ನೆಚ್ಚಿನ ನಟನೊಂದಿಗೆ ಮಾತನಾಡಿ ಕೊನೇ ಆಸೆ ತೀರಿಸಿಕೊಂಡ


Team Udayavani, Feb 11, 2018, 12:00 PM IST

nechchina.jpg

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಕಟ್ಟಾ ಅಭಿಮಾನಿಯೋರ್ವ ದರ್ಶನ್‌ ಅವರೊಂದಿಗೆ ಶುಕ್ರವಾರ  ವಿಡಿಯೋಕಾಲ್‌ನಲ್ಲಿ ಮಾತನಾಡಿ ತಮ್ಮ ಕೊನೇ ಆಸೆ ತೀರಿಸಿಕೊಂಡು ಶನಿವಾರ ಮೃತಪಟ್ಟಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಿವಮೊಗ್ಗದ ರೇವಂತ್‌ ಮೃತಪಟ್ಟವರು. ದರ್ಶನ್‌ ಅವರ ಭಾರೀ ಅಭಿಮಾನಿಯಾದ ರೇವಂತ್‌ ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ಮನೆಯವರಿಗೆ ಇದು ಗೊತ್ತಿದ್ದರೂ ರೇವಂತ್‌ ಅವರಿಗೆ ಮಾತ್ರ ಈ ವಿಷಯ ಮೊದಲಿಗೆ ತಿಳಿದಿರಲಿಲ್ಲ. ವೈದ್ಯರ ಸಲಹೆ ಮೇರೆಗೆ ಕಾಲು ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ  ದಾಖಲಿಸಲಾಗಿದೆ ಎಂದು ರೇವಂತ್‌ಗೆ ತಿಳಿಸಲಾಗಿತ್ತು. ಐಟಿಐ ಮುಗಿಸಿದ ನಂತರ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ರೇವಂತ್‌, ಕಾಲು ನೋವು ಎಂದು ಶಿವಮೊಗ್ಗಕ್ಕೆ ವಾಪಸ್‌ ಬಂದಿದ್ದರು.

ವೈದ್ಯರ ಬಳಿ ಹೋದಾಗ ಮೂಳೆ ಕ್ಯಾನ್ಸರ್‌ ಇರುವುದು ಗೊತ್ತಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಕುಟುಂಬದವರು ರೇವಂತ್‌ ಅವರಿಗೆ ಈ ವಿಷಯ ಗೊತ್ತಾಗದಂತೆ ನೋಡಿಕೊಂಡಿದ್ದರು. ದರ್ಶನ್‌ ಅವರ ಭಾರೀ ಅಭಿಮಾನಿಯಾದ ರೇವಂತ್‌  ಪ್ರತಿ ವರ್ಷ ದರ್ಶನ್‌ ಜನ್ಮದಿನದಂದು ಬೆಂಗಳೂರಿಗೆ ತೆರಳಿ ಶುಭಾಶಯ ಕೋರುತ್ತಿದ್ದರು.

ಈ ವರ್ಷ ಫೆ. 16 ರಂದು ನೆಚ್ಚಿನ ನಟನಿಗೆ ಜನ್ಮ ದಿನದ ಶುಭಾಶಯ ಕೋರಲು ಬೆಂಗಳೂ ರಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂಬ ಚಿಂತೆಯಲ್ಲಿದ್ದರು. ತಾವು ದರ್ಶನ್‌ ಅವರೊಂದಿಗೆ ಮಾತನಾಡಬೇಕೆಂದು ಹಠ ಹಿಡಿದರು. ವಿಷಯ ತಿಳಿದ ದರ್ಶನ್‌ ಶುಕ್ರವಾರ ಸ್ನೇಹಿತರ ಮೊಬೈಲ್‌ಗೆ ವಿಡಿಯೋ ಕಾಲ್‌ ಮಾಡಿ ರೇವಂತ್‌ ಮತ್ತು ಆತನ  ತಾಯಿಯೊಂದಿಗೆ ಮಾತನಾಡಿ ಧೈರ್ಯ ತುಂಬಿದ್ದರು. 

ಶೀಘ್ರದಲ್ಲೇ ಶಿವಮೊಗ್ಗಕ್ಕೆ ಬಂದು ಭೇಟಿ ಮಾಡುತ್ತೇನೆಂದು ಹೇಳಿದ್ದರು. ದರ್ಶನ್‌ ಅವರೊಂದಿಗೆ  ಮಾತನಾಡುವ ವೇಳೆಯಲ್ಲಿ ರೇವಂತ್‌ ಅವರಿಗೆ ಕ್ಯಾನ್ಸರ್‌ ಇರುವ ವಿಷಯ ತಿಳಿಸಬೇಡಿ ಎಂದು ಮುಂಚಿತವಾಗಿಯೇ ಮನವಿ ಮಾಡಲಾಗಿತ್ತು. ನೆಚ್ಚಿನ  ನಟನೊಂದಿಗೆ ಮಾತನಾಡಿದ ಬಳಿಕ ರೇವಂತ್‌ ಖುಷಿಯಾಗಿದ್ದರು. ಆದರೆ ತಮ್ಮ ಆಸೆ ತೀರಿಸಿಕೊಂಡ ರೇವಂತ್‌ ಶನಿವಾರ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

43

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

43

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.