ಸ್ವಚ್ಛತೆಗಾಗಿ ಕ್ಲೀನ್‌ ಬೆಂಗಳೂರು


Team Udayavani, Feb 20, 2018, 11:45 AM IST

swachchate.jpg

ಬೆಂಗಳೂರು: ಸ್ವಚ್ಛ ಬೆಂಗಳೂರಿನ ಕನಸು ನಿಮ್ಮದಾಗಿದೆಯೇ? ನಿಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛ ಹಾಗೂ ಸುಂದರವಾಗಿರಿಸಲು ಬಯಸುವಿರಾ? ಹಾಗಿದ್ದರೆ, ಸ್ವಚ್ಛತಾ ಕಾರ್ಯಕ್ಕೆ ಅಗತ್ಯ ಉಪಕರಣಗಳು, ಯಂತ್ರಗಳು ಹಾಗೂ ಸಿಬ್ಬಂದಿ ನೀಡಲು ಬಿಬಿಎಂಪಿ ಸಿದ್ಧವಿದೆ… 

ಹೌದು, ಸcಚ್ಛ ನಗರವನ್ನು ನಿರ್ಮಸಲು ಮುಂದಾಗಿರುವ ಬಿಬಿಎಂಪಿ, ಫೆ. 24 ರಿಂದ ಮಾ. 4ರವರೆಗೆ ನಗರದಲ್ಲಿ “ಕ್ಲೀನ್‌ ಬೆಂಗಳೂರು’ ಅಭಿಯಾನ ನಡೆಸಲು ಮುಂದಾಗಿದ್ದು, ಅಭಿಯಾನದಲ್ಲಿ ಭಾಗವಹಿಸಲು ನಾಗರಿಕರಿಗೆ ಮುಕ್ತ ಆಹ್ವಾನ ನೀಡಿದೆ.

ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯಿಂದ ನಗರದಲ್ಲಿ ಸ್ವಚ್ಛ ಸರ್ವೇಕ್ಷನ್‌ ಸಮೀಕ್ಷೆ ಆರಂಭವಾಗಿದೆ. ಆ ಹಿನ್ನೆಲೆಯಲ್ಲಿ ಉತ್ತಮ ರ್‍ಯಾಂಕಿಂಗ್‌ ಪಡೆಯಲು ಸ್ವಚ್ಛತೆಗೆ ಆದ್ಯತೆ ನೀಡಿರುವ ಪಾಲಿಕೆಯ ಅಧಿಕಾರಿಗಳು ನಗರದಲ್ಲಿ ಒಂದು ವಾರ ಕ್ಲೀನ್‌ ಬೆಂಗಳೂರು ಅಭಿಯಾನ ನಡೆಸಲು ತೀರ್ಮಾನಿಸಿದ್ದಾರೆ.

ಹಾಗಾಗಿ ನಾಗರಿಕ ಕ್ಷೇಮಾಭಿವೃದ್ಧಿ ಸಂಘಗಳು, ಸ್ವಯಂ ಸೇವಾ ಸಂಘಗಳು, ಸ್ವಯಂ ಸೇವಕರು ಹಾಗೂ ನಾಗರಿಕರನ್ನು ಅಭಿಯಾನದಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ. ನಗರದ ಆರ್ಟಿರಿಯಲ್‌, ಸಬ್‌ ಆರ್ಟಿರಿಯಲ್‌ ರಸ್ತೆಗಳು, ಮೇಲ್ಸೇತುವೆಗಳು-ಕಳೆಸೇತುವೆಗಳು, ಮಳೆನೀರು ಕಾಲುವೆಗಳು, ಹೊರವರ್ತುಲ ರಸ್ತೆಗಳು, ಕೆರೆ, ಉದ್ಯಾನ, ಆಟದ ಮೈದಾನ ಸೇರಿ ಪ್ರಮುಖ ಭಾಗಗಳಲ್ಲಿ ಸುರಿಯಲಾಗಿರುವ ಘನತ್ಯಾಜ್ಯ, ಕಟ್ಟಡ ತ್ಯಾಜ್ಯ, ಪೋಸ್ಟರ್‌ಗಳು, ಭಿತ್ತಿಪತ್ರಗಳನ್ನು ತೆರವುಗೊಳಿಸುವುದು ಅಭಿಯಾದ ಉದ್ಧೇಶವಾಗಿದೆ.

ಅಭಿಯಾದಲ್ಲಿ ಪಾಲ್ಗೊಳ್ಳುವ ನಾಗರಿಕರ ಅಗತ್ಯಕ್ಕೆ ಪಾಲಿಕೆಯ ಅಧಿಕಾರಿಗಳು, ಸ್ವಚ್ಛತಾ ಕಾರ್ಯಕ್ಕೆ ಅಗತ್ಯ ಉಪಕರಣಗಳು, ಟ್ರಾಕ್ಟರ್‌, ಯಂತ್ರೋಪಕರಣಗಳು, ಜೆಸಿಬಿ, ತಳ್ಳುವ ಗಾಡಿ, ಅರೆ ಕೌಶಲ್ಯ ಕಾರ್ಮಿಕರು, ಕಟ್ಟಡ ನಿರ್ಮಾಣ ಸಾಮಾಗ್ರಿಗಳು ಸೇರಿ ಸುರಕ್ಷತಾ ಪರಿಕರಗಳನ್ನು ನೀಡಲು ಪಾಲಿಕೆ ಸಿದ್ಧವಿದೆ. ಅಗತ್ಯ ಪರಿಕರಗಳ ಸಹಾಯಕ್ಕೆ ಬಿಲ್ಡರ್‌ಗಳು ಭರವಸೆ ನೀಡಿದ್ದಾರೆ.

ಅಭಿಯಾನ ಪ್ರಮುಖ ಉದ್ದೇಶಗಳು 
– ಹಲವಾರು ದಿನಗಳಿಂದ ತೆರವಾಗದೆ ಉಳಿದಿರುವ ಕಟ್ಟಡ ಅವಶೇಷ ಹಾಗೂ ಘನತ್ಯಾಜ್ಯ ವಿಲೇವಾರಿ ಮಾಡುವುದು 
– ನಗರದ ಪ್ರಮುಖ ಜಂಕ್ಷನ್‌ಗಳನ್ನು ಸುಂದರಗೊಳಿಸುವುದು
– ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಸುಂದರೀಕರಣ 
– ಬ್ಯಾನರ್‌ಗಳು, ಬಂಟಿಂಗ್ಸ್‌ ಹಾಗೂ ಭಿತ್ತಿಪತ್ರಗಳ ತೆರವು 
– ಕೆರೆಯ ಆವರಣ, ಉದ್ಯಾನ, ಆಟದ ಮೈದಾನ, ಮಳೆನೀರು ಕಾಲುವೆ ಸೇರಿ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿರಿಸುವುದು 

ಸ್ವಚ್ಛತಾ ಕಾರ್ಯದ ಹಂಚಿಕೆ ಹೇಗೆ?

ರಸ್ತೆ ಮೂಲಸೌಕರ್ಯ
– ನಗರದ ಆರ್ಟಿರಿಯಲ್‌ ಹಾಗೂ ಸಬ್‌ ಆರ್ಟಿರಿಯಲ್‌ ರಸ್ತೆಗಳಲ್ಲಿನ ತ್ಯಾಜ್ಯ ತೆರವುಗೊಳಿಸಿ, ಸ್ವಚ್ಛವಾಗಿಡುವುದು 
– ನಗರದ ಎಲ್ಲ ಜಂಕ್ಷನ್‌ಗಳನ್ನು ಸ್ವಚ್ಛಗೊಳಿಸಿ, ಸುಂದರೀಕರಣಗೊಳಿಸುವುದು 
– ಕಾಮಗಾರಿ ಪ್ರಗತಿಯಲ್ಲಿರುವ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಧೂಳು ನಿಯಂತ್ರಣಕ್ಕೆ ಕ್ರಮ 

ಕೇಂದ್ರ ಯೋಜನೆ ವಿಭಾಗ
– ಹೊರ ವರ್ತುಲ ರಸ್ತೆಗಳ ಸ್ವಚ್ಛಗೊಳಿಸುವುದು 
– ಟೆಂಡರ್‌ ಶ್ಯೂರ್‌ ರಸ್ತೆಗಳ ನಿರ್ವಹಣೆ 
– ಮೇಲ್ಸೇತುವೆ, ಕೆಳಸೇತುವೆ ಹಾಗೂ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗಳ ತ್ಯಾಜ್ಯ ವಿಲೇವಾರಿಗೆ ಕ್ರಮ

ವಲಯದ ಎಂಜಿನಿಯರಿಂಗ್‌ ವಿಭಾಗ
– ಉದ್ಯಾನ, ಆಟದ ಮೈದಾನ, ಬಸ್‌ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ತ್ಯಾಜ್ಯ ತೆರವು
– ವಲಯದಲ್ಲಿನ ಪೋಸ್ಟರ್‌, ಬಂಟಿಂಗ್ಸ್‌ ಹಾಗೂ ಬ್ಯಾನರ್‌ಗಳ ತೆರವು 
– ಪ್ರಮುಖ ಜಂಕ್ಷನ್‌ಗಳಲ್ಲಿನ ಮರಗಳ ಟ್ರಿಮ್ಮಿಂಗ್‌ 
– ವಲಯದ ಪ್ರಮುಖ ರಸ್ತೆಗಳು, ಜಂಕ್ಷನ್‌ಗಳಲ್ಲಿ ದುರಸ್ತಿಯಾದ ಬಲ್ಬ್ಗಳ ಬದಲಿಸುವುದು 
– ಪಾದಚಾರಿ ಕೆಳಸೇತುವೆಗಳನ್ನು ಸ್ವಚ್ಛ ಹಾಗೂ ಸುಂದರಗೊಳಿಸುವುದು 

ಬೃಹತ್‌ ಮಳೆನೀರು ಕಾಲುವೆ
– ಮಳೆನೀರು ಕಾಲುವೆಗಳ ಸುತ್ತಮುತ್ತಲಿನ ಭಾಗಗಳಲ್ಲಿ ತ್ಯಾಜ್ಯ ಹಾಗೂ ಕಟ್ಟಡ ಅವಶೇಷಗಳ ತೆರವು 

ಕೆರೆ ವಿಭಾಗ
– ಕೆರೆ ಹಾಗೂ ಟ್ಯಾಂಕ್‌ಗಳ ಆವರಣ ಹಾಗೂ ಅಂಗಳದಲ್ಲಿ ಸುರಿಯಲಾಗಿರುವ ಅನುಪಯುಕ್ತ ವಸ್ತುಗಳ ವಿಲೇವಾರಿ 

ಘನತ್ಯಾಜ್ಯ ನಿರ್ವಹಣಾ ವಿಭಾಗ
– ನಗರದ ಪ್ರಮುಖ ಮಾರುಕಟ್ಟೆಗಳು, ತ್ಯಾಜ್ಯ ಉತ್ಪಾದಕರು ಹಾಗೂ ತ್ಯಾಜ್ಯ ವಿಲೇವಾರಿ ಜಾಗಗಳ ಸ್ವಚ್ಛವಾಗಿರಿಸುವುದು 

ಅಭಿಯಾನದಲ್ಲಿ ಭಾಗಿಯಾಗಲು ಯಾರನ್ನು ಸಂಪರ್ಕಿಸಬೇಕು?: ಕ್ಲೀನ್‌ ಬೆಂಗಳೂರು ಅಭಿಯಾನದಲ್ಲಿ ಭಾಗವಹಿಸಲು ನಾಗರಿಕ ಸಂಸ್ಥೆಗಳು, ಎನ್‌ಜಿಒಗಳು, ಸ್ವಯಂ ಸೇವಕರು ಹಾಗೂ ನಾಗರಿಕರು, ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್‌ ಎಸ್‌.ಸೋಮಶೇಖರ್‌ (9480684990) ಅಥವಾ ಪೂರ್ವ ವಲಯದ ಮುಖ್ಯ ಎಂಜಿನಿಯರ್‌ ಬಿ.ಎಸ್‌.ಪ್ರಸಾದ್‌ (9480684531) ಸಂಪರ್ಕಿಸಬಹುದಾಗಿದೆ. ಅಗತ್ಯ ಪರಿಕರಗಳಿಗಾಗಿ ಅರ್ಜಿ ಭರ್ತಿ ಮಾಡಿ [email protected] ಜಾಲತಾಣಕ್ಕೆ ಕಳುಹಿಸಬಹುದು.

ಪಾಲಿಕೆಯಿಂದ ದೊರೆಯುವ ಸಹಕಾರವೇನು?
– ಕಾರ್ಮಿಕರು ಹಾಗೂ ಸುರಕ್ಷತಾ ಪರಿಕರಗಳು
– ತ್ಯಾಜ್ಯ ಹಾಗೂ ಕಟ್ಟಡ ಅವಶೇಷ ಸಾಗಿಸಲು ವಾಹನಗಳು
– ಜೆಸಿಬಿ ಹಾಗೂ ರಸ್ತೆ ಸ್ವಚ್ಛತಾ ಯಂತ್ರಗಳು
– ಸಿವಿಲ್‌ ಕಾಮಗಾರಿಗೆ ಅಗತ್ಯ ಕರ್ಬ್ ಸ್ಟೋನ್‌, ಪೇವರ್‌ ಬ್ಲಾಕ್ಸ್‌, ಸಾಲಿಡ್‌ ಬ್ಲಾಕ್ಸ್‌, ಸಿಮೆಂಟ್‌, ಮರಳು ಹಾಗೂ ಪೆಯಿಂಟ್‌
– ನೀರಿನ ಟ್ಯಾಂಕರ್‌

ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ನಗರವನ್ನು ಸ್ವಚ್ಛ ಹಾಗೂ ಸುಂದರಗೊಳಿಸುವ ಉದ್ದೇಶದಿಂದ ಫೆ.24 ರಿಂದ ಒಂದು ವಾರ ಕ್ಲೀನ್‌ ಬೆಂಗಳೂರು ಅಭಿಯಾನ ನಡೆಸಲಾಗುತ್ತಿದೆ. ಅಭಿಯಾನದಲ್ಲಿ ಭಾಗವಹಿಸಲು ನಾಗರಿಕ ಸೇವಾ ಸಂಸ್ಥೆಗಳು, ಸ್ವಯಂ ಸೇವಕರು, ಕ್ಷೇಮಾಭಿವೃದ್ಧಿ ಸಂಘಗಳು, ಎನ್‌ಜಿಒಗಳಿಗೆ ಮುಕ್ತ ಆಹ್ವಾನವಿದೆ. ಜತೆಗೆ ಅಗತ್ಯವಾದ ಉಪಕರಣಗಳು ಹಾಗೂ ಯಂತ್ರಗಳನ್ನು ಸಹ ಪಾಲಿಕೆಯಿಂದ ನೀಡಲಾಗುವುದು.
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.