ನದಿಗಳ ಜೋಡಣೆಗೆ ಯೋಜನೆ


Team Udayavani, Feb 21, 2018, 10:39 AM IST

gul-5.jpg

ಇಂಡಿ: ದೇಶದಲ್ಲಿ ನೀರಿನ ಸಮಸ್ಯೆ ಇದೆ. ನದಿಗಳ ಜೋಡಣೆ ಕುರಿತು ಈಗಾಗಲೇ ಯೋಜನೆ ತಯಾರಿಸಲಾಗುತ್ತಿದೆ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತೀನ್‌ ಗಡ್ಕರಿ ಹೇಳಿದರು. ತಾಲೂಕಿನ ಝಳಕಿ ಗ್ರಾಮದಲ್ಲಿ ವಿಜಯಪುರ-ಸೊಲ್ಲಾಪುರ ಚತುಷ್ಪಥ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಗೋದಾವರಿ ನದಿಯಿಂದ ಸುಮಾರು ಮೂರು ಸಾವಿರ ಟಿಎಂಸಿ ನೀರು ಸಮುದ್ರದ ಪಾಲಾಗುತ್ತಿದೆ. ಅದನ್ನು ರಕ್ಷಿಸಿ ಉಪಯೋಗಿಸಿಕೊಂಡರೆ ಗುಜರಾತ, ಕರ್ನಾಟಕ, ಆಂಧ್ರ, ತೆಲಂಗಾಣ, ಗೋವಾ ರಾಜ್ಯಗಳಿಗೆ ನೀರಾವರಿಗೆ ಅನುಕೂಲವಾಗಲಿದೆ ಎಂದರಲ್ಲದೇ ಗಂಗಾ-ಕಾವೇರಿ ನದಿ ಜೋಡಿಸಲು ಶ್ರಮಿಸುವುದಾಗಿ ತಿಳಿಸಿದರು.

ನದಿ ಜೋಡಣೆ ಮೊದಲು ಸ್ಥಳೀಯವಾಗಿ ನೀರನ್ನು ರಕ್ಷಿಸಿ ಸದ್ಬಳಕೆ ಮಾಡಿಕೊಳ್ಳಬೇಕಿದೆ. ಸಣ್ಣ ನಾಲೆ, ನದಿ, ಹಳ್ಳ, ಕೆರೆಯ ನೀರನ್ನು ರಕ್ಷಿಸಿಕೊಳ್ಳಬೇಕು. ನೀರು ಇಂಗುವಂತೆ ವ್ಯವಸ್ಥೆ ಮಾಡಬೇಕು. ಹಳ್ಳ-ಕೊಳ್ಳಗಳಿಗೆ ಬಾಂದಾರು ನಿರ್ಮಿಸಿ ನೀರು ಇಂಗಿಸಬೇಕು. ದೇಶದಲ್ಲಿ ರೈತರ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದಂತಾಗಿದೆ. ಇದಕ್ಕೆ ಜಾಗತೀಕರಣ ಮಾರುಕಟ್ಟೆಯೇ ಕಾರಣವಾಗಿದೆ. ರೈತರು ಬಯೋ ಡಿಸೆಲ್‌ ತಯಾರಿಸುವ ಬೆಳೆ ಬೆಳೆಯಬೇಕಿದೆ ಎಂದರು.

ವಿಜಯಪುರ-ಸೊಲ್ಲಾಪುರ ಚತುಷ್ಪಥ ಕಾಮಗಾರಿ 2012ರಲ್ಲಿ ಆರಂಭವಾಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಆರಂಭವಾಗಲಿಲ್ಲ. ಈಗ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು, ಕಾಮಗಾರಿ ಆರಂಭವಾಗಲಿದೆ. ಕಾಮಗಾರಿಗೆ ಎರಡು ವರ್ಷ ಆರು ತಿಂಗಳು ಕಾಲಾವಕಾಶ ನೀಡಲಾಗಿದ್ದು ಒಂದೂವರೆ ವರ್ಷದ ಅವಧಿಯಲ್ಲೇ ಕಾಮಗಾರಿ ಮುಗಿಸಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಐವತ್ತು ಲಕ್ಷ ಕೋಟಿ ರೂ. ಕಾಮಗಾರಿ ಆರಂಭಿಸಲಾಗಿದೆ. ಮುಂಬೈ ನಗರದಲ್ಲಿ ನೀರಿನಲ್ಲಿ ಚಲಿಸುವ
ಬಸ್‌ ಆರಂಭಿಸಲಾಗಿದೆ. ವಿಜಯಪುರ ಜಿಲ್ಲೆಯ ಕೆರೆಗಳು ಹಾಗೂ ನದಿಗಳಿಂದ ವಿಜಯಪುರದ ಜನತೆ ದೆಹಲಿಗೆ ಪ್ರಯಾಣ ಬೆಳೆಸುವಂತೆ ಮಾಡುವುದಾಗಿ ಹೇಳಿದರು. ಇದರಿಂದ ಏರ್‌ಪೋರ್ಟ್‌ ಅವಶ್ಯಕತೆ ಬೀಳುವುದಿಲ್ಲ. ನೀರಿನಲ್ಲಿ ಇಳಿಯುವ ವಿಮಾನಗಳು ಬರಲಿವೆ. ವಾಟರ್‌ ಫೋರ್ಟ್‌ಗಳು ನಿರ್ಮಾಣವಾಗಲಿವೆ. ಇದನ್ನು ನಮ್ಮ ಸರ್ಕಾರ
ಸಾಧಿಸಿ ತೋರಿಸಲಿದೆ ಎಂದರು.

ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ ಮಾತನಾಡಿ, ಗಡ್ಕರಿ ಅವರು ಮುಂಬರುವ ದಿನಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ಮೌಲ್ಯದ ರಸ್ತೆಗಳನ್ನು ನಿರ್ಮಿಸಲಿದ್ದಾರೆ. ಭಾರತದ ಎಲ್ಲ 32 ನದಿಗಳನ್ನು ಜೋಡಿಸಬೇಕೆಂಬುದು ನನ್ನ ಬೇಡಿಕೆಯಾಗಿದೆ. ದೇಶದ 32 ನದಿಗಳನ್ನು ಜೋಡಿಸಿ ಸುಜಲಾಂ ಸುಫಲಾಂ ಮಾಡಬೇಕಿದೆ. ಎಲ್ಲ ನದಿಗಳ ಜೋಡಣೆ ಮೋದಿ ಅವರ ಕನಸಾಗಿದೆ ಎಂದರು.

ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಸಂಸದ ಪ್ರಹ್ಲಾದ ಜೋಶಿ
ಮಾತನಾಡಿದರು.ಶಾಸಕ ರಮೇಶ ಭೂಸನೂರ, ಎಂಎಲ್‌ಸಿ ಅರುಣ ಶಹಾಪುರ, ಬಸವನಗೌಡ ಪಾಟೀಲ (ಯತ್ನಾಳ),
ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ, ಜಿಲ್ಲಾಧ್ಯಕ್ಷ ವಿಠ್ಠಲ ಕಟಕದೋಂಡ, ಚಂದ್ರಶೇಖರ ಕವಟಗಿ, ಬಿಜೆಪಿ ಮಂಡಲ ಅಧ್ಯಕ್ಷ ಕಾಸುಗೌಡ ಬಿರಾದಾರ, ರವಿಕಾಂತ ಬಗಲಿ, ದಯಾಸಾಗರ ಬಿರಾದಾರ, ಶ್ರೀಶೈಲಗೌಡ ಬಿರಾದಾರ, ಪಾಪು ಕಿತ್ತಲಿ, ಶೀಲವಂತ ಉಮರಾಣಿ ಮತ್ತಿತರರಿದ್ದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.