ಶಾ ಭೇಟಿ: ಕುಕ್ಕೆಯಲ್ಲಿ ಸಂಸದ ಪರಿಶೀಲನೆ


Team Udayavani, Feb 16, 2018, 11:32 AM IST

16-fEB-6.jpg

ಸುಬ್ರಹ್ಮಣ್ಯ : ಕರಾವಳಿಯ ಬಿಜೆಪಿ ಹೆಬ್ಟಾಗಿಲು ಸುಳ್ಯದಿಂದ ಬಿಜೆಪಿಯ ಪಕ್ಷ ಸಂಘಟನೆ ಆರಂಭವಾಗಲಿದ್ದು, ಅಮಿತ್‌ ಶಾ ಅವರು ಕುಕ್ಕೆ ಸುಬ್ರಹ್ಮಣ್ಯದ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಕರಾವಳಿಯ ಕಾರ್ಯಕರ್ತರಲ್ಲಿ ಮತ್ತಷ್ಟು ಶಕ್ತಿ ತುಂಬಲಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಅವರು ಗುರುವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜತೆ ಮಾತನಾಡಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸಂಸದರು, ಅಮಿತ್‌ ಶಾ ಅವರು ತಂಗಲಿರುವ ಕೊಠಡಿಗಳ ವೀಕ್ಷಣೆ ಹಾಗೂ ನವಶಕ್ತಿ ಸಮಾವೇಶ ನಡೆಯುವ ಕುಲ್ಕುಂದದ ಮೈದಾನದ ಪರಿಶೀಲನೆ ನಡೆಸಿ, ಪೂರ್ವಸಿದ್ಧತೆಗಳ ಕುರಿತು ಸ್ಥಳೀಯ ನಾಯಕರ ಜತೆ ಚರ್ಚಿಸಿದರು.

ನವಶಕ್ತಿ ಸಮಾವೇಶದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್ ಗಳಿಂದ ಅಪೇಕ್ಷಿತ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ನಾಯಕರು ಉಪಸ್ಥಿತರಿರುವರು. ಅಮಿತ್‌ ಶಾ ಭೇಟಿ ಹಿನ್ನೆಲೆಯಲ್ಲಿ ಅವರು ತಂಗುವುದಕ್ಕೆ ವ್ಯವಸ್ಥೆ ಹಾಗೂ ಸಮಾವೇಶ ನಡೆಯುವ ಸ್ಥಳದಲ್ಲಿ ಆಗಬೇಕಿರುವ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಲು ಬಂದಿದ್ದೇನೆ. ಎಲ್ಲವೂ ಸುವ್ಯವಸ್ಥಿತವಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ನಾಯಕ ಮೋನಪ್ಪ ಭಂಡಾರಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್‌ ವಳಲಂಬೆ, ಬಿಜೆಪಿ ಪ್ರಮುಖರಾದ ದಿನೇಶ್‌ ಸಂಪ್ಯಾಡಿ, ರಾಜೇಶ್‌ ಎನ್‌.ಎಸ್‌., ಬಿ.ಎನ್‌. ದಿನೇಶ್‌, ಸುಬ್ರಹ್ಮಣ್ಯ ಭಟ್‌, ಚಿದಾನಂದ ಕಂದಡ್ಕ, ಭವಾನಿಶಂಕರ ಪೂಂಬಾಡಿ, ಸತೀಶ್‌ ಮಾನಾಡು, ಮೋನಪ್ಪ ಮಾನಾಡು, ಅಶೋಕ ಆಚಾರ್ಯ, ರಾಜೇಶ್‌ ಕುಲ್ಕುಂದ ಉಪಸ್ಥಿತರಿದ್ದರು.

ಕೊಠಡಿ ಕಾಯ್ದಿರಿಸಲು ಬೇಡಿಕೆ! 
ಅಮಿತ್‌ ಶಾ ಕುಕ್ಕೆ ಸುಬ್ರಹ್ಮಣ್ಯ ಭೇಟಿ ವೇಳೆ ಅವರು ತಂಗುವ ಕೊಠಡಿ ಯಾವುದೆಂದು ಇನ್ನೂ ಅಂತಿಮವಾಗಿಲ್ಲ. ಗುರುವಾರ ಸಂಸದರು ಶಾ ಅವರು ತಂಗುವ ವ್ಯವಸ್ಥೆಗಾಗಿ ಸೂಕ್ತ ಕೊಠಡಿ ಹುಡುಕಾಟ ನಡೆಸಿದರು. ಹಲವು ವಸತಿಗೃಹಗಳನ್ನು ವೀಕ್ಷಿಸಿದ್ದು ಯಾವ ಹೊಟೇಲ್‌ ಎಂಬುದನ್ನು ಅಂತಿಮಪಡಿಸಿಲ್ಲ. ಹುಡುಕಾಟದ ವೇಳೆ ಹಲವು ವಸತಿಗೃಹಗಳ ಮಾಲಕರು ತಮ್ಮ ಕೊಠಡಿ ಕಾಯ್ದಿರಿಸುವಂತೆ ಸಂಸದರಲ್ಲಿ ಬೇಡಿಕೆ ಇಟ್ಟರು. ಅಮಿತ್‌ ಶಾ ತಂಗುವ ಕೊಠಡಿ ಕಾಯ್ದಿರಿಸಲು ನಗರದಲ್ಲಿ ಭಾರಿ ಬೇಡಿಕೆಗಳು ಕೇಳಿಬಂದಿವೆ. ಸ್ಥಳೀಯ ದೇವಸ್ಥಾನದ ವಿವಿಐಪಿ ವಸತಿಗೃಹ, ಶ್ರೀ ಸಂಪುಟ ನರಸಿಂಹ ಮಠದ ವ್ಯಾಸಮಂದಿರ, ಖಾಸಗಿ ಹೊಟೇಲ್‌ ಗಳಾದ ವಿಜಯ ಕಂಫ‌ರ್ಟ್ಸ್, ಅಕ್ಷಯದ್ವಾರ ಹೀಗೆ ಹಲವು ಹೊಟೇಲುಗಳ ಹೆಸರುಗಳು ಕೇಳಿ ಬಂದಿದ್ದು, ಅಂತಿಮವಾಗಿ ದೇಗುಲದ ವಿವಿಐಪಿ ವಸತಿಗೃಹ ‘ಆದಿಶೇಷ’ ಕಾಯ್ದಿರಿಸುವ ಸಾಧ್ಯತೆ ಹೆಚ್ಚಿದೆ.

ಟಾಪ್ ನ್ಯೂಸ್

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.