತರ ಈಗ ಇಂಥದ್ದೊಂದು ನಗು ಕೇಳಲು ಸಿಕ್ಕಿದೆ. ಅದು ನಮ್ಮ ಸೌಭಾಗ್ಯ,’ ಎಂದಿದ್ದರು. 

ಪ್ರತಿಪಕ್ಷಗಳ ಆಕ್ಷೇಪ: ಇನ್ನು, ಲೋಕಸಭೆಯಲ್ಲಿ ಗುರುವಾರ ಬಜೆಟ್‌ ಕುರಿತ ಚರ್ಚೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷಗಳು, ಕೇಂದ್ರ ಸರ್ಕಾರವು ಕೃಷಿ, ಶಿಕ್ಷಣ, ಆರೋಗ್ಯಸೇವೆ ಮತ್ತು ಮೂಲಸೌಕರ್ಯಕ್ಕೆ ಒತ್ತು ನೀಡಿಲ್ಲ ಎಂದು ಆರೋಪಿಸಿದವು. ಎನ್‌ಡಿಎ ಮಿತ್ರಪಕ್ಷ ಅಕಾಲಿ ದಳದ ಪ್ರೇಮ್‌ ಸಿಂಗ್‌ ಇದಕ್ಕೆ ಧ್ವನಿಗೂಡಿಸಿ, ಕೃಷಿ ಕ್ಷೇತ್ರದ ಸಂಕಷ್ಟಗಳ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದರು. 

2014ರಿಂದ ಈವರೆಗೆ 54 ಖಾಸಗಿ ಚಾನೆಲ್‌ಗ‌ಳು ಕಾರ್ಯಕ್ರಮ ಮತ್ತು ಜಾಹೀರಾತು ಸಂಹಿತೆಯನ್ನು ಉಲ್ಲಂ ಸಿವೆ ಎಂದು ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. 

ನನ್ನನ್ನು ಶೂರ್ಪನಖೀಗೆ ಹೋಲಿಕೆ ಮಾಡಿರುವುದು ಎಷ್ಟು ಸರಿ? ಈ ರೀತಿ ಮಾಡುವ ಮೂಲಕ ಬಿಜೆಪಿ ನಾಯಕರು ಇಡೀ ದೇಶದ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ನಾನು ಇಬ್ಬರು ಹೆಣ್ಣುಮಕ್ಕಳ ತಾಯಿ ಎಂಬುದನ್ನೂ ಅವರು ಮರೆತಿದ್ದಾರೆ. ಪ್ರಧಾನಿ ಅವರು ಈ ರೀತಿ ಅವಹೇಳನ ಮಾಡಿರುವುದು ದುರದೃಷ್ಟಕರ.
ರೇಣುಕಾ ಚೌಧರಿ, ಕಾಂಗ್ರೆಸ್‌ ನಾಯಕಿ

ಚೌಧರಿ ಅವರು ನಗುವಾಗ ನಾನೂ ಸದನದಲ್ಲಿದ್ದೆ. ಅವರು ಪ್ರಧಾನಿ ಮೋದಿ ಅವರ ಬಗ್ಗೆ ಸಮಂಜಸವಲ್ಲದ ಪದ ಬಳಕೆ ಮಾಡುತ್ತಿದ್ದುದೂ ನನಗೆ ಕೇಳಿತು. ಅವರು ಮಾತ್ರ ಆ ರೀತಿ ಮಾತನಾಡಬಹುದು, ಆದರೆ ಇನ್ನೊಬ್ಬರು ಅವರ ಬಗ್ಗೆ ಮಾತನಾಡಿದರೆ, “ಮಹಿಳೆ’ ಎಂಬ ಅಸ್ತ್ರವನ್ನು ಬಳಸಿಕೊಳ್ಳಲಾಗುತ್ತದೆ.
 ಸ್ಮತಿ ಇರಾನಿ, ಕೇಂದ್ರ ಸಚಿವೆ

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.