ಆರೆಸ್ಸೆಸ್‌ ಕೈಯಲ್ಲಿ ಕೇಂದ್ರದ ಆಡಳಿತ: ರಾಹುಲ್‌


Team Udayavani, Feb 14, 2018, 8:37 AM IST

m-14.jpg

ಕಲಬುರಗಿ: ಕೇಂದ್ರ ಸರ್ಕಾರದ ಯಾವುದೇ ಯೋಜನೆ ಹಾಗೂ ಕಾರ್ಯಕ್ರಮ ಜಾರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವೇ ಪ್ರಮುಖವಾಗಿ ಪಾತ್ರ ನಿರ್ವಹಿಸುತ್ತಿದೆ ಎಂದು ಎಐಸಿಸಿಐ ಅಧ್ಯಕ್ಷ ರಾಹುಲ್‌ ಗಾಂಧಿ ಬಲವಾಗಿ ಆರೋಪಿಸಿದರು.

ನಗರದ ಎಚ್‌ಕೆಇ ಸಂಸ್ಥೆ ಸಭಾಂಗಣದಲ್ಲಿ ನವ ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಗಣ್ಯರೊಂದಿಗೆ ಮಂಗಳವಾರ ಸಂವಾದ ನಡೆಸಿದ ಅವರು, ಯೋಜನೆ ಹಾಗೂ ಕಾರ್ಯಕ್ರಮ ಜಾರಿಯಲ್ಲದೇ ಕೇಂದ್ರ ಸರ್ಕಾರದ ಪ್ರತಿ ಇಲಾಖೆಗೂ ಆರ್‌ಎಸ್‌ಎಸ್‌ ಮಾರ್ಗದರ್ಶಕರೂ ಇದ್ದಾರೆ. ಇದೆಲ್ಲವನ್ನು ನವ ಉದ್ಯಮಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.

ನೋಟು ಬ್ಯಾನ್‌ ಮಾಡುವ ಸಂಬಂಧ ಆರ್‌ಬಿಐ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳು ಎಲ್ಲೂ ಹೇಳಿಲ್ಲ. ಅಷ್ಟೇ ಏಕೆ ಹಣಕಾಸು ಖಾತೆ ಸಚಿವ ಅರುಣ್‌ ಜೇಟ್ಲಿ ಸಹ ಸಲಹೆ ನೀಡಿಲ್ಲ ಎಂದಾದ ಮೇಲೆ ರಾತೋರಾತ್ರಿ ಪ್ರಧಾನ ಮಂತ್ರಿ ಮೋದಿ ಅವರು ಆರ್‌ಎಸ್‌ಎಸ್‌ ವ್ಯಕ್ತಿಯೊಬ್ಬರು ನೀಡಿದ್ದ ಸಲಹೆ ಅನುಷ್ಠಾನಗೊಳಿಸಿದರು. ಇದರಿಂದ ಕಾಳಧನಿಕರ ಬಳಿ ಇದ್ದ ಕಪ್ಪು ಹಣ ಬಿಳಿಯಾಗಿಸಿದರು. ಜಿಎಸ್‌ಟಿ ಜಾರಿ ಮುನ್ನ ಪ್ರಾಯೋಗಿಕವಾಗಿ ಪರೀಕ್ಷೆ ಸಹ ನಡೆಸಲಿಲ್ಲ. ಒಂದು ತಂತ್ರಾಂಶ ಸಹ ಕೇಂದ್ರದ ಬಳಿ ಇರ ಲಿಲ್ಲ. ಅದೇ ರೀತಿ ವೈದ್ಯಕೀಯ ಕ್ಷೇತ್ರದಲ್ಲೂ ಹೊಸ ನೀತಿಯೊಂದನ್ನು ಚರ್ಚೆ- ಅಭಿಪ್ರಾಯ ಪಡೆಯದೇ ಜಾರಿಗೆ ಮುಂದಾಗುತ್ತಿದೆ. ಒಟ್ಟಾರೆ ಇದೇ ಮೋದಿ ಅವರ ಆರ್ಥಿಕ ಸುಧಾರಣೆ ಎಂದು ಜರಿದರು.

ಜಿಎಸ್‌ಟಿ ಸರಳೀಕರಣ: ಜಿಎಸ್‌ಟಿ ಸರಳವಾಗಿದೆಯೋ ಇಲ್ಲ ಕ್ಲಿಷ್ಟಕರವಾಗಿದೆ ಎಂದು ರಾಹುಲ್‌ ಗಾಂಧಿ ಅವರೇ ಸಂವಾದದಲ್ಲಿ ಪಾಲ್ಗೊಂಡವರನ್ನು ಪ್ರಶ್ನಿಸಿದರು. ಎಲ್ಲರೂ ಕ್ಲಿಷ್ಟಕರವಾಗಿದೆ ಎಂದು ಘೋಷಣೆ ಕೂಗಿ ಹೇಳಿದರು. ಇದಕ್ಕೆ ರಾಹುಲ್‌ ಗಾಂಧಿ, ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಜಿಎಸ್‌ಟಿಯಲ್ಲಿರುವ ಗೊಂದಲ ನಿವಾರಿಸಿ ಸರಳೀಕರಣಗೊಳಿಸಲಾಗುವುದು ಎಂದರು. ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿಐ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಇದ್ದರು. ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಸಂವಾದ ನಡೆಸಿಕೊಟ್ಟರು.

ಮದುವೆ ಕುರಿತುತೂರಿ ಬಂದ ಪ್ರಶ್ನೆ
ಸಂವಾದದಲ್ಲಿ ಮೊದಲೇ ನಿಗದಿಯಾಗಿದ್ದ 7 ಪ್ರಶ್ನೆಗಳಿಗೆ ರಾಹುಲ್‌ ತಕ್ಕಮಟ್ಟಿಗೆ ಉತ್ತರ ನೀಡಿದರು. ಅಲ್ಲದೇ ಮಹಿಳಾ ನ್ಯಾಯವಾದಿಯೊಬ್ಬರು ಸಲಹೆ ನೀಡಿ ಕೇಳಲಾದ ಪ್ರಶ್ನೆಗೆ ತಲೆದೂಗಿದರು. ಇದರ ನಡುವೆ ಯುವಕನೊಬ್ಬ, ರಾಹುಲ್‌ಜೀ ಮದುವೆ ಯಾವಾಗ ಆಗುತ್ತೀರಿ ಎಂದು ಕೇಳಿದ. ಇದನ್ನು ಕೇಳಿಸಿಕೊಂಡ ರಾಹುಲ್‌, ಥ್ಯಾಂಕು ವೆರಿ ಮಚ್‌ ಎಂದು ಹೇಳಿದರಷ್ಟೇ. ವೇದಿಕೆ ಮೇಲಿರುವವರೂ ಇದನ್ನೇ ಕೇಳಿದ್ದಾರೆ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರತ್ತ ನೋಡಿ ಮುಗುಳ್ನಗೆ ಬೀರಿದರು.
 

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.