ಕಾಪು ಮೊಗವೀರ ಮಹಾಸಭಾ ಮುಂಬಯಿ: ವಾರ್ಷಿಕ ಮಹಾಸಭೆ


Team Udayavani, Feb 13, 2018, 3:35 PM IST

1101mum10.jpg

ಮುಂಬಯಿ: ನಾವು ಹುಟ್ಟಿ ಬೆಳೆದು ಪ್ರಾಥಮಿಕ ಶಿಕ್ಷಣ ಪಡೆದ ಗ್ರಾಮ ಹಾಗೂ ಶಾಲೆಯನ್ನು ಮರೆಯದೆ ಅದರ ಏಳ್ಗೆಗಾಗಿ ಎಲ್ಲರೂ ಕೈಜೋಡಿಸಬೇಕು. ನಾವೆಲ್ಲ ದೇವತಾ ಕಾರ್ಯಗಳಿಗೆ ಉದಾರ ದಾನ ಮಾಡುತ್ತಿದ್ದರೂ ಸಾಮಾಜಿಕ ಕಾರ್ಯಗಳಿಗೂ ದಾನ ಮಾಡುವಾಗ ಅದೇ ಉದಾರತೆಯನ್ನು ತೋರಿಸಬೇಕು ಎಂದು ಕಾಪು ಮೊಗವೀರ ಮಹಾಸಭಾ ಮುಂಬಯಿ ಇದರ ಅಧ್ಯಕ್ಷ ಸತೀಶ್‌ ಕುಮಾರ್‌ ಎನ್‌. ಕರ್ಕೇರ ನುಡಿದರು.

ಜ. 21 ರಂದು ಸಾಕಿನಾಕಾದಲ್ಲಿರುವ ಸಭಾದ ಕಾರ್ಯಾಲಯದಲ್ಲಿ ಜರಗಿದ ಕಾಪು ಮೊಗವೀರ ಮಹಾಸಭಾ ಇದರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಸಭಾದ ವತಿಯಿಂದ ಕಾಪು ಪಡುಗ್ರಾಮದಲ್ಲಿನ ಶಾಲಾ ಮಕ್ಕಳಿಗೆ ಪ್ರತೀ ವರ್ಷವೂ ವಿದ್ಯಾರ್ಥಿ ವೇತನ, ರೇನ್‌ಕೋಟ್‌ಗಳ ವಿತರಣೆ, ಶಾಲೆಯಲ್ಲಿನ ಓರ್ವ ಶಿಕ್ಷಕಿಗೆ ಪ್ರತಿ ತಿಂಗಳು ವೇತನ ನೀಡುವುದು, ಸದಸ್ಯರ ಕುಟುಂಬಸ್ಥರಿಗೆ ಆರೋಗ್ಯ ವಿಮೆ ಕಂತುಗಳನ್ನು ಮರುಪಾವತಿಸುವುದು ಮೊದಲಾದ ಅನೇಕ ಸಮಾಜಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದ್ದು, ಈ ಪುಣ್ಯ ಕಾರ್ಯಗಳಿಗೆ ಸದಸ್ಯರು ಮತ್ತು ದಾನಿಗಳು ತಮ್ಮ ಸಹಾಯಹಸ್ತವನ್ನು ನೀಡಬೇಕು ಎಂದು ಸದಸ್ಯರಲ್ಲಿ ವಿನಂತಿಸಿದರು.

ಆರಂಭದಲ್ಲಿ ಗತ ವರ್ಷದಲ್ಲಿ ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಜತೆ  ಕಾರ್ಯದರ್ಶಿ ರೂಪೇಶ್‌ ಸುವರ್ಣ ಸ್ವಾಗತಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಬಿ. ಎಸ್‌. ಸಾಲ್ಯಾನ್‌ ಅವರು ಕಳೆದ ವರ್ಷದಲ್ಲಿ ನಡೆಸಲಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜತೆ ಕಾರ್ಯದರ್ಶಿ ರೋಹನ್‌ ನಾಯ್ಕ ಅವರು ಗತ ವಾರ್ಷಿಕ ವರದಿ ಮಂಡಿಸಿದರು.

ಗೌರವ ಕೋಶಾಧಿಕಾರಿ ಕುಮಾರ್‌ ಕರ್ಕೇರ ಅವರು ಕಾಪು ಮೊಗವೀರ ಮಹಾಸಭಾ ಮುಂಬಯಿ ಮತ್ತು ಅದರ ಸಂಚಾಲಕತ್ವದಲ್ಲಿರುವ ಕಾಪು ಮೊಗವೀರ ಪರಸ್ಪರ ಸಹಾಯಕ ಸಂಘದ ಲೆಕ್ಕ ಪತ್ರವನ್ನು ಮಂಡಿಸಿದರು. ಸದಸ್ಯರ ಪ್ರಶ್ನೆಗಳಿಗೆ ಕುಮಾರ್‌ ಕರ್ಕೇರ ಮತ್ತು ಉಮೇಶ್‌ ಕರ್ಕೇರ ಸೂಕ್ತ ಉತ್ತರಗಳನ್ನ ನೀಡಿದರು. ಸದಸ್ಯರು ಹಾಗೂ ಕುಟುಂಬದ ಸದಸ್ಯರಿಂದ ಬಂದ ಬೇಡಿಕೆಯಂತೆ ಸಭೆಯು ಮಹಿಳಾ ವಿಭಾಗವನ್ನು ಆರಂಭಿಸುವ ಬಗ್ಗೆ ಮಹಾಸಭೆಯಲ್ಲಿ ಚರ್ಚಿಸಲಾಯಿತು. ಇದರ ಅಂಗವಾಗಿ ಶೀಘ್ರದಲ್ಲೇ ಸದಸ್ಯರು ಹಾಗೂ ಅವರ ಕುಟುಂಬಸ್ಥರ ವಿಹಾರಕೂಟವನ್ನು ಆಯೋಜಿಸಿ ಅಲ್ಲಿ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರಕ್ಕೆ ಬರಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭಿಕರ ಪರವಾಗಿ ಕೃಷ್ಣಪ್ಪ ಎಂ. ಕರ್ಕೇರ, ರಮೇಶ್‌ ಎಂ. ಬಂಗೇರ, ನೀಲಾಧರ ಎಂ. ಸಾಲ್ಯಾನ್‌, ವಸಂತ ಆರ್‌. ಕುಂದರ್‌, ಲೋಕೇಶ್‌ ಎಂ. ಕರ್ಕೇರ, ಸೋಮನಾಥ ಎಸ್‌. ಕರ್ಕೇರ, ರಮೇಶ್‌ ಟಿ. ಮೆಂಡನ್‌, ರಾಮ ಎ. ಪುತ್ರನ್‌, ಮೋಹನ್‌ ಮೆಂಡನ್‌, ಪುರುಷೋತ್ತಮ ಎಲ್‌. ಪುತ್ರನ್‌, ರಮೇಶ್‌ ಎಚ್‌. ಕರ್ಕೇರ, ಆನಂದ ಕೋಟ್ಯಾನ್‌ ಮೊದಲಾದವರು ಉಪಯುಕ್ತ ಸಲಹೆ ನೀಡಿದರು. ರೂಪೇಶ್‌ ಸುವರ್ಣ ವಂದಿಸಿದರು. ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.