ಬೆಂಗಳೂರು ಕೇಪ್‌ಟೌನ್‌ ಆಗಲು ಬಿಜೆಪಿ ಬಿಡದು


Team Udayavani, Feb 13, 2018, 12:02 PM IST

bang-kep.jpg

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ವಿಚಾರದಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ ನಗರದಂತೆ ಆಗಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣಾ ಸಿದ್ಧತೆ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸುವ ವಿಚಾರದಲ್ಲಿ ಬಿಜೆಪಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿಯ ಮೂರು ಯೋಜನೆಗಳನ್ನು ರೂಪಿಸಲಿದೆ. ಇದನ್ನು ಮುಂಬರುವ ವಿಧಾನಸಭೆ ಚುನಾವಣೆಯ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಕೆಲವೇ ದಿನಗಳಲ್ಲಿ ಕುಡಿಯಲು ನೀರೇ ಇರುವುದಿಲ್ಲ. ಕೇಪ್‌ಟೌನ್‌ ಮಾತ್ರವಲ್ಲ, ಜಗತ್ತಿನ ಇತರ 11 ನಗರಗಳ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಈ ಪೈಕಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ ಎಂಬ ಬಿಬಿಸಿ ವರದಿ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನಲ್ಲಿ ನಿಸರ್ಗದತ್ತವಾಗಿ ಬಂದಿರುವ ನೀರಿನ ಭಂಡಾರವೇ ಇದೆ. ಅದನ್ನು ಸಮರ್ಥವಾಗಿ ನಿರ್ವಹಿಸಿ, ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅದಕ್ಕಾಗಿ ಬಿಜೆಪಿ ಬಳಿ ಐದು ವರ್ಷ, 10 ವರ್ಷ ಮತ್ತು 15 ವರ್ಷ ಅವಧಿಯ ಮೂರು ಪೂರ್ಣ ಪ್ರಮಾಣದ ಯೋಜನೆಗಳಿದ್ದು, ಅದನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾಗುವುದು. ಯಾವುದೇ ಕಾರಣಕ್ಕೂ ಬೆಂಗಳೂರನ್ನು ಕೇಪ್‌ಟೌನ್‌ ಆಗಲು ಅವಕಾಶ ನೀಡುವುದಿಲ್ಲ ಎಂದರು.

ಅನುದಾನ ಬಳಸಿಕೊಂಡಿಲ್ಲ: “ನಗರದಲ್ಲಿ 100ಕ್ಕೂ ಹೆಚ್ಚು ಕೆರೆಗಳಿದ್ದು, ಒಂದಕ್ಕೊಂದು ಸಂಪರ್ಕ ಹೊಂದಿವೆ. ನಾನು ಪರಿಸರ ಖಾತೆ ಸಚಿವನಾಗಿದ್ದಾಗ ಮೂರು ಸಭೆಗಳನ್ನು ನಡೆಸಿ ಈ ಕೆರೆಗಳನ್ನು ಸ್ವತ್ಛಗೊಳಿಸಿ ಶುದ್ಧ ನೀರು ತುಂಬಿಸಲು ಮೂರು ಹಂತದ ಯೋಜನೆ ರೂಪಿಸಲಾಗಿತ್ತು. ಯೋಜನೆಗೆ ರಾಜ್ಯ ಸರ್ಕಾರವನ್ನೂ ಒಪ್ಪಿಸಿ ಕೇಂದ್ರ ಸರ್ಕಾರ 890 ಕೋಟಿ ರೂ. ಅನುದಾನ ಮಂಜೂರು ಮಾಡಿತ್ತು. ಆದರೆ, ಸರ್ಕಾರ ಅದನ್ನು ಬಳಕೆ ಮಾಡಿಕೊಂಡಿಲ್ಲ,’ ಎಂದು ಆರೋಪಿಸಿದರು.

ಕೊಳಕಾದ ನೀರಿನ ಭಂಡಾರ: ಬೆಂಗಳೂರಿನಲ್ಲಿ ನೈಸರ್ಗಿಕ ನೀರಿನ ಭಂಡಾರವಿದೆ. ಆದರೆ, ಅದಕ್ಕೆ ಕೊಳಚೆ ನೀರು ಹೋಗುತ್ತದೆ. ಇದನ್ನು ತಪ್ಪಿಸಲು ತ್ಯಾಜ್ಯ ನೀರು ಕೆರೆಗೆ ಸೇರದಂತೆ ಶುದ್ಧೀಕರಣ ಘಟಕಗಳನ್ನು ಆರಂಭಿಸಬೇಕು. 50ಕ್ಕಿಂತ ಹೆಚ್ಚು ಅಪಾರ್ಟ್‌ಮೆಂಟ್‌ಗಳಿರುವ ಫ್ಲಾಟ್‌ಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಸ್ಥಾಪಿಸಬೇಕು ಎಂಬ ನಿಯಮವಿದ್ದರೂ ಅದನ್ನು ರಾಜ್ಯ ಸರ್ಕಾರ ಜಾರಿಗೊಳಿಸುತ್ತಿಲ್ಲ. ಇಂತಹ ದೊಡ್ಡ ನಗರದಲ್ಲಿ ಒಳಚರಂಡಿ ವ್ಯವಸ್ಥೆಯೇ ಸರಿ ಇಲ್ಲ ಎಂದರೆ ಅದು ಕಾಂಗ್ರೆಸ್‌ ಸರ್ಕಾರದ ವೈಫ‌ಲ್ಯತೆಯಲ್ಲವೇ? ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.