ಶ್ರೀಲಂಕಾ ತಂಡದಿಂದ ಗುಣರತ್ನೆ ಹೊರಕ್ಕೆ
Team Udayavani, Feb 16, 2018, 6:05 AM IST
ಕೊಲಂಬೋ: ಬಲಗೈ ಗಾಯಕ್ಕೆ ತುತ್ತಾಗಿರುವ ಶ್ರೀಲಂಕಾ ತಂಡದ ಆಲ್ರೌಂಡರ್ ಅಸೇಲ ಗುಣರತ್ನೆ ಬಾಂಗ್ಲದೇಶ ವಿರುದ್ಧ ನಡೆಯಲಿರುವ ಟಿ20 ತ್ರಿಕೋನ ಸರಣಿಯಿಂದ ಹೊರಬಿದ್ದಿದ್ದಾರೆ. ಅವರು ಫೀಲ್ಡಿಂಗ್ ಅಭ್ಯಾಸದ ವೇಳೆ ಡೈವ್ ಹೊಡೆಯುವಾಗ ಕೈಗೆ ಗಾಯ ಮಾಡಿಕೊಂಡಿದ್ದರು.
ಗುಣರತ್ನೆ ಕೊಲಂಬೋಗೆ ಮರಳುವ ಮುನ್ನ ಎಂಆರ್ಐ ಸ್ಕ್ಯಾನ್ಗೆ ಒಳಗಾಗಲಿದ್ದಾರೆ. ಗುಣರತ್ನೆ ಗೈರು ಕ್ರೀಲಂಕಾ ತಂಡಕ್ಕೆ ಭಾರೀ ಹೊಡೆತ ನೀಡಿದೆ. ಇನ್ನೊಬ್ಬ ಬ್ಯಾಟ್ಸ್ಮನ್ ಕುಸಲ್ ಪೆರೆರ ಕೂಡ ಗಾಯದ ಸಮಸ್ಯೆಯಿಂದಾಗಿ ಈಗಾಗಲೇ ತ್ರಿಕೋನ ಸರಣಿಯಿಂದ ಹೊರಗುಳಿದಿದ್ದಾರೆ. ಏಂಜೆಲೊ ಮ್ಯಾಥ್ಯೂಸ್ ಅವರೂ ತಂಡದಿಂದ ಹೊರಬಿದ್ದಿರುವುದರಿಂದ ಲಂಕಾ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪೆರೆರ ಸ್ಥಾನಕ್ಕೆ ಕುಸಲ್ ಮೆಂಡಿಸ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ