ಬಹಿರ್ಮುಖಿ-ಅಂತರ್ಮುಖಿ ರಾಯರು
Team Udayavani, Feb 17, 2018, 8:15 AM IST
ಉಡುಪಿ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳು ಪವಾಡ ಪುರುಷರು ಮಾತ್ರವಲ್ಲ; ಅವರು ಏಕಕಾಲದಲ್ಲಿ ಅಂತರ್ಮುಖೀ ಮತ್ತು ಬಹಿರ್ಮುಖೀ ವ್ಯಕ್ತಿತ್ವ ಹೊಂದಿದ ಮಹಾಪುರುಷರು ಕೂಡ ಆಗಿದ್ದರು ಎಂದು ಪರ್ಯಾಯ ಶ್ರೀ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು.
ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠ ಮತ್ತು ಮಂತ್ರಾಲಯ ಶ್ರೀ ರಾಘವೇಂದ್ರ ಸಪ್ತಾಹ ಕಾರ್ಯಾಚರಣ ಸಮಿತಿ ವತಿಯಿಂದ ಫೆ.16ರಿಂದ 22ರ ವರೆಗೆ ಆಯೋಜಿಸಲಾದ ಶ್ರೀ ರಾಘವೇಂದ್ರ ಸಪ್ತಾಹ ರಜತೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಮಂತ್ರಾಲಯ ಶ್ರೀ ರಾಘ ವೇಂದ್ರ ಸ್ವಾಮಿ ಮಠದ ಶ್ರೀ ಸುಬು ಧೇಂದ್ರತೀರ್ಥ ಶ್ರೀಪಾದರು ಮತ್ತು ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಮಂತ್ರಾಲಯದ ವಿದ್ವಾನ್ ರಾಜಾ ಗಿರಿಯಾಚಾರ್ಯ, ಮಠದ ದಿವಾನ ಶಿಬರೂರು ವೇದವ್ಯಾಸ ತಂತ್ರಿ, ಚಿಂತರವೇಲಿಯ ಅದ್ಯ ಕೇಶವಾಚಾರ್ಯ ಉಪಸ್ಥಿತ ರಿದ್ದರು. ಮಂತ್ರಾಲಯ ರಾಘವೇಂದ್ರ ಮಠದ ವೃಂದಾವನದ ಪ್ರಧಾನ ಅರ್ಚಕ ಪರಿಮಳಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಹ್ಲಾದ ರಾವ್ ಕಾರ್ಯಕ್ರಮ ನಿರ್ವಹಿಸಿದರು.
ನೇರಪ್ರಸಾರ ಆ್ಯಪ್: ರಾಘವೇಂದ್ರ ಸಪ್ತಾಹದ ನೇರಪ್ರಸಾರವನ್ನು “ವಿಆರ್ ಡಿವೋಟಿ’ ಆ್ಯಪ್ ಮೂಲಕ 360 ಡಿಗ್ರಿ ವರ್ಚುವಲ್ ರಿಯಾಲಿಟಿ (ವಿಆರ್) ಯಲ್ಲಿ ವೀಕ್ಷಿಸಬಹುದಾಗಿದೆ.
ಹಸುವಿದ್ದಲ್ಲಿ ಕರು, ಕರುವಿದ್ದಲ್ಲಿ ಹಸು
ರಾಘವೇಂದ್ರ ಸ್ವಾಮಿಗಳು ಕಾಮಧೇನು. ಕರು ಇದ್ದಲ್ಲಿಗೆ ಹಸು ಬರುತ್ತದೆ. ಹಸು ಇದ್ದಲ್ಲಿ ಕರು ಬರುತ್ತದೆ. ಅಂತೆಯೇ ಸ್ವಾಮಿಗಳು ಭಕ್ತರ ಬಳಿ ಬಂದು ಕೂಡ ಅನುಗ್ರಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕಳೆದ 25 ವರ್ಷಗಳಿಂದ ರಾಯರ ಉತ್ಸವವನ್ನು ವಿವಿಧ ರಾಜ್ಯಗಳಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ. ಎಂದು ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ