ಮತ್ತೆ ಬಂದ ಯಜಮಾನ: ಆಗ ವಿಷ್ಣುವರ್ಧನ್‌ – ಈಗ ದರ್ಶನ್‌


Team Udayavani, Feb 13, 2018, 9:30 PM IST

darshan-(2).jpg

ಫೆಬ್ರವರಿ 16 ದರ್ಶನ್‌ ಹುಟ್ಟುಹಬ್ಬ. ಅಭಿಮಾನಿಗಳ ಸಂಭ್ರಮ ಈಗಾಗಲೇ ಆರಂಭವಾಗಿದೆ. ಈ ನಡುವೆಯೇ ದರ್ಶನ್‌ ಅವರ 51ನೇ ಚಿತ್ರದ ಶೀರ್ಷಿಕೆ ಕುತೂಹಲ ಕೂಡಾ ಅಭಿಮಾನಿಗಳಲ್ಲಿದೆ. ತಮ್ಮ ನೆಚ್ಚಿನ ನಟನ ಚಿತ್ರದ ಟೈಟಲ್‌ ಏನಿರಬಹುದೆಂಬುದನ್ನು ತಿಳಿಯಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಅದಕ್ಕೆ ಈಗ ಉತ್ತರ ಸಿಕ್ಕಿದೆ. ಅದು “ಯಜಮಾನ’. ಹೌದು, ದರ್ಶನ್‌ ಅವರ 51ನೇ ಚಿತ್ರಕ್ಕೆ “ಯಜಮಾನ’ ಎಂದು ಟೈಟಲ್‌ ಇಡಲಾಗಿದೆ.

ಹಾಗಾಗಿ, ಮುಂದಿನ ದಿನಗಳಲ್ಲಿ ದರ್ಶನ್‌ ಅಭಿಮಾನಿಗಳು ಪ್ರೀತಿಯಿಂದ ಅವರನ್ನು ಯಜಮಾನ ಎಂದು ಕರೆಯಬಹುದು. ನಿಮಗೆ ಗೊತ್ತಿರುವಂತೆ “ಯಜಮಾನ’ ಶೀರ್ಷಿಕೆಯಡಿ ಈಗಾಗಲೇ ಚಿತ್ರ ಬಂದಿದೆ. ವಿಷ್ಣುವರ್ಧನ್‌ ಅವರು ನಟಿಸಿರುವ ಈ ಚಿತ್ರ ದೊಡ್ಡ ಯಶಸ್ಸು ಕಂಡಿದೆ. ಈಗ 18 ವರ್ಷಗಳ ನಂತರ ಮತ್ತೆ ಈ ಟೈಟಲ್‌ ರಿಪೀಟ್‌ ಆಗಿದೆ. ಸಹಜವಾಗಿಯೇ ಈಗ ಹಳೆಯ ಯಶಸ್ವಿ ಹಾಗೂ ಸ್ಟಾರ್‌ ನಟರ ಚಿತ್ರಗಳ ಶೀರ್ಷಿಕೆಗಳು ಬಳಕೆಯಾಗುತ್ತಿವೆ.

ಈಗಾಗಲೇ ವಿಷ್ಣುವರ್ಧನ್‌ ಅವರ ಮತ್ತೂಂದು ಯಶಸ್ವಿ ಚಿತ್ರ “ಕೋಟಿಗೊಬ್ಬ’ ಇಟ್ಟುಕೊಂಡು ಸುದೀಪ್‌ ಸಿನಿಮಾ ಮಾಡಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಯಜಮಾನ’. ದರ್ಶನ್‌ “ಯಜಮಾನ’ ಟೈಟಲ್‌ನಡಿ ನಟಿಸುತ್ತಿರುವುದರಿಂದ ದರ್ಶನ್‌ ಅಭಿಮಾನಿಗಳ ಜೊತೆ ವಿಷ್ಣುವರ್ಧನ್‌ ಅವರ ಅಭಿಮಾನಿಗಳು ಕೂಡಾ ಚಿತ್ರದ ಬಗ್ಗೆ ಕುತೂಹಲ ಹೊಂದಿದ್ದಾರೆ. ಈ ಚಿತ್ರವನ್ನು ಬಿ.ಸುರೇಶ್‌ ಹಾಗೂ ಶೈಲಜಾ ನಾಗ್‌ ನಿರ್ಮಿಸುತ್ತಿದ್ದು, ಪಿ.ಕುಮಾರ್‌ ಈ ಸಿನಿಮಾದ ನಿರ್ದೇಶಕರು.

ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನಡೆದಿತ್ತು. ಚಿತ್ರದಲ್ಲಿ ದರ್ಶನ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಫೆಬ್ರವರಿ 19ರಿಂದ ಆರಂಭವಾಗಲಿದೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ,”ಬಹದ್ದೂರ್‌’ ಚೇತನ್‌ ಸಂಭಾಷಣೆ,  ಶ್ರೀಶ ಕೂದುವಳ್ಳಿ ಛಾಯಾಗ್ರಹಣವಿದೆ. ಚಿತ್ರದಲ್ಲಿ ರವಿಶಂಕರ್‌, ದೇವರಾಜ್‌, ಧನಂಜಯ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. 

ಅಂದಹಾಗೆ, ದರ್ಶನ್‌ ಅವರ 50ನೇ ಚಿತ್ರ “ಕುರುಕ್ಷೇತ್ರ’ ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ಬಿಝಿ. ಇನ್ನು, ಈ ಹಿಂದೆ ದರ್ಶನ್‌ “ಒಡೆಯರ್‌’ ಸಿನಿಮಾದಲ್ಲಿ ನಟಿಸುತ್ತಾರೆ ಹಾಗೂ ಈ ಚಿತ್ರವನ್ನು ಸಂದೇಶ್‌ ನಾಗರಾಜ್‌ ನಿರ್ಮಿಸುತ್ತಾರೆಂಬ ಸುದ್ದಿಯನ್ನು ನೀವು ಕೇಳಿರುತ್ತೀರಿ. ಆರಂಭದಲ್ಲಿ ಈ ಚಿತ್ರವನ್ನು ಪವನ್‌ ಒಡೆಯರ್‌ ನಿರ್ದೇಶಿಸುತ್ತಾರೆಂದು ಹೇಳಲಾಗಿತ್ತು. ಆ ನಂತರ ಪವನ್‌ ಬದಲಾದ ಸುದ್ದಿಯೂ ಬಂತು.

ಎಲ್ಲಾ ಓಕೆ, ಹಾಗಾದರೆ “ಒಡೆಯರ್‌’ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆಂದು ನೀವು ಕೇಳಬಹುದು. ಅದಕ್ಕೆ ಉತ್ತರ ಎಂ.ಡಿ. ಶ್ರೀಧರ್‌. ಈಗಾಗಲೇ ಎಂ.ಡಿ.ಶ್ರೀಧರ್‌ ಅವರು ದರ್ಶನ್‌ ಜೊತೆ “ಪೊರ್ಕಿ’ ಹಾಗೂ “ಬುಲ್‌ ಬುಲ್‌’ ಸಿನಿಮಾ ಮಾಡಿದ್ದಾರೆ. ಈಗ “ಒಡೆಯರ್‌’ ಚಿತ್ರ ಮಾಡುವ ಅವಕಾಶ ಸಿಕ್ಕಿದೆ. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.