ಜೇವರ್ಗಿಯಲ್ಲಿ ಕಮಲ ಜಾತ್ರೆ ಆರಂಭ
Team Udayavani, Feb 17, 2018, 12:16 PM IST
ಜೇವರ್ಗಿ: ಪಟ್ಟಣದ ವಿಜಯಪುರ ರಸ್ತೆ ಶಿಕ್ಷಕರ ಕಾಲೋನಿ ಹತ್ತಿರದ ಗೋಗಿ ಲೇಔಟ್ ಬಡಾವಣೆಯಲ್ಲಿ ಆಯೋಜಿಸಲಾದ ಕಮಲ ಜಾತ್ರೆಗೆ ಶುಕ್ರವಾರ ಅದ್ಧೂರಿ ಚಾಲನೆ ದೊರಕಿದೆ.
ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜೇವರ್ಗಿ ಪಟ್ಟಣದಲ್ಲಿ ಆಯೋಜಿಸಲಾದ ಕಮಲ ಜಾತ್ರೆಗೆ ಮಾಜಿ ಸಚಿವ ರೇವುನಾಯಕ ಬೆಳಮಗಿ, ಮಾಜಿ ಶಾಸಕರಾದ ಎಂ.ವೈ. ಪಾಟೀಲ, ಶಶೀಲ ನಮೋಶಿ, ದೊಡ್ಡಪ್ಪಗೌಡ ಪಾಟೀಲ ಜಂಟಿಯಾಗಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್ ಕುರಿತು ಹಾಗೂ ಕೇಂದ್ರದ ಮೋದಿ ಸರ್ಕಾರದ ಯೋಜನೆಗಳ ಕುರಿತು ಚಾಯ್ ಪೇ ಚರ್ಚಾ ನಡೆಸಲಾಯಿತು. ಬೆಂಗಳೂರಿನ ಖ್ಯಾತ ಕಲಾವಿದರಿಂದ ಜಾದು ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಬಿಸಿಲಿನ ಕಾರಣ ಜನ ಹೆಚ್ಚಾಗಿ ಜಾತ್ರೆಗೆ ಆಗಮಿಸಿರಲಿಲ್ಲ. ಸಂಜ ಎ ಸಹಸ್ರಾರು ಕುಟುಂಬದ ಸದಸ್ಯರೊಡನೆ ಆಗಮಿಸಿದ್ದು ಕಂಡು ಬಂತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಾಧನೆಗಳ ಕುರಿತು ಛಾಯಾಚಿತ್ರ ಪ್ರದರ್ಶನ ಜತೆಗೆ ಚಿಕ್ಕ ಚಿಕ್ಕ ಮಕ್ಕಳು ಹಾಗೂ ಯುವಕರು ಕೈ ಮೇಲೆ ಕಮಲ ಚಿತ್ರ ಬಿಡಿಸಿಕೊಂಡು ಸಂತಸ ಪಟ್ಟರು. ಕಡಿಮೆ ದರದಲ್ಲಿ ಆಹಾರ ಮಳಿಗೆ ಕೂಡ ತೆರೆಯಲಾಗಿತ್ತು. ಒಟ್ಟಾರೆ ಪಟ್ಟಣ ಸೇರಿದಂತೆ ತಾಲೂಕಿನ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಮಲ ಜಾತ್ರೆ ಒಂದು ಹೊಸ ಅನುಭವ ನೀಡಿದಂತಾಗಿದೆ.
ಸೆಲ್ಫಿಗೆ ಮುಗಿಬಿದ್ದ ಜನರು: ಜಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಬಿಎಸ್ವೈ ಭಾವಚಿತ್ರಗಳೊಂದಿಗೆ ಯುವಕರು ಸೆಲ್ಫಿ ತೆಗೆದುಕೊಂಡರು.
ಸೆಲ್ಫಿತೆಗೆದುಕೊಂಡ ಕ್ಷಣಾರ್ಧದಲ್ಲಿಯೇ ಚಿತ್ರ ಪ್ರತಿಗಳನ್ನು ಉಚಿತವಾಗಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು ಬಲೂನ್ ಒಡೆದು, ಜೋಕಾಲಿ, ಉಯ್ನಾಲೆ ಆಟ ಆಡಿ ಸಂತಸ ಪಟ್ಟರೆ ವೃದ್ದರು ಚಾಯ್ ಪೇ ಚರ್ಚಾದಲ್ಲಿ ಬಿಜಿಯಾಗಿದ್ದರು. ಮಹಿಳೆಯರು ಬಣ್ಣ ಬಣ್ಣದ ಬಳೆ ತೊಟ್ಟು ಖುಷಿಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !