ಕರಾವಳಿ ಜಿಲ್ಲೆಗಳಲ್ಲಿ ಶಾ ಓಟಿನ ಬೇಟೆ ಶುರು


Team Udayavani, Feb 20, 2018, 11:01 AM IST

karavali.jpg

ಮಂಗಳೂರು: ಬಿಜೆಪಿಯ ರಾಜಕೀಯ ತಂತ್ರಗಾರಿಕೆಯ ಚಾಣಕ್ಯ ಹಾಗೂ ಆ ಪಕ್ಷದ  ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ 3 ದಿನಗಳ ಕರಾವಳಿ ಭೇಟಿ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ್ದಾಗಿದೆ. ಶಾ ಭೇಟಿಯೊಂದಿಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆ ಗಳಲ್ಲಿ ಬಿಜೆಪಿ ನಾಯಕರು ಅಧಿಕೃತವಾಗಿ ಚುನಾವಣೆಯ ಅಖಾಡಕ್ಕಿಳಿದು ತೊಡೆ ತಟ್ಟಿಕೊಳ್ಳಲಿದ್ದಾರೆ.

ಪ್ರಮುಖ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಘಟಾನುಘಟಿ ನಾಯ ಕರು ಒಬ್ಬರ ಹಿಂದೊಬ್ಬರು ಕರ್ನಾಟಕಕ್ಕೆ ಭೇಟಿ ನೀಡುತ್ತಿರುವುದು ಈ ಎರಡೂ ಪಕ್ಷ ಗಳು ಈ ಬಾರಿ ಜನಾದೇಶ ಪಡೆದುಕೊಳ್ಳು ವುದಕ್ಕೆ  ಶಕ್ತಿಮೀರಿದ ಕಸರತ್ತಿನಲ್ಲಿ ತೊಡಗಿವೆ ಎನ್ನುವುದಕ್ಕೆ ನಿದರ್ಶನ. ಕಳೆದ ವಾರವಷ್ಟೇ ರಾಹುಲ್‌ ಗಾಂಧಿ ಉತ್ತರ ಕರ್ನಾಟಕದಲ್ಲಿ ಸಮಾವೇಶ, ರ್ಯಾಲಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಶಾ ಕರಾವಳಿಯಲ್ಲಿ ತಂತ್ರಗಾರಿಕೆಯ ಜಾಲ ಹರಡಲು ಆಗಮಿಸಿದ್ದಾರೆ. 

ವಿಮಾನವಿಳಿದೊಡನೆ ಭಾಷಣ: ಕರಾವಳಿಗೆ ಕಾಲಿಟ್ಟ ಬಳಿಕ ಒಂದು ಕ್ಷಣವನ್ನೂ ವ್ಯರ್ಥ ಮಾಡದೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವುದಕ್ಕೆ ಬಳಸಿಕೊಂಡಿದ್ದಾರೆ. ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವರ ದರ್ಶನ ಪಡೆದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಿದ್ದಾರೆ, ಜತೆಗೆ ಪಕ್ಷದ ಪ್ರಮುಖರ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಮತ್ತು ಜಿಲ್ಲಾ ಪ್ರಮುಖರು ಈ ಸಭೆಯಲ್ಲಿ ಭಾಗವಹಿದ್ದು,

ಈ ವೇಳೆ ಶಾ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಟ್ಟು ರಾಜಕೀಯ ಸ್ಥಿತಿಗತಿ ಹಾಗೂ ಬಿಜೆಪಿಗೆ ಪೂರಕ ಅಂಶಗಳು ಮತ್ತು ಸವಾಲುಗಳು, ಪಕ್ಷ ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ನಡೆದಿರುವ ಕಾರ್ಯಗಳ ಬಗ್ಗೆ ಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಫೆ. 21ರಂದು ಅಮಿತ್‌ ಶಾ ಐದು ಜಿಲ್ಲೆ ಗಳನ್ನೊಳಗೊಂಡ ಮಂಗಳೂರು ಮತ್ತು ಶಿವಮೊಗ್ಗ ವಿಭಾಗಗಳ ಬಿಜೆಪಿ ಶಕ್ತಿಕೇಂದ್ರಗಳ ಪ್ರಮುಖರ ಜತೆ ಸಭೆ ಉಡುಪಿಯಲ್ಲಿ ನಡೆಸಲಿದ್ದಾರೆ.

ಮುಂದಿನ ಚುನಾವಣೆ ಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆ, ಕಾರ್ಯತಂತ್ರಗಳ ಕುರಿತು ಆಗಿರುವ ಪ್ರಗತಿಯ ಬಗ್ಗೆ ಅವಲೋಕನ ನಡೆಸಲಿದ್ದಾರೆ. ಆಗಬೇಕಾಗಿರುವ ಮುಂದಿನ ಕಾರ್ಯತಂತ್ರಗಳ ಕುರಿತು ಸೂಕ್ತ ನಿರ್ದೇಶಗಳನ್ನು ಇದೇ ಸಂದರ್ಭದಲ್ಲಿ ಅವರು ರಾಜ್ಯದಲ್ಲಿನ ಪಕ್ಷದ ಪ್ರಮುಖರಿಗೆ ನೀಡುವ ಸಾಧ್ಯತೆಯಿದೆ.

ಸಂಘಟನಾತ್ಮಕ ಸಮಾವೇಶಗಳು: ವಿದ್ಯಾರ್ಥಿಗಳೊಂದಿಗೆ ಸಂವಾದ, ಬೂತ್‌ ಪ್ರಮುಖರ ಸಮಾವೇಶ, ಯುವ ಮತದಾರ ರೊಂದಿಗೆ ಸಂವಾದ, ಶಕ್ತಿಕೇಂದ್ರಗಳ ಪ್ರಮು ಖರ ಸಭೆ, ಮೀನುಗಾರರ ಸಮಾವೇಶ, ಸಾಮಾಜಿಕ ಜಾಲತಾಣ ವಿಭಾಗದ ಪ್ರಮು ಖರ ಜತೆ ಸಮಾಲೋಚನೆ ಸೇರಿದಂತೆ ಅಮಿತ್‌ ಶಾ ವ್ಯೂಹಾತ್ಮಕವಾಗಿ ತಮ್ಮ ಪ್ರವಾಸ ವನ್ನು ಹೆಣೆದಿದ್ದಾರೆ. 

ವಿಳಂಬ ಕಾರ್ಯತಂತ್ರ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಬಹಳಷ್ಟು ಆಕಾಂಕ್ಷಿಗಳಿದ್ದಾರೆ. ಅವಕಾಶ ನಿರೀಕ್ಷೆ ಹೊಂದಿ ಕ್ಷೇತ್ರದಲ್ಲಿ ತಮ್ಮ ನೆಲೆಯನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಆಕಾಂಕ್ಷಿಗಳು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದ್ದು, ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಆದರೆ ಅಮಿತ್‌ ಶಾ ಅವರ ಲೆಕ್ಕಾಚಾರ ಬೇರೆಯೇ ಆಗಿದೆ. ಈಗಾಗಲೇ ನಡೆಸಿರುವ ರಹಸ್ಯ ಸಮೀಕ್ಷೆಯ ವರದಿ ಅವರ ಬಳಿ ಇದ್ದು, ಪಟ್ಟಿ ಬಿಡುಗಡೆಯಲ್ಲಿ ವಿಳಂಬ ಕಾರ್ಯತಂತ್ರ ಅನುಸರಿಸುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.