ಎಲೆಕ್ಟ್ರಾನಿಕ್‌ ಸಮರ ವ್ಯವಸ್ಥೆಯಲ್ಲಿ ಭಾರತ ಮುಂದೆ


Team Udayavani, Feb 15, 2018, 3:17 PM IST

blore-11.jpg

ಬೆಂಗಳೂರು: ರಕ್ಷಣಾ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಭಾರತ ಎಲೆಕ್ಟ್ರಾನಿಕ್‌ ಸಮರದ ವೃತ್ತಿಪರತೆಯಲ್ಲಿ ವಿಶ್ವದಲ್ಲೇ ಯಶಸ್ವಿ ಹಾಗೂ ಕ್ರಿಯಾಶೀಲ ಬಲವಾಗಿ ಹೊರಹೊಮ್ಮಿದೆ ಎಂದು ಅಮೆರಿಕದ ಅಸೋಸಿಯೇಷನ್‌ ಆಫ್ ಓಲ್ಡ್‌ ಕ್ರೌಸ್‌ (ಎಒಸಿ) ಅಂತಾರಾಷ್ಟ್ರೀಯ ಅಧ್ಯಕ್ಷರಾದ ಲಿಸಾ ಕೆ. ಫ್ರಗ್‌ ಹೇಳಿದರು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ), ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ (ಬಿಇಎಲ್‌), ಎಒಸಿ ಸೇರಿದಂತೆ ಇತರೆ ಸಂಸ್ಥೆಗಳು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಎಲೆಕ್ಟ್ರಾನಿಕ್‌ ಸಮರ’ ಕುರಿತ ಐದನೇ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಸಂವಹನ ಕ್ಷೇತ್ರದಲ್ಲಿ ಸುಧಾರಿತ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಸಮನ್ವಯತೆ ಇತರೆ ಯಶಸ್ವಿ ಕಾರ್ಯ ನಿರ್ವಹಣೆಗೂ ಎಲೆಕ್ಟ್ರಾನಿಕ್‌ ತಂತ್ರಜ್ಞಾನದ ಬಳಕೆ ಉಪಯುಕ್ತವೆನಿಸಿದೆ. ಸೇನಾ ಬಲದ ನಾನಾ ವಿಭಾಗಗಳ ಮಾಹಿತಿ ಒಂದೇ ವೇದಿಕೆಯಡಿ ಸಿಗುವ ವ್ಯವಸ್ಥೆ ಕಲ್ಪಿಸುವುದು ಅತ್ಯವಶ್ಯಕವಾಗಿದೆ. ಏಕೆಂದರೆ ಭವಿಷ್ಯದಲ್ಲಿ ಯುದ್ಧ ಸಂಭವಿಸಿದರೆ ಅದು ಎಲೆಕ್ಟ್ರಾನಿಕ್‌ ತಂತ್ರಜ್ಞಾನ ಆಧಾರಿತವಾಗಿದ್ದು, ಎಲ್ಲ ಸೇನಾ ಬಲಗಳ ಮಾಹಿತಿ ಒಂದೇ ವೇದಿಕೆಯಡಿ ಸಿಗುವ ವ್ಯವಸ್ಥೆ ಕಲ್ಪಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಎಲೆಕ್ಟ್ರಾನಿಕ್‌ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಅಗತ್ಯವಿದ್ದು, ಈ ಕ್ಷೇತ್ರದಲ್ಲಿ ವೃತ್ತಿಪರ ಯುವಜನತೆ ತೊಡಗಿಸಿಕೊಳ್ಳಲು ಮುಂದಾಗಬೇಕು. ಆಗ ಇನ್ನಷ್ಟು ವೈವಿಧ್ಯವಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ಬಳಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಬಿಇಎಲ್‌ ಬೆಂಗಳೂರು ಘಟಕದ ವ್ಯವಸ್ಥಾಪಕ ನಿರ್ದೇಶಕರೂ ಆದ ಅಧ್ಯಕ್ಷ ಎಂ.ವಿ.ಗೌತಮ, “ಎಲೆಕ್ಟ್ರಾನಿಕ್‌ ಸಮರ ವ್ಯವಸ್ಥೆಯಲ್ಲಿ ಬಲವರ್ಧನೆ ಸಾಧಿಸುವುದು ಜಗತ್ತಿನ ಎಲ್ಲ ರಾಷ್ಟ್ರಗಳಿಗೂ ಅನಿವಾರ್ಯವಾಗಿದೆ. ಹಾಗೆಯೇ ಈ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ ಹಾಗೂ ಅನ್ವೇಷಣೆಗೂ ವಿಫ‌ುಲ ಅವಕಾಶವಿದ್ದು, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕಿದೆ ಎಂದು
ಹೇಳಿದರು. 

ಎಲೆಕ್ಟ್ರಾನಿಕ್‌ ಸಮರ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದರೆ ಭವಿಷ್ಯದಲ್ಲಿ ಯುದ್ಧ ಸಂಭವಿಸಿದರೂ ಎದುರಿಸಲು ಸಜ್ಜಾಗಲು ನೆರವಾಗುವ ಜತೆಗೆ ನೆರೆಹೊರೆಯ ರಾಷ್ಟ್ರಗಳೊಂದಿಗೆ ಸೌಹಾರ್ದ ಕಾಪಾಡಿ ಕೊಳ್ಳಲು ಸಹಕಾರಿಯಾಗಲಿದೆ. ಸೇನಾಬಲದ ನಾನಾ ವಿಭಾಗಗಳ ಅಗತ್ಯಗಳು ಸಂಕೀರ್ಣವೆನಿಸುವ ಸಂದರ್ಭದಲ್ಲಿ ಪರಸ್ಪರ ಒಗ್ಗೂಡಿಸಲು ಹಾಗೂ ಜಂಟಿ ನಿರ್ವಹಣೆಗೂ ಪೂರಕವಾಗಿರಲಿದೆ ಎಂದು ತಿಳಿಸಿದರು. 

ಪ್ರಧಾನ ಮಂತ್ರಿಗಳ “ಮೇಕ್‌ ಇನ್‌ ಇಂಡಿಯಾ’ ಪರಿಕಲ್ಪನೆಯು ದೇಶೀಯ ಉತ್ಪನ್ನಗಳ ತಯಾರಿಕೆ ಹಾಗೂ ಬಳಕೆಗೂ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ನೀಡಿದೆ. ಬಿಇಎಲ್‌ ಸಂಸ್ಥೆಯು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೆ ಕಾಯ್ದಿರಿಸಿರುವ ಅನುದಾನದಲ್ಲಿ ಶೇ.15ರಷ್ಟನ್ನು ಎಲೆಕ್ಟ್ರಾನಿಕ್‌ ಸಮರ ವ್ಯವಸ್ಥೆಗೆ ಮೀಸಲಿರಿಸಿದೆ ಎಂದು ಹೇಳಿದರು. ಎಒಸಿ ಭಾರತ
ಶಾಖೆ ಅಧ್ಯಕ್ಷ ಡಾ.ಯು.ಕೆ.ರೇವಂಕರ್‌, ಸಮ್ಮೇಳನ ತಾಂತ್ರಿಕ ಸಮಿತಿಯ ಜೆ.ಶಂಕರ್‌ರಾವ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.