ಕಲಬುರಗಿಯಲ್ಲಿ ಉಚಿತ ವೈಫೈ ಸೇವೆ
Team Udayavani, Feb 15, 2018, 9:54 AM IST
ಕಲಬುರಗಿ: ಡಿಜಿಟಲ್ ಕರ್ನಾಟಕದತ್ತ ಹೆಜ್ಜೆಯಿಟ್ಟಿರುವ ರಾಜ್ಯ ಸರ್ಕಾರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಚಿತ ವೈಫೈ ಸೇವೆ ಒದಗಿಸುವ ಯೋಜನೆ ರೂಪಿಸಿದ್ದು, ಅದರಂತೆ ಬುಧವಾರ ಪಾಲಿಕೆ ಆವರಣದಲ್ಲಿ ಸ್ಥಾಪಿಸಲಾದ ವೈಫೈ ಸ್ಮಾರ್ಟ್ ಪೋಲ್ಗೆ ಸಂಸದ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿಯಲ್ಲಿ ಸ್ಥಾಪಿಸಲಾದ ಸ್ಮಾರ್ಟ್ ಪೋಲ್ ರಾಜ್ಯದಲ್ಲಿಯೇ ಮೊದಲ ಹಾಗೂ ದೇಶದ 12ನೇ ಸ್ಮಾರ್ಟ್ ಪೋಲ್.
ಒಂದು ಎಂಬಿಪಿಎಸ್ ವೇಗದೊಂದಿಗೆ ಪ್ರತಿದಿನ ಅನಿಯಮಿತ ಬ್ರೋಸಿಂಗ್ ಹಾಗೂ 100 ಎಂಬಿ ಸೀಮಿತ ಡೌನ್ಲೋಡ್ ಮಾಡಿಕೊಳ್ಳಬಹುದು. ಬರುವ 2-3 ತಿಂಗಳಲ್ಲಿ ನಗರದ ಇತರ 18 ಸ್ಥಳಗಳಲ್ಲಿ ಹಾಗೂ ಬೆಂಗಳೂರಿನ 30 ಪ್ರದೇಶಗಳಲ್ಲಿ ಸ್ಮಾರ್ಟ್ ಪೋಲ್ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.
ಕಲಬುರಗಿ, ಮಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ 11 ಮಹಾನಗರ ಪಾಲಿಕೆಗಳಲ್ಲಿ ವೈಫೈ ಸೇವೆ ಆರಂಭಿಸಲಾಗುತ್ತಿದೆ. ಅಲ್ಲದೇ 2500 ಗ್ರಾಪಂಗಳಲ್ಲಿ ಸಾರ್ವಜನಿಕ ವೈಫೈ ಹಾಟ್ಸ್ಪಾಟ್ ನಿಯೋಜನೆ ಕಾರ್ಯ ಸಹ ಪ್ರಗತಿಯಲ್ಲಿದ್ದು, ಮಾರ್ಚ್ ಅಂತ್ಯದೊಳಗೆ ಮುಗಿಯಲಿದೆ ಎಂದು ಹೇಳಿದರು.
ಇಂಡಸ್ ಟವರ್ ಕರ್ನಾಟಕ ವಲಯದ ಮುಖ್ಯ ಕಾರ್ಯನಿರ್ವಾಹಕ ಸುಬ್ಬು ಅಯ್ಯರ್ ಮಾತನಾಡಿ, ರಾಜ್ಯದಲ್ಲಿ ಸದೃಢ ಡಿಜಿಟಲ್ ಮೂಲ ಸೌಕರ್ಯ ಒದಗಿಸಲು ರಾಜ್ಯ ಸರ್ಕಾರದ ಸಹಭಾಗಿತ್ವದೊಂದಿಗೆ ಸುಮಾರು 4ರಿಂದ 5 ಲಕ್ಷ ರೂ .ವೆಚ್ಚದಲ್ಲಿ ಸ್ಮಾರ್ಟ್ ಪೋಲ್ ನಿರ್ಮಿಸಲಾಗಿದೆ. ಸ್ಮಾರ್ಟ್ ಪೋಲ್ ಕೇಂದ್ರಿಕೃತ 300 ಮೀಟರ್ ವ್ಯಾಪ್ತಿಯಲ್ಲಿ ಉಚಿತ ವೈಫೈ ಸೇವೆ ಸಿಗಲಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಪಾಲಿಕೆ ಆಯುಕ್ತ ರಘುನಂದನ ಮೂರ್ತಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಪಾಲಿಕೆ ಸದಸ್ಯರು, ಇಂಡಸ್ ಟವರ್ ಸಂಸ್ಥೆ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ