ಮೀನುಗಳ ಜತೆ ಗಾಂಜಾತರಿಸಿ ಮಾರುತ್ತಿದ್ದವರ ಸೆರೆ


Team Udayavani, Feb 15, 2018, 12:13 PM IST

blore-7.jpg

ಬೆಂಗಳೂರು: ಒಡಿಶಾದಿಂದ ನಗರಕ್ಕೆ ಥರ್ಮಕೋಲ್‌ ಬಾಕ್ಸ್‌ನಲ್ಲಿ ಒಣ ಮೀನುಗಳ ಜತೆ ಗಾಂಜಾ ತರಿಸಿ ಮಾರಾಟ
ಮಾಡುತ್ತಿದ್ದ ಮೂವರನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಗೋವಿಂದರಾಜು (29), ರಾಮನಗರದ ಬಸವರಾಜ್‌ (28), ಚಾಮರಾಜನಗರದ ಮಹೇಂದ್ರ (22) ಬಂಧಿತರು. ಆರೋಪಿಗಳಿಂದ 75 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಹತ್ತು ವರ್ಷಗಳ ಹಿಂದೆ ನಗರಕ್ಕೆ ಬಂದಿರುವ ಆರೋಪಿಗಳು, ಪೇಟಿಂಗ್‌ ಕೆಲಸ ಮಾಡುತ್ತಿದ್ದರು. ಬಳಿಕ ಹೆಚ್ಚಿನ ಹಣ ಸಂಪಾದಿಸಲು ಈ ದಂಧೆಗೆ ಇಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಕೂಡ ಮಾದಕ ವಸ್ತು ವ್ಯಸನಿಗಳಾಗಿದ್ದು, ಈ ಮೊದಲು ನವೀನ್‌ ಎಂಬಾತನ ಮೂಲಕ ಗಾಂಜಾ ಖರೀದಿಸಿ ಸೇವಿಸುತ್ತಿದ್ದರು. ಆಗಾಗ್ಗ ಆರೋಪಿಗಳನ್ನು ಭೇಟಿಯಾಗುತ್ತಿದ್ದ ನವೀನ್‌, ಹೆಚ್ಚಿನ ಹಣ ಗಳಿಸಲು ದಂಧೆಗೆ ಇಳಿಯುವಂತೆ ಪ್ರೇರೆಪಿಸಿ, ತಾನು ದಂಧೆಯಿಂದ ದೂರವಾಗಿದ್ದ. ಆದರೆ, ಇದೇ ವೇಳೆ ಒಡಿಶಾ ಮೂಲದ ಗಾಂಜಾ ಮಾರಾಟಗಾರ ಸಂಪತ್‌ರಾಜ್‌ ಎಂಬಾತನನ್ನು ಆರೋಪಿಗಳಿಗೆ ಪರಿಚಯಸಿಕೊಟ್ಟಿದ್ದ. ಸಂಪತ್‌ರಾಜ್‌, ಬಂಧಿತರಿಗೆ ತನ್ನೊಂದಿಗೆ ಸೇರಿದರೆ ಲಕ್ಷಾಂತರ ರೂ. ಹಣ ನೀಡುವುದಾಗಿ
ಆಮಿಷವೊಡ್ಡಿದ್ದ. ಅಷ್ಟೇ ಅಲ್ಲದೆ, ಒಂದು ಲಕ್ಷ ರೂ. ಮುಂಗಡ ಹಣ ನೀಡಿ ಮೂವರಿಗೂ ಕೋಣನಕುಂಟೆಯಲ್ಲಿ ಬಾಡಿಗೆ ಮನೆ ಕೊಡಿಸಿದ್ದ. ಜತೆಗೆ ಪ್ರತಿ ತಿಂಗಳು ಬಾಡಿಗೆ ಸಹ ಆತನೇ ಪಾವತಿಸುತ್ತಿದ್ದು, ಮಾಸಿಕ ಸಂಬಳ ನಿಗದಿ ಮಾಡಿದ್ದ. ಇವರ ಮೂಲಕ ತನ್ನ ಗ್ರಾಹಕರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎಂದು ಡಿಸಿಪಿ ಬೋರಲಿಂಗಯ್ಯ ಹೇಳಿದರು. 

ಒಣ ಮೀನಿನಲ್ಲಿ ಗಾಂಜಾ!: ಸಂಪತ್‌ರಾಜ್‌ ಒಡಿಶಾದಿಂದಲೇ ಬಸ್‌ ಹಾಗೂ ಟ್ರಕ್‌ಗಳಲ್ಲಿ ಥರ್ಮಕೋಲ್‌ ಬಾಕ್ಸ್‌ಗಳಲ್ಲಿ ಒಣ ಮೀನು ಇಟ್ಟು ಅದರೊಳಗೆ ಕೆ.ಜಿಗಟ್ಟಲ್ಲೇ ಗಾಂಜಾ ಇಟ್ಟು, ಒಡಿಶಾದಿಂದ ವಿಶಾಖಾಪಟ್ಟಣಂ, ಡೆಂಕಣಿಕೋಟೆ ಮೂಲಕ ನಗರಕ್ಕೆ ಆಗಮಿಸುವ ಬಸ್‌ಗಳ ಮೂಲಕ ಕಳುಹಿಸುತ್ತಿದ್ದ. ಇದನ್ನು ಆರೋಪಿಗಳು ತಮ್ಮ ಬಾಡಿಗೆ ಮನೆಯಲ್ಲಿ ಸಂಗ್ರಹಿಸಿಟ್ಟು, ಬಿಸಿನಲ್ಲಿ ಒಣಗಿಸುತ್ತಿದ್ದರು. ಗಾಂಜಾ ವಾಸನೆಯಿಂದ ಅನುಮಾನಗೊಂಡ ಪ್ರಶ್ನಿಸಿದ ಸ್ಥಳೀಯರಿಗೆ ಮೀನಿನ ವಾಸನೆ ಎಂದು ನಂಬಿಸುತ್ತಿದ್ದರು. ಬಳಿಕ ಹೋಟೆಲ್‌
ನಲ್ಲಿ ಚಪಾತಿಗಳನ್ನು ಪ್ಯಾಕ್‌ ಮಾಡುವ ರೀತಿಯಲ್ಲಿ ಗಾಂಜಾವನ್ನು ರೋಲ್‌ ಮಾಡಿ ಪ್ಯಾಕ್‌ ಮಾಡುತ್ತಿದ್ದರು. ಒಂದು ರೋಲ್‌ ಅನ್ನು 200-500 ರೂಪಾಯಿಗೆ ಸಾಫ್ಟ್‌ ವೇರ್‌ ಎಂಜಿಯರ್‌, ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.