‘ತಡೆಯಾಜ್ಞೆಗೆ ನಕಾರ; ಕಂಬಳ ಕ್ರೀಡೆ ಇನ್ನು ನಿರಾತಂಕ’


Team Udayavani, Feb 16, 2018, 11:44 AM IST

16-fEB-7.jpg

ಉಪ್ಪಿನಂಗಡಿ: ಪೆಟಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಪೀಠವು ಕಂಬಳಕ್ಕೆ
ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿಲ್ಲ ಎಂಬುದು ನ್ಯಾಯಾಲಯಕ್ಕೂ ಮನವರಿಕೆಯಾಗಿದೆ. ಕಂಬಳ ಕ್ರೀಡೆಗೆ ಅವಕಾಶ ನೀಡಲೆಂದು ಪ್ರಾಣಿಗಳ ಮೇಲಿನ ಹಿಂಸೆ (ಕರ್ನಾಟಕ ತಿದ್ದುಪಡಿ) ಮಸೂದೆಯನ್ನು ರಾಜ್ಯ ಸರಕಾರ ಅಂಗೀಕರಿಸಿದ್ದು, ಕೆಲವೇ ದಿನಗಳಲ್ಲಿ ರಾಷ್ಟ್ರಪತಿಗಳ ಅಂಕಿತ ಬೀಳಲಿದೆ. ಕಂಬಳ ಕ್ರೀಡೆ ನಿರಾಂತಕವಾಗಿ ಸಾಗಲಿದೆ ಎಂದು ಕಂಬಳ ಪರ ಕಾನೂನು ಹೋರಾಟಗಾರ, ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ತಿಳಿಸಿದರು.

ಉಪ್ಪಿನಂಗಡಿ ಪೇಟೆಯಲ್ಲಿ ಕಂಬಳದ ಆಮಂತ್ರಣ ಪತ್ರ ಹಂಚುವ ಕಾರ್ಯಕ್ರಮಕ್ಕೆ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವಠಾರದಲ್ಲಿ ಅಧಿಕೃತ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತುಳುನಾಡಿನ ಪ್ರಾಚೀನ ಜನಪದ ಕ್ರೀಡೆಯೂ ಧಾರ್ಮಿಕ ಆರಾಧನೆಯೂ ಆಗಿರುವ ಕಂಬಳವನ್ನು ಉಳಿಸಿ ಬೆಳೆಸಲು
ಯಾವ ರೀತಿಯ ಹೋರಾಟಕ್ಕೂ ಸಿದ್ಧರಿದ್ದು, ಸುಪ್ರೀಂಕೋರ್ಟ್‌ ಕಂಬಳಕ್ಕೆ ಅವಕಾಶ ಕಲ್ಪಿಸಿರುವುದು ನಮ್ಮ ಹೋರಾಟಕ್ಕೆ ಸಂದ ಜಯ. ಉಪ್ಪಿನಂಗಡಿಯಲ್ಲಿ ಈ ಬಾರಿಯ ವಿಜಯ- ವಿಕ್ರಮ ಕಂಬಳವು ಫೆ. 24 ಮತ್ತು
25ರಂದು ಅದ್ದೂರಿಯಾಗಿ ನಡೆಯಲಿದ್ದು, ಇದು ಕಂಬಳದ ಅಂತಿಮ ವಿಜಯಕ್ಕೆ ನಾಂದಿಯಾಗಲಿ. ಆಮೇಲೂ ಪೆಟಾದವರು ಅಡ್ಡಿ ಪಡಿಸಿದರೆ ಕಾನೂನು ಸಮರ ಮುಂದುವರಿಸುತ್ತೇವೆ. ಜಾತಿ, ಧರ್ಮ, ರಾಜಕೀಯ ಭೇದ ಮರೆತು ಮರೆತು ಹೋರಾಟ ನಡೆಸುತ್ತೇವೆ ಎಂದರು.

ಆಮಂತ್ರಣ ಪತ್ರಿಕೆ ವಿತರಣೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪ್ರಕಾಶ್‌ ರೈ ಬೆಳ್ಳಿಪ್ಪಾಡಿ ಅವರಿಗೆ ಆಮಂತ್ರಣ ಪತ್ರಿಕೆ ನೀಡುವ ಮೂಲಕ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ದೇವಾಲಯದ ವಠಾರದಿಂದ ಕೊಂಬು, ವಾಲಗದೊಂದಿಗೆ ಮೆರವ ಣಿಗೆಯಲ್ಲಿ ಬಸ್‌ ನಿಲ್ದಾಣ, ಬ್ಯಾಂಕ್‌ ರಸ್ತೆ ಮೂಲಕ ಗಾಂಧಿ ಪಾರ್ಕ್‌ ಆಗಿ ಬೈಪಾಸ್‌ ರಸ್ತೆಯಾಗಿ ಬಂದು ಪೇಟೆಯಿಡೀ ಕಂಬಳದ ಆಮಂತ್ರಣ ಪತ್ರಿಕೆ ನೀಡಲಾಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷ ಎನ್‌. ಉಮೇಶ್‌ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,
ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆ ಹಿತ್ಲು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಉಪಾ ಧ್ಯಕ್ಷ ರಾಮಚಂದ್ರ ಮಣಿಯಾಣಿ, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಕೃಷ್ಣಪ್ರಸಾದ್‌ ಬೊಳ್ಳಾವು, ಸುರೇಶ್‌ ಅತ್ರಮಜಲು, ಯೋಗೀಶ್‌ ಸಾಮಾನಿ ಸಂಪಿಗೆದಡಿ, ನ್ಯಾಯವಾದಿ ಅನಿಲ್‌ ಕುಮಾರ್‌ ಉಪ್ಪಿನಂಗಡಿ, ದಿಲೀಪ್‌ ಶೆಟ್ಟಿ ಕರಾಯ, ಹರಿಪ್ರಸಾದ್‌ ಶೆಟ್ಟಿ ಬೊಳ್ಳಾವು, ಆದರ್ಶ ಶೆಟ್ಟಿ ಕಜೆಕ್ಕಾರ್‌, ರಮೇಶ್‌ ಭಂಡಾರಿ, ಹರಿಶ್ಚಂದ್ರ ಆಚಾರ್ಯ, ರಾಜಗೋಪಾಲ್‌ ಹೆಗ್ಡೆ, ರವಿ ಮರಿಕೆ, ಲೋಕಾನಂದ ಉಪಸ್ಥಿತರಿದ್ದರು.

ಎಲ್ಲರಿಗೂ ಊಟದ ವ್ಯವಸ್ಥೆ
ಉಪ್ಪಿನಂಗಡಿಯ ಕಂಬಳವು ವಿಜೃಂಭಣೆಯಿಂದ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಸದರಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ, ಶಾಸಕಿ ಶಕುಂತಳಾ ಟಿ. ಶೆಟ್ಟಿ, ಸಹಕಾರ ಮಹಾ ಮಂಡಲದ ರಾಜ್ಯಾಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರಕುಮಾರ್‌, ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ ಭಾಗವಹಿಸಲಿದ್ದಾರೆ. ಈ ಬಾರಿ ವಿಜಯ- ವಿಕ್ರಮ ಕಂಬಳದ ಸಂದರ್ಭ ಎಲ್ಲ ಕಂಬಳಾಭಿಮಾನಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.