Feb 10-12 : ಉಡುಪಿಯಲ್ಲಿ ಫ‌ಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ


Team Udayavani, Feb 9, 2018, 11:00 PM IST

Flower-9-2.jpg

ಉಡುಪಿ: ಜಿಲ್ಲಾಡಳಿತ, ಜಿ.ಪಂ., ತೋಟಗಾರಿಕೆ ಇಲಾಖೆ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು, ಉಡುಪಿ ಜಿಲ್ಲಾ ಕೃಷಿಕ ಸಮಾಜ ಇವರ ಸಹಯೋಗದಲ್ಲಿ ದೊಡ್ಡಣ್ಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ರೈತ ಸೇವಾ ಕೇಂದ್ರದ (ಪುಷ್ಪ ಹರಾಜು) ಆವರಣದಲ್ಲಿ ಫೆ. 10ರಿಂದ 12ರ ವರೆಗೆ ಉಡುಪಿ ಜಿಲ್ಲಾಮಟ್ಟದ ಫ‌ಲಪುಷ್ಪ ಪ್ರದರ್ಶನ ಹಾಗೂ ರೈತ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಫೆ. 10ರ ಅಪರಾಹ್ನ 3 ಗಂಟೆಗೆ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಫ‌ಲಪುಷ್ಪ ಪ್ರದರ್ಶನ ಉದ್ಘಾಟಿಸಲಿದ್ದಾರೆ ಎಂದು ಉಡುಪಿ ಜಿ.ಪಂ. ಸಿಇಒ ಶಿವಾನಂದ ಕಾಪಶಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ತೋಟಗಾರಿಕೆ ಇಲಾಖಾಧಿಕಾರಿ ಭುವನೇಶ್ವರಿ ಉಪಸ್ಥಿತರಿದ್ದರು.

ಸಾವಯವ ತಾರಸಿ ತೋಟ ವಿಶೇಷಾಕರ್ಷಣೆ
ದೊಡ್ಡಣಗುಡ್ಡೆಯಲ್ಲಿರುವ ತೋಟಗಾರಿಕೆ ಇಲಾಖೆಯ ಕಟ್ಟಡದ ತಾರಸಿಯಲ್ಲಿ ಸಾವಯವ ಕೃಷಿ ನಡೆಸಲಾಗುತ್ತಿದ್ದು, ಇದು ವಿಶೇಷ ಆಕರ್ಷಣೆಯಾಗಿದೆ. ಎಸ್‌ಎಲ್‌ಆರ್‌ಎಂನವರು ಸಾವಯವ ತರಕಾರಿ ತೋಟವನ್ನು ನಿರ್ವಹಿಸುತ್ತಿದ್ದಾರೆ. ಸರಿಸುಮಾರು 350 ಸೆಗಣಿ ಮಿಶ್ರಿತ ಬುಟ್ಟಿಗಳನ್ನು ಇಟ್ಟು ವಿವಿಧ ತರಕಾರಿ ಬೆಳೆಗಳನ್ನು ತಾರಸಿಯಲ್ಲಿಯೇ ಬೆಳೆಸಲಾಗಿದೆ. ಇದರ ವೀಕ್ಷಣೆ, ಖರೀದಿಗೂ ಅವಕಾಶ ಕಲ್ಪಿಸಲಾಗಿದೆ.


ಫ‌ಲಪುಷ್ಪಗಳ ವಿಶೇಷ ಆಕರ್ಷಣೆಗಳು

12 ಅಡಿ ಎತ್ತರದ ಶಿವಲಿಂಗಮೂರ್ತಿಗೆ ಕೆಂಪು, ಬಿಳಿ, ಹಳದಿ, ಗುಲಾಬಿ ಬಣ್ಣದ 3,100 ಗುಲಾಬಿ ಹೂವುಗಳ ಹಾಗೂ 75 ಕೆ.ಜಿ. ಚೆಂಡು ಹಾಗೂ ಸೇವಂತಿಗೆ ಪುಷ್ಪಗಳಿಂದ ಅಲಂಕಾರ.

5 ಅಡಿ ಎತ್ತರದ ನಂದಿ ಮೂರ್ತಿಗೆ 3,600 ಜರ್ಬೆರಾ ಹೂವುಗಳಿಂದ ಅಲಂಕಾರ.

ವಿವಿಧ ಪ್ರಾಣಿಗಳಿಗೆ 4,000 ಕಾರ್ನೇಷನ್‌ ಹೂವುಗಳಿಂದ, 1,000 ಆಲ್‌ಸ್ಟ್ರೋಮೇರಿಯನ್‌ ಲಿಲ್ಲಿ ಹೂವುಗಳಿಂದ ಮತ್ತು 25 ಕೆ.ಜಿ. ಮೆರಿಗೋಲ್ಡ್‌ ಕ್ರೈಸಾಂತೆಮಮ್‌ ಪುಷ್ಪಗಳಿಂದ ಆನೆ, ಚಿಟ್ಟೆ ಹಾಗೂ ಹುಲಿಗಳ ಆಕೃತಿಗೆ ಪುಷ್ಪ ಜೋಡಣೆ.

ವಿವಿಧ ಜಾತಿಯ ಪಾಪಸು ಕಳ್ಳಿಗಳ ಅಲಂಕಾರಿಕ ಜೋಡಣೆ ಹಾಗೂ ವರ್ಟಿಕಲ್‌ ಗಾರ್ಡನ್‌.

016 ಜಾತಿಯ ವಾರ್ಷಿಕ ಹಾಗೂ ಬಹುವಾರ್ಷಿಕ ವಿವಿಧ ಅಲಂಕಾರಿಕ ಪುಷ್ಪ ಕುಂಡಗಳ ಪ್ರದರ್ಶನ. 

ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಬೆಳೆಸಿದ ಗಿಡಗಳ ಪ್ರದರ್ಶನ ಹಾಗೂ ಇಲಾಖಾ ದರದಲ್ಲಿ ಮಾರಾಟ.

ಮಟ್ಟುಗುಳ್ಳ ಹಾಗೂ ಉಡುಪಿ ಮಲ್ಲಿಗೆ ಬೆಳೆ ಸಂಗ್ರಹಾಲಯ ವೀಕ್ಷಣೆಗೆ ಅವಕಾಶ.

ಉಡುಪಿ ಹೂವುಗಳು, ಕ್ಯಾಕ್ಟಸ್‌ಗಳ ಪ್ರದರ್ಶನ, ಗಿಡಗಳ ಮಾರಾಟ ಇರಲಿದೆ.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.