ರಿಪೇರಿಯಾಗಿದ್ದು ಸೈಕಲ್‌ ಮತ್ತು ಬದುಕು! 


Team Udayavani, Feb 13, 2018, 5:35 AM IST

riperi.jpg

“ಅವನು’ ಸೈಕಲ್‌ಶಾಪ್‌ನಲ್ಲಿ ಪಂಚರ್‌ ಹಾಕುತ್ತಿದ್ದವನ ಮಗ. 10ನೇ ತರಗತಿಯಲ್ಲಿ ಡಿಸ್ಟಿಂಕ್ಷನ್‌ ಬಂದ. ನಂತರದ ನಾಲ್ಕೇ ದಿನಗಳಿಗೆ ತಂದೆ ತೀರಿಹೋದರು. ಆನಂತರದಲ್ಲಿ ಓದಲು, ಬದುಕಲು ಮಕ್ಕಳಿಗೆ ಮನೆ ಪಾಠ ಮಾಡಿದ. ಅಂಗಡಿಗಳಲ್ಲಿ ದಿನಗೂಲಿಯಾಗಿ ಲೆಕ್ಕ ಬರೆದ. ಸಂಪಾದನೆ ಇಲ್ಲದಿದ್ದಾಗ ನೀರು ಕುಡಿದು, ಬ್ರೆಡ್‌ ತಿಂದು ಹೊಟ್ಟೆ ತುಂಬಿಸಿಕೊಂಡ. ಅವನ ಬದುಕಲ್ಲಿ ಮೇಲಿಂದಮೇಲೆ ಕಷ್ಟಗಳು ಬಂದವು. ಅದರ ನಡುವೆಯೇ “ಮಾಯೆಯಂತೆ’ ನೆರವಿನ ಹಸ್ತಗಳೂ ಜತೆಯಾದವು. ಪರಿಣಾಮ, ಕಷ್ಟಗಳೊಂದಿಗೆ ಕುಸ್ತಿ ಮಾಡುತ್ತಲೇ ಈತ ಎಂಜಿನಿಯರಿಂಗ್‌ ಪೂರೈಸಿದ. ನಂತರ, ಸಿಕ್ಕಿದ್ದ ಕೆಲಸ ಬಿಟ್ಟು, ಆರು ತಿಂಗಳು ಪರಿಶ್ರಮದಿಂದ ಓದಿ ಐಎಎಸ್‌ನಲ್ಲಿ 32ರ್‍ಯಾಂಕ್‌ ಬಂದ!

ಈಗ, ಗುಜರಾತ್‌ನಲ್ಲಿ ಸಹಾಯಕ ಜಿಲ್ಲಾಧಿಕಾರಿಯಾಗಿರುವ ಈ ಸಾಧಕ ವರುಣ್‌ ಬರನ್‌ವಾಲ್‌. ಇಂಗ್ಲಿಷಿನ ಬ್ಲಾಗ್‌ಗಳಿಗೆ ಆತನೇ ಹೇಳಿಕೊಂಡ ಯಶೋಗಾಥೆಯ ಭಾವಾನುವಾದ ಇಲ್ಲಿದೆ.
***
“ಮೂವರು ತಂಗಿಯರು, ಅಪ್ಪ, ಅಮ್ಮ, ಒಬ್ಬ ಅಣ್ಣ ಮತ್ತು ನಾನು… ಹೀಗೆ ಏಳು ಜನರಿದ್ದ ಕುಟುಂಬ ನಮ್ಮದು. ಮಹಾರಾಷ್ಟ್ರದ ಪಾಲ್ಗಾರ್‌ ಜಿಲ್ಲೆಯ ಬಾಯ್ಸರ್‌ ಎಂಬ ಊರಿನಲ್ಲಿ ನಾವಿದ್ದೆವು. ಅಪ್ಪ, ಒಂದು ಸೈಕಲ್‌ ಶಾಪ್‌ ಇಟ್ಟುಕೊಂಡಿದ್ದರು. ಅವರ ಸಂಪಾದನೆಯಿಂದಲೇ ಬದುಕು ನಡೆಯುತ್ತಿತ್ತು. ಒಂದು ಚಿಕ್ಕ ಊರಿನಲ್ಲಿ ನಡೆಸುತ್ತಿದ್ದ ಸೈಕಲ್‌ಶಾಪ್‌ ಅಂದಮೇಲೆ ವಿವರಿಸಿ ಹೇಳಬೇಕಿಲ್ಲ ತಾನೆ? ಅಲ್ಲಿ ದೊಡ್ಡ ಮೊತ್ತದ ಸಂಪಾದನೆ ಆಗುತ್ತಿರಲಿಲ್ಲ. ಅವತ್ತಿನ ದುಡಿಮೆ ಅವತ್ತಿನ ಖರ್ಚಿಗೆ ಸರಿ ಹೋಗುತ್ತಿತ್ತು. ಬಡತನದೊಂದಿಗೇ ಬದುಕುವುದನ್ನು ನಾವು ಅಭ್ಯಾಸ ಮಾಡಿಕೊಂಡಿದ್ದೆವು.

“ನಾವು ಬಡವರು ಅಂತ ಯಾವತ್ತೂ ಅಂದೊRàಬಾರ್ಧು. ಚೆನ್ನಾಗಿ ಓದಿ ಸರ್ಕಾರಿ ನೌಕರಿ ಹಿಡೀಬೇಕು. ಕೆಲಸಕ್ಕೆ ಸೇರಿಕೊಂಡ್ರೆ ಎಲ್ಲ ಕಷ್ಟಗಳೂ ಮಾಯವಾಗುತ್ತವೆ’ ಅಂತಿದ್ರು ಅಪ್ಪ. ನನಗೆ ಡಾಕ್ಟರ್‌ ಆಗಬೇಕು ಎಂಬ ಆಸೆಯಿತ್ತು. ಎಸ್ಸೆಸ್ಸೆಲ್ಸಿಯಲ್ಲಿ ತಾಲ್ಲೂಕಿಗೇ ಎರಡನೆಯವನಾಗಿ ಪಾಸ್‌ ಆದಾಗ, ಭವಿಷ್ಯದಲ್ಲಿ ಡಾಕ್ಟರ್‌ ಆಗಬೇಕು ಎಂಬ ಆಸೆ ಇನ್ನಷ್ಟು ಬಲವಾಯ್ತು. ಈ ಖುಷಿಯಲ್ಲಿ ನಾನಿದ್ದಾಗಲೇ ನಾವ್ಯಾರೂ ನಿರೀಕ್ಷಿಸದ ಅನಾಹುತ ನಡೆದುಹೋಯಿತು. ಅದೊಂದು ಮುಂಜಾನೆ, ಸೈಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದಾಗಲೇ ಎದೆನೋವಿನಿಂದ ಅಪ್ಪ ಕುಸಿದು ಬಿದ್ದರೆಂದು ಸುದ್ದಿ ಬಂತು. ಗಾಬರಿ, ಹೆದರಿಕೆ, ಆತಂಕದಿಂದಲೇ ನಾವು ಸೈಕಲ್‌ಶಾಪ್‌ ಬಳಿಗೆ ಹೋಗುವಷ್ಟರಲ್ಲಿ ಅಪ್ಪನನ್ನು ಆಸ್ಪತ್ರೆಗೆ ಸೇರಿಸಿದ್ದರು. ಅವತ್ತೇ, ಸಂಜೆ ಹಾರ್ಟ್‌ ಆಟ್ಯಾಕ್‌ನಿಂದ ತಂದೆ ತೀರಿಕೊಂಡರು.

ಅವತ್ತಿನವರೆಗೂ ನಮಗೆ ಕಷ್ಟವೆಂದರೆ, ದುಡಿಮೆಯೆಂದರೆ ಏನೆಂದೇ ಗೊತ್ತಿರಲಿಲ್ಲ. ಬೇರ್ಯಾವುದೇ ಆರ್ಥಿಕ ಸೌಲಭ್ಯವೂ ಇಲ್ಲದ್ದರಿಂದ ಅಮ್ಮ ಕಂಗಾಲಾದಳು. ಮೂರು ಹೊತ್ತಿನ ಊಟಕ್ಕೂ ಪರದಾಡುವಂತಾಯಿತು. ಆಸ್ಪತ್ರೆಯ ವೆಚ್ಚ, ಅಂತ್ಯಸಂಸ್ಕಾರ, ಶ್ರಾದ್ಧ…ಇದೆಲ್ಲ ಖರ್ಚುಗಳನ್ನು ಸರಿದೂಗಿಸಲು ಸಾಲ ಮಾಡಬೇಕಾಗಿ ಬಂತು. ಈ ನಡುವೆ ದಿನವೂ ಮನೆಗೆ ಬರುತ್ತಿದ್ದ ಗೆಳೆಯರು “ಮುಂದೆ ಏನ್ಮಾಡ್ತೀಯ? ಏನು ಓದಿ¤àಯ? ಯಾವ ಕಾಲೇಜಿಗೆ ಸೇರಿ¤àಯ?’ ಎಂದು ಕೇಳತೊಡಗಿದ್ದರು. ಅದೊಂದು ದಿನ ಅಮ್ಮ ನಿರ್ಧಾರದ ದನಿಯಲ್ಲಿ ಹೇಳಿಬಿಟ್ಟಳು: “ಸೈಕಲ್‌ಶಾಪ್‌ನ ನಾನು ನೋಡಿಕೊಳೆ¤àನೆ. ಸ್ವಲ್ಪ ದಿನದಲ್ಲೇ ಪಂಕ್ಚರ್‌ ಹಾಕುವುದನ್ನೂ ಕಲೀತೇನೆ. ಅಲ್ಲಿನತನಕ ಸೈಕಲ್‌ಗ‌ಳಿಗೆ ಬಾಡಿಗೆ ರೂಪದಲ್ಲಿ ಸಿಗುತ್ತದಲ್ಲ ಹಣ…ಅದರಲ್ಲೇ ಹೇಗೋ ಬದುಕು ನಡೆಸೋಣ…’     

ಈ ಮಾತು ನನಗೂ ಸರಿ ಅನ್ನಿಸಿತು. ಸಮೀಪದಲ್ಲಿಯೇ ಇರುವ ಕಾಲೇಜು ಸೇರಲು ನಿರ್ಧರಿಸಿದೆ. ಅಲ್ಲಿ ವಿಚಾರಿಸಿದರೆ, ಒಂದು ವರ್ಷಕ್ಕೆ 10000 ರೂಪಾಯಿ ಫೀಸ್‌ ಅಂದರು. ಅಷ್ಟು ಹಣ ಹೊಂದಿಸಲು ನನಗೆ ಸಾಧ್ಯವೇ ಇರಲಿಲ್ಲ. ಹಾಗಾಗಿ, ಓದುವುದೇ ಬೇಡ. ಚೆನ್ನಾಗಿ ಸೈಕಲ್‌ ರಿಪೇರಿಯ ಕೆಲಸ ಕಲಿತು ದಿನವೂ ದುಡಿದು ಕುಟುಂಬವನ್ನು ನೋಡಿಕೊಳ್ಳೋಣ ಎಂದು ನಿರ್ಧರಿಸಿದೆ. ಮರುದಿನದಿಂದಲೇ ಆ ಕೆಲಸಕ್ಕೆ ಬಂದೂಬಿಟ್ಟೆ.

ಹೀಗೇ ಹದಿನೈದಿಪ್ಪತ್ತು ದಿನಗಳು ಕಳೆದವು. ನನ್ನ ಬದುಕಿನಲ್ಲಿ ಮೊದಲ ವಿಸ್ಮಯ ನಡೆದದ್ದೇ ಆಗ. ಅದೊಂದು ದಿನ ಸಂಜೆ ಸೈಕಲ್‌ಶಾಪ್‌ನ ಮುಂದೆ ಕಾರೊಂದು ಬಂದು ನಿಂತಿತು. ಯಾರಪ್ಪಾ ಇದು ಅಂದುಕೊಂಡು ನೋಡಿದರೆ ಡಾ. ಕಂಪ್ಲಿ. ಅವರು, ಅಪ್ಪನಿಗೆ ಚಿಕಿತ್ಸೆ ನೀಡಿದ್ದ ಸರ್ಜನ್‌. ಆಸ್ಪತ್ರೆಗೆ ಹೋಗಿದ್ದಾಗ ಅವರಿಗೆ ನಮ್ಮ ಕುಟುಂಬದವರ ಪರಿಚಯವಾಗಿತ್ತು. ನನ್ನನ್ನು ಕಂಡವರೇ, ಮುಂದೆ ಏನ್ಮಾಡಬೇಕು ಅಂತಿದೀಯ? ಎಂದು ಕೇಳಿದರು. ಅವರಿಗೆ, ನಡೆದಿದ್ದನ್ನೆಲ್ಲ ವಿವರಿಸಿದೆ. ಒಂದು ವರ್ಷಕ್ಕೆ 10000 ರೂಪಾಯಿ ಕೊಡುವ ಶಕ್ತಿ ನಮಗಿಲ್ಲ ಸಾರ್‌. ನಾನು  ಕಾಲೇಜಿಗೆ ಹೋಗಲ್ಲ. ಸೈಕಲ್‌ ಶಾಪ್‌ನಲ್ಲಿ ದುಡಿದೇ ಬದುಕ್ತೇನೆ ಅಂದೆ. ಡಾ. ಕಂಪ್ಲಿಯವರು ಮಾತಾಡಲಿಲ್ಲ. ಪರ್ಸ್‌ನಿಂದ ದುಡ್ಡು ತೆಗೆದು ಕೈಗಿಟ್ಟು ಹೇಳಿದರು: “ಇಲ್ಲಿ ಹತ್ತು ಸಾವಿರ ರೂಪಾಯಿ ಇದೆ. ನಾಳೆಯೇ ಹೋಗಿ ಕಾಲೇಜಿಗೆ ಸೇರಿಕೋ…’

ಆ ವೈದ್ಯರ ಕರುಣೆ ಮತ್ತು ಪ್ರೀತಿಗೆ ಹೇಗೆ ಕೃತಜ್ಞತೆ ಹೇಳಬೇಕೋ ಗೊತ್ತಾಗಲಿಲ್ಲ. ಮರುದಿನವೇ ಕಾಲೇಜಿಗೆ ಸೇರಿದೆ. ಪ್ರತಿ ತಿಂಗಳೂ 650 ರೂಪಾಯಿಗಳನ್ನು ಶುಲ್ಕವಾಗಿ ಕೊಡಬೇಕೆಂಬ ಇನ್ನೊಂದು ನಿಯಮದ ಬಗ್ಗೆ ಗೊತ್ತಾಗಿದ್ದೇ ಆಗ. ಒಂದು ಸಾವಿರ ರೂಪಾಯಿಯಲ್ಲಿ ಐದು ಜನರ ಕುಟುಂಬ ಇಡೀ ತಿಂಗಳು ಬದುಕುತ್ತಿದ್ದ ಸಂದರ್ಭ ಅದು. ಹೀಗಿರುವಾಗ 650 ರೂಪಾಯಿಗಳನ್ನು ಪ್ರತೀ ತಿಂಗಳು ಕೊಡುವುದಾದರೂ ಹೇಗೆ? “ಸುಸ್ತಾಗುವವರೆಗೂ ದುಡಿಯುತ್ತಲೇ ಓದಬೇಕು. ಯಾವ ಕೆಲಸವಾದರೂ ಸರಿ’ ಎಂದು ನಾನು ನಿರ್ಧರಿಸಿದ್ದೇ ಆಗ. ಮಧ್ಯಾಹ್ನದವರೆಗೆ ಕಾಲೇಜು, ಆನಂತರ ಚಿಕ್ಕ ಮಕ್ಕಳಿಗೆ ಟ್ಯೂಶನ್‌, ನಂತರ ಒಂದೆರಡು ಅಂಗಡಿಗಳಲ್ಲಿ ಗಂಟೆಗಳ ಲೆಕ್ಕದಲ್ಲಿ ಕೆಲಸ.. ಹೀಗೆಲ್ಲ ದುಡಿದೆ. ನನ್ನ ಬಡತನ ಹಾಗೂ ಕಷ್ಟದ ಬಗ್ಗೆ ತಿಳಿದ ಅಧ್ಯಾಪಕರು ಆಗಾಗ್ಗೆ ತಾವೂ ನೆರವಾದರು. ಹಾಗಾಗಿ, ನೂರೆಂಟು ಕಷ್ಟಗಳ ಮಧ್ಯೆಯೂ ಡಿಸ್ಟಿಂಕ್ಷನ್‌ನಲ್ಲಿ ಪಿಯುಸಿ ಮುಗಿಯಿತು.

ಡಾಕ್ಟರಾಗಬೇಕು ಎಂಬ ಮಹದಾಸೆ ಆಗ ಮತ್ತೂಮ್ಮೆ ಕೈಜಗ್ಗಿದ್ದು ನಿಜ. ಆದರೆ, ಎಂಬಿಬಿಎಸ್‌ಗೆ ವಿಪರೀತ ಖರ್ಚಿದೆ ಎಂದು ಗೊತ್ತಿದ್ದರಿಂದ ಎಂಜಿನಿಯರಿಂಗ್‌ ಸೇರಿಕೊಂಡೆ. ಡಿಸ್ಟಿಂಕ್ಷನ್‌ನ ಕಾರಣದಿಂದ ಸ್ಕಾಲರ್‌ಶಿಪ್‌ ಸಿಕ್ಕಿತು ನಿಜ.”ಆದರೆ ದುಡ್ಡು ಸ್ಯಾಂಕ್ಷನ್‌ ಆಗುವುದು ವರ್ಷದ ಕೊನೆಗೆ. ಈಗ ಎಲ್ಲಾದ್ರೂ ಸಾಲ ಮಾಡಿ ದುಡ್ಡು ಕಟ್ಟಿಬಿಡಿ. ಸ್ಕಾಲರ್‌ಶಿಪ್‌ ದುಡ್ಡು ಬಂದಾಗ ಅದನ್ನೆಲ್ಲಾ ನಿಮಗೇ ಕೊಡ್ತೀವಿ’ ಎಂದು ಅಕೌಂಟ್ಸ್‌ ಸೆಕ್ಷನ್ನಲ್ಲಿ ಹೇಳಿದರು. ಎಂಜಿನಿಯರಿಂಗ್‌ ಶಿಕ್ಷಣಕ್ಕೆ ದುಡ್ಡು ಹೊಂದಿಸುವುದು ಅಂದರೆ ತಮಾಷೆಯೆ? ಮುಂದೇನು ಗತಿ? ದೇವರೇ, ಯಾಕಪ್ಪಾ ನನಗೆ ಇಷ್ಟೆಲ್ಲಾ ಕಷ್ಟ ಕೊಡ್ತೀಯ? ಎಂದು ನನ್ನಷ್ಟಕ್ಕೆ ನಾನೇ ಹೇಳಿಕೊಂಡೆ. ನಂಬಿದ್ರೆ ನಂಬಿ, ಬಿಟ್ರೆ ಬಿಡಿ; ಹೀಗೆ ಹೇಳಿದ ಕೆಲವೇ ದಿನಗಳಲ್ಲಿ, ಮತ್ತೂಂದು ಮ್ಯಾಜಿಕ್‌ ನಡೆದು ಹೋಯಿತು.

 ನಮ್ಮ ಕಾಲೇಜಲ್ಲಿ ಎಂಜಿನಿಯರಿಂಗ್‌ ಓದಲು ಅಫ‌ಘನಿಸ್ಥಾನದ ಆರು ಮಂದಿ ಬಂದಿದ್ದರು. ಅವರೆಲ್ಲಾ ಒಟ್ಟಿಗೇ ಬಂದು ಇಲ್ಲಿನ ವೇಗದ ಇಂಗ್ಲಿಷ್‌ ಮತ್ತು ಪಠ್ಯಕ್ರಮ ನಮಗೆ ತಕ್ಷಣಕ್ಕೆ ಅರ್ಥವಾಗೋದಿಲ್ಲ. ನಮಗೆ ಅರ್ಥವಾಗುವಂತೆ ನಿಧಾನವಾಗಿ ಹೇಳಿಕೊಡು. ನಿನಗೆ ಟ್ಯೂಶನ್‌ ಫೀ ಕೊಡುತ್ತೇವೆ’ ಅಂದರು. ಅವರಿಗೆ ಟ್ಯೂಶನ್‌ ಮಾಡುತ್ತಾ, ಆಗಲೇ ನಾನೂ ಓದುತ್ತಾ ಎರಡು ವರ್ಷ ಮುಗಿಸಿದೆ. ಮೂರನೇ ವರ್ಷದಲ್ಲಿ ಕ್ಯಾಂಪಸ್‌ ಇಂಟರ್‌ವ್ಯೂ ನಡೆಯಿತು. ನನ್ನ ಶೈಕ್ಷಣಿಕ ಸಾಧನೆ ಗಮನಿಸಿದ ಡಿಲೋಟ್‌ ಎಂಬ ಎಂಎನ್‌ಸಿ ಕಂಪನಿ ನೌಕರಿಯ ಆಫ‌ರ್‌ ನೀಡಿತು. ಡಿಗ್ರಿ ಮುಗಿದ 6 ತಿಂಗಳ ನಂತರ ಕೆಲಸಕ್ಕೆ ಸೇರಬೇಕೆಂದೂ ತಿಳಿಸಿತು.

ಅಂತೂ, ಒಳ್ಳೆಯ ಸಂಬಳದ ಕೆಲಸ ಸಿಕ್ಕಿತು. ಇನ್ಮುಂದೆ ನಮ್ಮ ಕುಟುಂಬದ ಎಲ್ಲ ಕಷ್ಟಗಳೂ ಮುಗಿದವು ಎಂಬ ಸಡಗರದಲ್ಲಿ ನಾನಿದ್ದೆ. ಆಗಲೇ ಲೋಕಪಾಲ್‌ ಮಸೂದೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅಣ್ಣಾ ಹಜಾರೆಯವರ ನೇತೃತ್ವದಲ್ಲಿ ಚಳವಳಿ ಆರಂಭವಾಯಿತು. ಹಜಾರೆಯವರ ಮಾತು, ಭಾಷಣವನ್ನು ಕೇಳಿದ ಬಳಿಕ ಕಾರ್ಪೊರೇಟ್‌ ಸಂಸ್ಥೆಯಲ್ಲಿ ಕೂಲಿಯಂತೆ ದುಡಿಯುವ ಬದಲು ಐಎಎಸ್‌ ಮಾಡಿ, ಬಡಜನರ ಸೇವೆ ಮಾಡುವುದೇ ಸರಿ ಅನ್ನಿಸಿತು. ನನ್ನ ಈ ನಿರ್ಧಾರ ಕೇಳಿ ಗೆಳೆಯರು, ಬಂಧುಗಳು ಬಯ್ದರು. “ಮನೇಲಿ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಅಮ್ಮನಿಗೆ ಅನಾರೋಗ್ಯ ಜೊತೆಯಾಗಿದೆ. ಹೀಗಿರುವಾಗ ಕೆಲಸಕ್ಕೆ ಹೋಗೋದು ಬಿಟ್ಟು ಮತ್ತೆ ಓದಿ¤àನಿ ಅಂತಿದೀಯಲ್ಲ. ನಿನಗೆ ಬುದ್ಧಿ ನೆಟ್ಟಗಿಲ್ವ?’ ಎಂದರು. “ಆರ್ಡರಿನ ಪ್ರಕಾರ ಕೆಲಸಕ್ಕೆ ಜಾಯಿನ್‌ ಆಗಲು ಇನ್ನೂ ಆರು ತಿಂಗಳ ಕಾಲಾವಕಾಶ ಇದೆ. ಆ ಅವಧಿಯಲ್ಲಿ ಮನೇಲಿದ್ದು ಮಾಡುವುದೇನು? ಏನಾಗುತ್ತೋ ನೋಡೋಣ. ಒಂದು ಪ್ರಯತ್ನ ಮಾಡ್ತೇನೆ’ ಎಂದಷ್ಟೇ ಉತ್ತರಿಸಿ ಎಲ್ಲರನ್ನೂ ಸಮಾಧಾನಿಸಿದೆ. 

ಈಗಲೂ ಅಷ್ಟೆ. ನನ್ನ ಕಣ್ಮುಂದೆ ಒಂದು ಗುರಿಯಿತ್ತು. ಆದರೆ ಗುರಿ ಸಾಧನೆಯ ದಾರಿ ಗೊತ್ತಿರಲಿಲ್ಲ. ಬದುಕಿನಲ್ಲಿ ದಾರಿ ತಿಳಿಯದೇ ಅಡ್ಡಾಡುತ್ತಿದ್ದೆ. ಮುಂದೇನು ಮಾಡುವುದೋ ತಿಳಿಯದೆ ನಾನು ಕಂಗಾಲಾಗಿದ್ದಾಗಲೇ ನನ್ನ ಬದುಕಿನಲ್ಲಿ ಮತ್ತೂಂದು ಮ್ಯಾಜಿಕ್ಕೂ ನಡೆದುಹೋಯಿತು. ನನ್ನ ರೂಂಮೇಟ್‌ ಆಗಿದ್ದ ಭೂಷಣ್‌, ತನ್ನ ಪರಿಚಯದ ಐಎಎಸ್‌ ಕೋಚಿಂಗ್‌ ಸೆಂಟರಿನಲ್ಲಿ ಪ್ರವೇಶ ದೊರಕಿಸಿಕೊಟ್ಟ. ಅದರ ಬೆನ್ನಿಗೇ, ಹಿಂದೊಮ್ಮೆ ರೈಲು ಪ್ರಯಾಣದ ವೇಳೆ ಪರಿಚಯವಾಗಿದ್ದ ಹಿರಿಯರೊಬ್ಬರು, ತಮಗೆ ಪರಿಚಯವಿದ್ದ ಎನ್‌ಜಿಒ ಮೂಲಕ ಐಎಎಸ್‌ ಓದಿಗೆ ಅಗತ್ಯವಿದ್ದ ಪುಸ್ತಕಗಳನ್ನು ಖರೀದಿಸಲು ನೆರವಾದರು.

ಆನಂತರದ ದಿನಗಳಲ್ಲಿ ನಾನು ಪುಸ್ತಕಗಳ ಮಧ್ಯೆಯೇ ಉಸಿರಾಡಿದೆ. ಎಷ್ಟೋ ಸಂದರ್ಭಗಳಲ್ಲಿ ಹಗಲು ರಾತ್ರಿಯ ಪರಿವೆಯೇ ಇಲ್ಲದಂತೆ ಓದಿದೆ. ಓದಿಕೊಂಡಷ್ಟೇ ಶ್ರದ್ಧೆಯಿಂದ 2014ರಲ್ಲಿ ಪರೀಕ್ಷೆಗೂ ಹಾಜರಾದೆ. ಕೆಲವೇ ತಿಂಗಳುಗಳ ನಂತರ ಫ‌ಲಿತಾಂಶವೂ ಬಂತು. ಮೊದಲ ಪ್ರಯತ್ನದಲ್ಲೇ, ಎಲ್ಲರೂ ಬೆರಗಾಗುವಂತೆ, 32ನೇ ರ್‍ಯಾಂಕಿನೊಂದಿಗೆ ನಾನು ಐಎಎಸ್‌ ಪಾಸ್‌ ಮಾಡಿದ್ದೆ!
**
ಗುಜರಾತ್‌ನ ಹಿಮ್ಮತ್‌ನಗರದಲ್ಲಿ ನಾನೀಗ ಸಹಾಯಕ ಜಿಲ್ಲಾಧಿಕಾರಿ. ಇವತ್ತು ಸರ್ಕಾರಿ ನೌಕರಿ, ಕಾರು, ಬಂಗಲೆ, ಆಳು-ಕಾಳು ಎಲ್ಲವೂ ಇದೆ. ಆದರೆ ಕೇವಲ ಹತ್ತು ವರ್ಷದ ಹಿಂದೆ ಬರೀ ನೀರು ಕುಡಿದು, ಒಂದು ಪೀಸ್‌ ಬ್ರೆಡ್‌ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದನ್ನು ನಾನು ಮರೆತಿಲ್ಲ, ಮರೆಯುವುದೂ ಇಲ್ಲ. ಕಷ್ಟಗಳು ಬಂದಾಗ ಕಂಗಾಲಾಗದೇ ಮುನ್ನಡೆದರೆ ಗೆಲವು ಸಿಕ್ಕೇ ಸಿಗುತ್ತದೆ. ದೇವರು, ಯಾವುದಾದರೂ ಒಂದು ರೂಪದಲ್ಲಿ ನಮ್ಮ ಕೈಹಿಡಿಯುತ್ತಾನೆ ಎಂಬುದಕ್ಕೆ ನನ್ನ ಬದುಕೇ ಸಾಕ್ಷಿ ಅನ್ನುತ್ತಾ ತಮ್ಮ¾ ಯಶೋಗಾಥೆಗೆ ಮಂಗಳ ಹಾಡುತ್ತಾರೆ ವರುಣ್‌.

– ಎ.ಆರ್‌. ಮಣಿಕಾಂತ್‌

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.