ಅಖೀಲ ಭಾರತ ಜಾನಪದ ಕಲಾ ಪರಿಷತ್ತಿನ ಸಾರಥ್ಯದಲ್ಲಿ ಲೋಕ ಕಲಾ ಮಹೋತ್ಸವ


Team Udayavani, Feb 11, 2018, 9:50 PM IST

Folk-11-2.jpg

ಕಾಸರಗೋಡು: ಅಖೀಲ ಭಾರತ ಜಾನಪದ ಮತ್ತು ಬುಡಕಟ್ಟು ಕಲಾ ಪರಿಷತ್ತಿನ ನೇತೃತ್ವದಲ್ಲಿ  2018ರ ಮೊದಲಾರ್ಧದಲ್ಲಿ ದಕ್ಷಿಣ ಭಾರತೀಯ ಮಟ್ಟದ ಅಖೀಲ ಭಾರತ ಲೋಕಕಲಾ ಮಹೋತ್ಸವ ನಡೆಯಲಿದ್ದು, ಇದರ ಪ್ರಥಮ ಕಾರ್ಯಕ್ರಮ ಕಾಸರಗೋಡಿನ ಎಡನೀರು ಶ್ರೀಮಠದಲ್ಲಿ ಫೆ. 17ರಂದು ನಡೆಯುವ ಮೂಲಕ ಲೋಕಕಲಾ ಮಹೋತ್ಸವಕ್ಕೆ ನಾಂದಿಯಾಗಲಿದೆ. ಭಾರತದ ಅಸ್ಮಿತೆಯ ಪ್ರತೀಕವಾದ ಪ್ರತಿ ರಾಜ್ಯಗಳ ಪ್ರಾದೇಶಿಕ ಜಾನಪದ ಮತ್ತು ಬುಡಕಟ್ಟು ಕಲಾ-ಸಂಸ್ಕೃತಿಗಳನ್ನು ಉದ್ದೀಪಿಸಿ- ಜಾಗೃತಗೊಳಿಸಿ ಅದಕ್ಕೆ ಪುನರುತ್ಥಾನ ನೀಡುತ್ತಾ ತನ್ಮೂಲಕ ಭಾರತದ ವಿವಿಧತೆಯನ್ನು ಏಕತೆಯ ಏಕಸೂತ್ರದೊಳಗೆ ನೇಯುವುದು ಲೋಕಕಲಾ ಮಹೋತ್ಸವದ ಪ್ರಮುಖ ಉದ್ದೇಶವಾಗಿದೆ.

ಫೆ. 17ರಂದು ಎಡನೀರು ಶ್ರೀ ಮಠದ ಸಹಕಾರದೊಂದಿಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕೇರಳ, ತಮಿಳ್ನಾಡು, ಆಂಧ್ರಪ್ರದೇಶ – ತೆಲಂಗಾಣ, ಪಾಂಡಿಚೇರಿ ಮತ್ತು ಕರ್ನಾಟಕದ ವೈವಿಧ್ಯ ಜಾನಪದ ಕಲಾಪ್ರಕಾರದ ಪ್ರದರ್ಶನ, ಪ್ರಾತ್ಯಕ್ಷಿಕೆ ಸಹಿತ ಕಲಾ ಸಂವಾದಗಳು ನಡೆಯಲಿದ್ದು, ಸುಮಾರು 200ಕ್ಕೂ ಅಧಿಕ ಕಲಾವಿದರು ಒಂದೇ ವೇದಿಕೆಯಲ್ಲಿ ಪಾಲ್ಗೊಳ್ಳುವರು.

ಫೆ. 17ರಂದು ಎಡನೀರು ಶ್ರೀ ಮಠದ ವಿಶೇಷ ಸಭಾಂಗಣದಲ್ಲಿ, ಶ್ರೀ ಎಡನೀರು ಕೇಶವಾನಂದ ಭಾರತೀ ಶ್ರೀ ಪಾದಂಗಳವರಿಂದ ಉದ್ಘಾಟಿಸಲ್ಪಟ್ಟು ನಾಂದಿಯಾಗುವ ಸಮಾರಂಭ, ಎರಡನೇ ದಿನ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರು ಸಮೀಪದಲ್ಲಿ  ಸಮಾರೋಪಗೊಳ್ಳಲಿದೆ. ದೇಶದ ಪ್ರಸಿದ್ಧ ಜಾನಪದ ಕಲಾ ತಜ್ಞರು, ಖ್ಯಾತ ಕಲಾವಿದರು, ಚಿಂತಕರು ಸಹಿತ ರಾಷ್ಟ್ರೀಯ ಮಟ್ಟದ ಪ್ರಸಿದ್ಧರು ಪಾಲ್ಗೊಳ್ಳಲಿರುವರು. ರಾಷ್ಟ್ರೀಯ ಮಟ್ಟದ ಜಾನಪದ-ಬುಡಕಟ್ಟು ಕಲಾ ಸಂಸ್ಕೃತಿಯ ಅತ್ಯಪರೂಪದ ಈ ಉತ್ಸವ ಕಾಸರಗೋಡಿನಲ್ಲಿ ನಡೆಯುವುದು ಮತ್ತು ದಕ್ಷಿಣ ಭಾರತದ  6ರಾಜ್ಯಗಳಲ್ಲಿ ನಡೆಯುವ ಉತ್ಸವಕ್ಕೆ ಕಾಸರಗೋಡಿನ ನೆಲ ಉದ್ಘಾಟನಾ ವೇದಿಕೆಯಾಗುವುದು ಇದೇ ಮೊದಲ ಬಾರಿಯಾಗಿದೆ. ಎಡನೀರಿನಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭಕ್ಕೆ ತುಳುವೆರೆ ಆಯನೊ ಕೂಟೋ ಬದಿಯಡ್ಕ ಮತ್ತು ಬೊಳಿಕೆ ಜಾನಪದ ಕಲಾತಂಡ ಸಹಕಾರ ನೀಡಲಿವೆ.

ಅಖೀಲ ಭಾರತ ಲೋಕಕಲಾ ಮಹೋತ್ಸವ ಸರಣಿ ಕಾರ್ಯಕ್ರಮವಾಗಿದ್ದು, ಮಾರ್ಚ್‌ 3-4ರಂದು ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ವ್ರಾವಕಂಡ ಎಂಬಲ್ಲಿ ಎರಡನೇ ಕಾರ್ಯಕ್ರಮ ಮತ್ತು ಮಾರ್ಚ್‌ 9-10ರಂದು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್‌ ಎಂಬಲ್ಲಿ ಮೂರನೇ ಕಾರ್ಯಕ್ರಮ ಜರಗಲಿದೆ. 

4ನೇ ಕಾರ್ಯಕ್ರಮ ಮಾರ್ಚ್‌ 11ರಂದು ಕರ್ನಾಟಕದ ಬೀದರ್‌, 5ನೇ ಕಾರ್ಯಕ್ರಮ 17-18ರಂದು ತಮಿಳ್ನಾಡು, 6ನೇ ಕಾರ್ಯಕ್ರಮ 20-21ರಂದು ಪಾಂಡಿಚೇರಿ ಯೂನಿವರ್ಸಿಟಿಯಲ್ಲಿ ನಡೆಯಲಿದೆ.

ಪ್ರಸ್ತುತ ಸಮಾರಂಭದೊಂದಿಗೆ ಅಖೀಲ ಭಾರತ ಮಟ್ಟದ ಜಾನಪದ ಮತ್ತು ಬುಡಕಟ್ಟು ಕಲಾ ಪರಿಷತ್ತಿನ ಕಾಸರಗೋಡು ಘಟಕ ಅಸ್ತಿತ್ವಕ್ಕೆ ಬರಲಿದೆ. ಈ ಮೂಲಕ ಈ ನೆಲದ ಜಾನಪದ ಕಲಾ ಕಾರ್ಯಕರ್ತರನ್ನು, ಕಲಾವಿದರನ್ನು ಸಂಯೋಜಿಸಿ-ಸಂಘಟಿಸುವ ಕೆಲಸ ನಡೆಯಲಿದೆ. ಕಲೆ ಮತ್ತು ಕಲಾವಿದರ ಅಭ್ಯುದಯ ದೃಷ್ಟಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ಪರಿಷತ್ತಿನ ಉದ್ಘಾಟನ ಸಮಾರಂಭದಲ್ಲಿ ಕಾಸರಗೋಡು   ಜಿಲ್ಲೆಯ ಜಾನಪದ ಮತ್ತು ಬುಡಕಟ್ಟು ಸಹಿತ ಎಲ್ಲಾ ಕಲಾಕ್ಷೇತ್ರದ ಕಾರ್ಯಕರ್ತರು ಮತ್ತು ಪ್ರತಿನಿಧಿಗಳು  ಪಾಲ್ಗೊಳ್ಳಬೇಕೆಂದು ಅಪೇಕ್ಷಿಸುತ್ತೇವೆ.

ಈ ಕುರಿತು ವಿವರಿಸಲು ಕಾಸರಗೋಡು ಪ್ರಸ್‌ ಕ್ಲಬ್ಬಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಖೀಲ ಭಾರತೀಯ ಜಾನಪದ ಮತ್ತು ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ಜೋಗಿಲಾಲ್‌ ಸಿದ್ಧರಾಜು, ಕೇರಳ ವಿಭಾಗದ ಸಂಚಾಲಕ-ಸಂಯೋಜಕರಾದ  ಅನಿಲ್‌ ಕುಮಾರ್‌, ಡಾ| ರಾಜೇಶ್‌ ಆಳ್ವ ಬದಿಯಡ್ಕ, ಪತ್ರಕರ್ತ  ಎಂ.ನಾ. ಚಂಬಲ್ತಿಮಾರ್‌, ಹರ್ಷ ರೈ ಪುತ್ರಕಳ, ಉತ್ಸವ ಸಮಿತಿ ಗೌರವಾಧ್ಯಕ್ಷ ಜಯರಾಮ ಮಂಜತ್ತಾಯ ಎಡನೀರು ಮಠ, ಸೂರ್ಯ ಮಾಸ್ತರ್‌ ಎಡನೀರು, ವಸಂತ ಅಜಕ್ಕೋಡು ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಕಲೆಯ ಪುನರುತ್ತೇಜನ ಪರಿಷತ್ತಿನ ಉದ್ದೇಶ
ಯಾವುದೇ ಒಂದು ನಾಡಿನ ಸಾಂಸ್ಕೃತಿಕ ಚರಿತ್ರೆ  ಅಡಗಿರುವುದು ಅಲ್ಲಿನ ಜನಪದ – ಬುಡಕಟ್ಟು ಸಂಸ್ಕೃತಿಯ ಕಲೆ ಮತ್ತು ಪ್ರದರ್ಶನಗಳಲ್ಲಿ ಎಂಬುದು ನಿರ್ವಿವಾದಿತ ವಿಚಾರ. ಆದರೆ ಕೇರಳಕ್ಕೆ ಸೇರ್ಪಡೆಗೊಂಡ ಕಾಸರಗೋಡಿನಲ್ಲಿ ಹತ್ತು-ಹಲವು ಭಾಷೆಗಳ ಮೂಲಕ ಜನಪದ-ಬುಡಕಟ್ಟು ಆಚಾರ ಅನುಷ್ಠಾನ ಸಹಿತ ಸಂಸ್ಕೃತಿಗಳು ಅಸ್ತಿತ್ವ ಕಾಪಾಡಲು ಹೆಣಗಾಡುತ್ತಿವೆ. ದೇಶದಲ್ಲಿ ಜನಪದ ಸಂಸ್ಕೃತಿ ಪೋಷಿಸಲು ಕೇಂದ್ರ ಸರಕಾರ ಕೋಟ್ಯಂತರ ರೂ. ವ್ಯಯಿಸುತ್ತಿದೆಯಾದರೂ ಅದು ತಳಮಟ್ಟಕ್ಕೆ ತಲುಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಕಲಾ ಪ್ರೋತ್ಸಾಹ ಅನುದಾನ, ಕಲಾವಿದರಿಗೆ ರಾಷ್ಟ್ರೀಯ ಸರಾಸರಿಯ ಪಿಂಚಣಿ, ಪ್ರತಿ ಕಲಾಮಂಡಳಿಗಳಿಗೆ ಉದ್ಯೋಗ ಖಾತರಿ ಮಾದರಿಯಲ್ಲಿ ಕಲಾ  ಪ್ರದರ್ಶನಗಳಿಗೆ ಅವಕಾಶ, ಕಲೆಯ ಅಭ್ಯುದಯ ಮತ್ತು ಹಿತ ಸಂರಕ್ಷಣೆಗಾಗಿ ವೈವಿಧ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ, ಕಲಾವಿದರ ಹಿತರಕ್ಷಣೆಗಳೇ ಮೊದಲಾದವು ಪರಿಷತ್ತಿನ ಉದ್ದೇಶವಾಗಿದೆ. ಪಾರಂಪರಿಕ ಕಲೆ ಮತ್ತು ಕಲಾವಲಂಬಿ ಜನತೆಯನ್ನು ಕಲೆಯ ಪುನರುತ್ತೇಜನಕ್ಕಾಗಿ ಪ್ರೋತ್ಸಾಹಿಸಿ,  ದೇಶದ ಜನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೈದಾಟಿಸುವುದು ಮತ್ತು ಜಾನಪದ-ಬುಡಕಟ್ಟು ಕಲಾ ಸಂಸ್ಕೃತಿಗಳನ್ನು ದಾಖಲಿಸಿ, ಇತಿಹಾಸಕ್ಕೆ ಚ್ಯುತಿ ಬಾರದಂತೆ ಕಾಪಾಡುತ್ತಲೇ ಅದಕ್ಕೆ ಪ್ರೋತ್ಸಾಹ ನೀಡುವುದು ಪರಿಷತ್ತಿನ ಉದ್ದೇಶವಾಗಿದೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.