ಗೂಗಲ್‌ನಲ್ಲಿ ಕಂತ್ರಿಬಾಯ್ಸ್ ಶಂಖನಾದ


Team Udayavani, Feb 15, 2018, 1:39 PM IST

Google.jpg

ಈ ವಾರ ಆರು ಚಿತ್ರಗಳು ಬಿಡುಗಡೆಯಾಗುತ್ತಿವೆ. ಈ ಪೈಕಿ “ಶಂಖನಾದ’, “ಗೂಗಲ್‌’ ಮತ್ತು “ಕಂತ್ರಿ ಬಾಯ್ಸ’ ತಂಡದವರು ಮಾಧ್ಯಮದವರೆದುರು ಬಂದು ತಮ್ತಮ್ಮ ಚಿತ್ರಗಳ ಬಗ್ಗೆ ಮಾತನಾಡಿದ್ದಾರೆ. ಯಾವ ತಂಡದ ಯಾರು, ಏನು ಮಾತನಾಡಿದ್ದಾರೆ ಎಂಬ ಕುತುಹೂಲದಿಂದ ಓದುತ್ತಾ ಹೋಗಿ …

ಶಂಖನಾದ
“ಇಲ್ಲಿ ಕಥೆಯೇ ಹೀರೋ, ಚಿತ್ರಕಥೆಯೇ ನಾಯಕಿ… ಅಷ್ಟೇಅಲ್ಲ, ಒಂದೇ ಮನೆ, ಒಂದು ದಿನದ ಕಥೆ. ಹಾಗಂತ, ಹಾರರ್‌ ಸಿನಿಮಾವಂತೂ ಅಲ್ಲ. ಸಸ್ಪೆನ್ಸ್‌ ಥ್ರಿಲ್ಲರ್‌ ಅಂಶವುಳ್ಳ ಹೊಸಬಗೆಯ ಕಥೆ ಇಲ್ಲುಂಟು …’ ನಾಯಕ ಕಮ್‌ ಸಹ ನಿರ್ಮಾಪಕ ಶಾಂತರೆಡ್ಡಿ ಪಾಟೀಲ್‌ ಅವರ ಆತ್ಮವಿಶ್ವಾಸದ ಮಾತುಗಳಿವು. ಇದು ಸಸ್ಪೆನ್ಸ್‌ ಥ್ರಿಲ್ಲರ್‌ ಅಂಶ ಒಳಗೊಂಡ ಚಿತ್ರ. ಬಾಗಲಕೋಟೆ, ಗದಗ ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ಒಂದೇ ಮನೆಯಲ್ಲಿ ಒಂದು ದಿನದ ಕಥೆಯನ್ನು ವಿಭಿನ್ನವಾಗಿ ಹೇಳುವ ಮತ್ತು ತೋರಿಸುವ ಪ್ರಯತ್ನ ಮಾಡಿದೆ ಹೊಸಬರ ತಂಡ. ಉತ್ತರ ಕರ್ನಾಟಕದ ಮೂವರು ಮಂದಿ ಸೇರಿಕೊಂಡು, ರಾಜ್ಯದ ಪ್ರತಿಭಾವಂತರನ್ನು ಕಲೆಹಾಕಿ ಚಿತ್ರ ಮಾಡಿದ್ದಾರೆ. 

ಚಿತ್ರಕ್ಕೆ ವಿಶ್ವನಾಥ್‌ ಬಸಪ್ಪ ಕಾಳಗಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಒಂಭತ್ತು ಪ್ರಮುಖ ಪಾತ್ರಗಳಿದ್ದು, ಆ ಪಾತ್ರಗಳ ಸುತ್ತವೇ ಕಥೆ ಸಾಗಲಿದೆ. ಬದುಕು, ಸಾವಿನ ನಡುವಿನ ಆಟ ಇಲ್ಲಿ ಹೈಲೈಟ್‌. ಒಳ್ಳೆಯವರಿಗೆ ಒಳ್ಳೆಯದಾಗಬೇಕಾದರೆ ಏನಾಗಬೇಕು, ಶಂಖ ಊದಿದಾಗ ಏನೆಲ್ಲಾ ಆಗುತ್ತೆ ಅನ್ನೋದು ಇಲ್ಲಿರುವ ಗುಟ್ಟು. ಚಿತ್ರದಲ್ಲಿ ಒಂದೇ ಹಾಡಿದೆ. ವಿಜಯ ರೆಡ್ಡಿ ಚೌಧರಿ ಅವರು ಈ ಚಿತ್ರ ನಿರ್ಮಿಸಿದ್ದಾರೆ. ಹೀರೋ ಅವರ ಅಳಿಯ. ಹಾಗಾಗಿ ಅವರು ಈ ಸಿನಿಮಾ ಮಾಡೋಕೆ ಕಾರಣವಾಗಿದೆ. ಅಳಿಯನಿಗೆ ಸುಮಾರು ಒಂದು ಕೋಟಿ ರುಪಾಯಿಗೂ ಹೆಚ್ಚು ಸುರಿದಿದ್ದಾರಂತೆ ವಿಜಯ ರೆಡ್ಡಿ. ಚಿತ್ರಕ್ಕೆ ನಯನಾ ನಾಯಕಿ.

ಇಲ್ಲಿ ರಂಗಭೂಮಿ ಕಲಾವಿದ ನಮ್‌ ಶ್ರೀನಿವಾಸ್‌ ಖಳನಟರಾಗಿ ನಟಿಸಿದ್ದಾರೆ. ಶ್ರೀ ಎಂಬ ಇನ್ನೊಬ್ಬ ಹುಡುಗ ಎರಡನೇ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಸುಮಾರು 200 ವರ್ಷಗಳ ಹಳೆಯ ಮನೆಯಲ್ಲಿ ಚಿತ್ರೀಕರಣ ಮಾಡಿರುವುದು ಚಿತ್ರದ ಹೈಲೈಟ್‌. ವಿನು ಮನಸು ಸಂಗೀತ ನೀಡಿದ್ದಾರೆ. ನಕುಲ್‌ ಕ್ಯಾಮೆರಾ ಹಿಡಿದಿದ್ದಾರೆ.

ಕಂತ್ರಿ ಬಾಯ್ಸ್
“ಕಂತ್ರಿ ಬಾಯ್ಸ್ ಎಂಬ ಚಿತ್ರವೂ ಈ ವಾರ ತೆರೆಕಾಣುತ್ತಿದೆ. ಈ ಚಿತ್ರವನ್ನು ಎಸ್‌. ರಾಜು ಚಟ್ನಳ್ಳಿ ಎನ್ನುವವರು ನಿರ್ದೇಶಿಸಿದ್ದಾರೆ. ಇವರಿಗಿದು ಮೊದಲ ಚಿತ್ರ. ಈ ಹಿಂದೆ ಅನೇಕ ಕಾಮಿಡಿ ಧಾರಾವಾಹಿ ಹಾಗೂ ಶೋಗಳಿಗೆ ಬರೆಯುತ್ತಿದ್ದ ಇವರು ಈಗ “ಕಂತ್ರಿ ಬಾಯ್ಸ’ ಮೇಲೆ ನಂಬಿಕೆ ಇಟ್ಟಿದ್ದಾರೆ. ಹೇಮಂತ್‌ ಗೌಡ ಈ ಸಿನಿಮಾದ ನಿರ್ಮಾಪಕರು. “ಸಮಾಜದಲ್ಲಿ ವೇಶ್ಯೆಯೊಬ್ಬಳು ಅನುಭವಿಸುವ ಕಷ್ಟಗಳ ಬಗ್ಗೆ ಇಲ್ಲಿ ಹೇಳಲಾಗಿದೆ. ವೇಶ್ಯೆಯ ಜೀವನಕ್ಕೆ ಕೇವಲ ಆಕೆ ಮಾತ್ರ ಕಾರಣವಾಗಿರೋದಿಲ್ಲ. ಪುರುಷ ಕೂಡಾ ಕಾರಣನಾಗುತ್ತಾನೆ ಎಂಬ ಅಂಶವನ್ನು ಇಲ್ಲಿ ಹೇಳಿದ್ದೇವೆ. ಜೊತೆಗೆ ಕಂತ್ರಿಬಾಯ್ಸ ಮುಂದೆ ಹೇಗೆ ಕಂಟ್ರಿಬಾಯ್ಸ ಆಗುತ್ತಾರೆಂಬ ಅಂಶವೂ ಇಲ್ಲಿದೆ’ ಎಂದು ತಮ್ಮ ಸಿನಿಮಾದ ಬಗ್ಗೆ ವಿವರ ನೀಡುತ್ತಾರೆ ರಾಜು. 

ಚಿತ್ರದಲ್ಲಿ ಅರವಿಂದ್‌, ಸಂಧ್ಯಾ, ಗಡ್ಡಪ್ಪ ಸೇರಿದಂತೆ ಅನೇಕರು ನಟಿಸಿದ್ದಾರೆ. ಈಗಾಗಲೇ ಆಟೋ, ಟ್ಯಾಕ್ಸಿಗಳಲ್ಲಿ “ಕಂತ್ರಿ ಬಾಯ್ಸ’ ಪೋಸ್ಟರ್‌ ಇರುವುದರಿಂದ ಸಿನಿಮಾ ಹಿಟ್‌ ಆಗುತ್ತದೆ ಎಂಬ ವಿಶ್ವಾಸ ರಾಜು ಅವರಿಗಿದೆ.

ಗೂಗಲ್‌
ಒಂದು ದೊಡ್ಡ ಗ್ಯಾಪ್‌ನ ನಂತರ ಗೀತರಚನೆಕಾರ ವಿ. ನಾಗೇಂದ್ರ ಪ್ರಸಾದ್‌ ನಿರ್ದೇಶನ ಮಾಡಿರುವ ಚಿತ್ರ “ಗೂಗಲ್‌’. ಚಿತ್ರ ಈ ವಾರ ತೆರೆಕಾಣುತ್ತಿದೆ. ಈ ಚಿತ್ರದ ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ. ಶುಭಾ ಪೂಂಜಾ ಈ ಚಿತ್ರದ ನಾಯಕಿ. ಇದು ನೈಜ ಘಟನೆಯನ್ನಿಟ್ಟುಕೊಂಡು ತಯಾರಾದ ಸಿನಿಮಾವಂತೆ. ಸುಮಾರು 20 ವರ್ಷಗಳ ಹಿಂದೆ ನಡೆದ ಘಟನೆಯನ್ನು ನಾಗೇಂದ್ರ ಪ್ರಸಾದ್‌ ಈಗ ಸಿನಿಮಾ ಮಾಡಿದ್ದಾರೆ.

“20 ವರ್ಷಗಳ ಹಿಂದೆ ನಡೆದ ಘಟನೆಯನ್ನು ಆಧರಿಸಿ ಸಿನಿಮಾ ಮಾಡಿದ್ದೇನೆ. ಆ ಘಟನೆ ನನಗೂ ಸಂಬಂಧಿಸಿತ್ತು. ನನಗೆ ಪದೇ ಪದೇ ಈ ಘಟನೆಯನ್ನು ಯಾಕೆ ಸಿನಿಮಾ ಮಾಡಬಾರದು ಎಂದು ಕಾಡುತಿತ್ತು. ಹಾಗಾಗಿ ಸಿನಿಮಾ ಮಾಡಿದೆ. ಈ ತರಹದ ಕಥೆಯನ್ನು ಯಾರೂ ಇಲ್ಲಿವರೆಗೆ ಸಿನಿಮಾಕ್ಕೆ ಪ್ರಯತ್ನಿಸಿಲ್ಲ. ತುಂಬಾ ಹೊಸದು ಎನಿಸಿತು. ಪ್ರತಿಯೊಬ್ಬರು ಚಿಂತಿಸಬೇಕಾದ ವಿಷಯ’ ಎಂದು
ಹೇಳಿಕೊಂಡರು ನಾಗೇಂದ್ರ ಪ್ರಸಾದ್‌. 

ಇನ್ನು ಚಿತ್ರದಲ್ಲಿ ಅವರೇ ನಾಯಕರಾಗಿ ನಟಿಸಲೂ ಒಂದು ಕಾರಣವಿದೆಯಂತೆ. ಅದೇನೆಂದರೆ ಚಿತ್ರಕ್ಕೆ ಯಾವುದೇ ಇಮೇಜ್‌ ಇಲ್ಲದ ನಾಯಕ ಬೇಕಿತ್ತಂತೆ. ಜೊತೆಗೆ ಚಿತ್ರದಲ್ಲಿ ನಟಿಸಿದ ಪ್ರತಿ ಕಲಾವಿದರನ್ನು ಹೊಸದಾಗಿ ತೋರಿಸಿದ್ದಾರಂತೆ. ಆ ಮಟ್ಟಿಗೆ ಇದೊಂದು ಕನ್ನಡ ಚಿತ್ರರಂಗಕ್ಕೆ ಹೊಸ ಬಗೆಯ ಸಿನಿಮಾ ಎಂಬುದು ನಾಗೇಂದ್ರ ಪ್ರಸಾದ್‌ ಮಾತು.

ಗೂಗಲ್‌‘ ಚಿತ್ರದ ನಿರ್ಮಾಣದಲ್ಲೂ ನಾಗೇಂದ್ರ ಪ್ರಸಾದ್‌ ತೊಡಗಿಸಿಕೊಂಡಿದ್ದು, ಇವರಿಗೆ ಶ್ರೀಧರ್‌ ಹಾಗೂ ಅಶ್ವತ್ಥ್ ನಾರಾಯಣ್‌ ಸಾತ್‌ ನೀಡಿದ್ದಾರೆ. ಶುಭಾ ಪೂಂಜಾ ಇಲ್ಲಿ ಗೃಹಿಣಿಯಾಗಿ ನಟಿಸಿದ್ದಾರೆ. ಈ ಪಾತ್ರ ಅವರಿಗೆ ತುಂಬಾ ಹೊಸದಂತೆ. ಉಳಿದಂತೆ ಅಮೃತಾ ರಾವ್‌, ದೀಪಕ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. 

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.