ಬಾವಿಗೆ ಬಿದ್ದು ಚಿರತೆ ಸಾವು; ರಕ್ಷಣೆಗೆ ಅರಣ್ಯಾಧಿಕಾರಿಗಳು ವಿಫಲ?


Team Udayavani, Feb 11, 2018, 10:07 PM IST

Cheeta-Dead-11-2.jpg

ಕೋಟ: ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬಿಲ್ಲಾಡಿ ಗ್ರಾ.ಪಂ. ವ್ಯಾಪ್ತಿಯ ಶಿರೂರುಮೂಕೈ ಭಂಡಾರ್ಥಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ನಾಯಿ ಅಥವಾ ಯಾವುದೋ ಕಾಡು ಪ್ರಾಣಿಯನ್ನು ಅಟ್ಟಿಸಿಕೊಂಡು ಬಂದು ಬಾವಿಗೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ ಈ ಘಟನೆ ನಡೆದಿದ್ದು ಸ್ಥಳೀಯರೋರ್ವರು ಬೆಳಗ್ಗೆ ಚಿರತೆ ನೀರಿನಲ್ಲಿ ಈಜಾಡುತ್ತಿರುವುದನ್ನು ಗಮನಿಸಿ ಅರಣ್ಯಾಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ.

ರಕ್ಷಣೆಗೆ ಅರಣ್ಯಾಧಿಕಾರಿಗಳು ವಿಫಲ
ಸ್ಥಳೀಯ ಅರಣ್ಯ ವೀಕ್ಷಕರು ಮೊದಲಿಗೆ ಸ್ಥಳಕ್ಕಾಗಮಿಸುವಾಗ ಚಿರತೆ ನೀರಿನಲ್ಲಿ ಈಜಾಡುತ್ತಿತ್ತು ಆದರೆ ಅಧಿಕಾರಿಗಳಲ್ಲಿ ಯಾವುದೇ ರಕ್ಷಣಾ ಸಾಮಗ್ರಿಗಳು ಇರಲಿಲ್ಲ, ಅನಂತರ ಅವರು ಮೇಲಧಿಕಾರಿಗಳಿಗೆ ವಿಚಾರ ತಿಳಿಸಿದ್ದು ಅವರ ತಂಡ ಸ್ಥಳಕ್ಕಾಗಮಿಸುವಾಗ ಚಿರತೆ ನೀರಲ್ಲಿ ಮುಳುಗಿ ಮೃತಪಟ್ಟಿದೆ. ಅಧಿಕಾರಿಗಳ ಎದುರಲ್ಲೇ ಚಿರತೆ ಸಾವನ್ನಪ್ಪಿದ ಕುರಿತು ಸ್ಥಳದಲ್ಲಿ ಉಪಸ್ಥಿತರಿದ್ದ ನೂರಾರು ಮಂದಿ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ ಹಾಗೂ ಕೊನೆಯ ಪಕ್ಷ ಅಧಿಕಾರಿಗಳು, ಸ್ಥಳೀಯರು ಯಾರಾದರೂ ಒಂದು  ಮರದ ತುಂಡನ್ನು ಬಾವಿಗೆ ಇಳಿಬಿಟ್ಟಿದ್ದರೂ ಚಿರತೆ ಬದುಕುವ ಸಾಧ್ಯತೆ ಇತ್ತು ಎಂದು ತಿಳಿಸಿದ್ದಾರೆ. ಚಿರತೆ ಸಾವನ್ನಪ್ಪುವ ಕೊನೆಯ ಕ್ಷಣದ ವೀಡಿಯೊವೊಂದನ್ನು ಸ್ಥಳೀಯರೋರ್ವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಅದು ಮನಕಲಕುವಂತಿದೆ. ಮುಳುಗು ತಜ್ಞ ಮಂಜುನಾಥ ನಾಯ್ಕ ಚಿರತೆಯ ಕಳೇಬರವನ್ನು ನೀರಿನಿಂದ ಮೇಲೆತ್ತಿದರು. ಅನಂತರ ಅರಣ್ಯಾಧಿಕಾರಿಗಳು ಶವಪರೀಕ್ಷೆ ಮುಂತಾದ ಕಾನೂನು ಪ್ರಕಿಯೆಯನ್ನು ನೆರವೇರಿಸಿದರು.

ಅಧಿಕಾರಿಗಳ ಸ್ಪಷ್ಟನೆ
ಕಿರಿಯ ಅಧಿಕಾರಿಗಳು ಮೊದಲಿಗೆ ಸ್ಥಳಕ್ಕೆ ಭೇಟಿ ನೀಡಿದ್ದು ಅವರಲ್ಲಿ ಯಾವುದೇ ರಕ್ಷಣಾ ಪರಿಕರ ಇರಲಿಲ್ಲ. ಅನಂತರ ನಮಗೆ ವಿಚಾರ ತಿಳಿಸಿದ್ದಾರೆ. ನಾವು ರಕ್ಷಣಾ ಪರಿಕರದೊಂದಿಗೆ ತೆರಳಲು ಸಿದ್ಧರಾದಾಗ ಚಿರತೆ ಸಾವನ್ನಪ್ಪಿದ ವಿಚಾರ ತಿಳಿಸಿದರು. ಮುಳುಗುತಜ್ಞರ ಸಹಾಯದಿಂದ ಕಳೇಬರವನ್ನು ಮೇಲಕ್ಕೆತ್ತಿದ್ದೇವೆ. ಮೃತ ಚಿರತೆಗೆ ಸುಮಾರು 3ವರ್ಷ ಪ್ರಾಯದಾಗಿದ್ದು  ಮುಂದಿನ ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಅರಣ್ಯಾಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

ಶಂಕರನಾರಾಯಣ ಅರಣ್ಯಾಧಿಕಾರಿಗಳಾದ ಸಂತೋಷ, ಹರೀಶ್‌, ವೀರಣ್ಣ, ರಾಕೇಶ ಮತ್ತು ಸಿಬಂದಿ ಹಾಗೂ ಬಿಲ್ಲಾಡಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು. ಶವ ಪರೀಕ್ಷೆಯ ಸಂದರ್ಭ ವಲಯ ಅರಣ್ಯಾಧಿಕಾರಿ ಗೋಪಾಲ ಉಪಸ್ಥಿತರಿದ್ದರು.

ಬಿಲ್ಲಾಡಿ – ವಂಡಾರು ಭಾಗದಲ್ಲಿ ವ್ಯಾಪಕ ಚಿರತೆ ಹಾವಳಿ
ಬಿಲ್ಲಾಡಿ ಹಾಗೂ ವಂಡಾರು ಗ್ರಾಮಗಳಿಗೆ ಹಲವು ವರ್ಷಗಳಿಂದ ‌ಚಿರತೆ ಹಾಗೂ ಇನ್ನಿತರ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದೆ. ಇತ್ತೀಚೆಗೆ ಇಲ್ಲಿನ ನಿವಾಸಿಗಳಿಗೆ ಪ್ರತಿದಿನವೆಂಬಂತೆ ಚಿರತೆಯ ದರ್ಶನವಾಗುತ್ತಿದ್ದು ಈ ಭಾಗದ ಹಲವು ಜಾನುವಾರುಗಳು, ನಾಯಿ ಮುಂತಾದ ಸಾಕುಪ್ರಾಣಿಗಳು ಕಾಡುಪ್ರಾಣಿಗಳಿಗೆ ಆಹಾರವಾಗುತ್ತಿವೆ. ಆದ್ದರಿಂದ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ  ಸಮರ್ಪಕ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.