ಸರ್ವ ಜನಾಂಗಕ್ಕೆ ದಾರಿ ತೋರುವ ಮಹಾಪುರುಷ: ಸುಶೀಲಾ
Team Udayavani, Feb 16, 2018, 11:47 AM IST
ಸೇಡಂ: ಸಂತ ಸೇವಾಲಾಲ ಮಹಾರಾಜರು ಸರ್ವ ಜನಾಂಗಕ್ಕೆ ದಾರಿ ತೋರುವ ಮಹಾನ್ ವ್ಯಕ್ತಿತ್ವ ಹೊಂದಿದವರು ಎಂದು ಸಹಾಯಕ ಆಯುಕ್ತೆ ಡಾ| ಸುಶೀಲಾ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಪ್ರಥಮ ಬಾರಿಗೆ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡು ಸಂತ ಸೇವಾಲಾಲ ಮಹಾರಾಜರ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸೇವಾಲಾಲ ಮಹಾರಾಜರು ಕೇವಲ ಬಂಜಾರಾ ಸಮಾಜಕ್ಕೆ ಸೀಮಿತವಲ್ಲ.
ಅವರ ಆದರ್ಶಮಯ ಬದುಕು ಇಡೀ ಜೀವ ಸಂಕುಲಕ್ಕೆ ದಾರಿಮಾಡಿ ಕೊಡುವಂತದ್ದು. ಯುವ ಜನತೆ ಅವರ ದಾರಿಯಲ್ಲಿ ನಡೆಯುವ ಮೂಲಕ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಎಂದರು. ತೋಟಗಾರಿಕೆ ಮಹಾಮಂಡಳಿ ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರಾವ ಮಾಲಿಪಾಟೀಲ, ಉಪನ್ಯಾಸಕ ಪಿ.ಜಿ. ರಾಠೊಡ ಮಾತನಾಡಿದರು.
ತಾಪಂ ಅಧ್ಯಕ್ಷೆ ಸುರೇಖಾ ಪುರಾಣಿಕ, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಚವ್ಹಾಣ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ ಪಾಟೀಲ ಹೂಡಾ, ಪ್ರೋಬೇಷನರಿ ತಹಶೀಲ್ದಾರ್ ಅಜುಂತಬಸುಮ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೊಡ, ಬಂಜಾರ ಸಮಾಜದ ತಾಲೂಕಾಧ್ಯಕ್ಷ ರಾಜು ಚವ್ಹಾಣ, ನಗರಧ್ಯಕ್ಷ ಅಶೋಕ ಪವಾರ, ಗೋಪಾಲ ರಾಠೊಡ, ಹೆಮ್ಲಾ ನಾಯಕ ಇದ್ದರು. ಸುಬ್ಬಣ್ಣ ಜಮಖಂಡಿ ಸ್ವಾಗತಿಸಿದರು. ಶಿವಶಂಕರಯ್ಯಸ್ವಾಮಿ ನಿರೂಪಿಸಿದರು. ಶರಣಯ್ಯಸ್ವಾಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?