ಜನರಿಗೆ ಕಚ್ಚಿದ 25 ಮಂಗ ಸೆರೆ


Team Udayavani, Feb 21, 2018, 12:26 PM IST

bid-4.jpg

ಬಸವಕಲ್ಯಾಣ: ಬೆಟಬಾಲಕುಂದಾ ಗ್ರಾಮದಲ್ಲಿ ಕೆಲ ದಿನಗಳಿಂದ ಮಂಗಗಳು ಗ್ರಾಮಸ್ಥರ ನಿದ್ದೆಗೆಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮಂಗಗಳ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದು, ಸುಮಾರು 25 ಮಂಗಗಳನ್ನು
ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಕರೆಯ ಮೇರೆಗೆ ಮಹಾರಾಷ್ಟ್ರದ ಮಿರಜ್‌ನಿಂದ ಆಗಮಿಸಿದ ಶಬ್ಬೀರ ಹನೀಫ್‌ ಶೇಖ್‌ ನೇತೃತ್ವದ ಇಬ್ಬರು ಪರಿಣಿತರ ತಂಡ ಮಂಗಳವಾರ ಗ್ರಾಮಕ್ಕೆ ಆಗಮಿಸಿ, ಕೆಲವೆ ಗಂಟೆಗಳಲ್ಲಿ 25 ಮಂಗಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಗ್ರಾಮದ ವ್ಯಾಪ್ತಿಯ ಗುಡ್ಡದ ಪ್ರದೇಶದಲ್ಲಿ ವಾಸವಾಗಿರುವ ಮಂಗಳನ್ನು ಹಿಡಿಯಲು ಬಲೆ ಬೀಸಲಾಗಿತ್ತು. ಪಂಜರದಲ್ಲಿ
ಮಂಗಗಳಿಗೆ ಇಷ್ಟವಾದ ತಿಂಡಿ ಇಡಲಾಗಿತ್ತು. ಒಂದೊಂದಾಗಿ ಮಂಗಗಳು ಪಂಜರದಲ್ಲಿ ಸೆರೆಯಾದವು. ದಾಳಿ ನಡೆಸುತ್ತಿದ್ದ ಒಂದು ಮಂಗ ಹಾಗೂ ಇದರ ಟೋಲಿಯಲ್ಲಿ ಇದ್ದ 25 ಮಂಗಗಳು ಬಲೆಗೆ ಬಿದ್ದಿದ್ದು, ಉಳಿದ ಮಂಗಗಳ ಸೆರೆಗಾಗಿ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಗ್ರಾಮದಲ್ಲಿ ಎರಡು ವಾರಗಳ ಹಿಂದೆ ಮಂಗವೊಂದು ದಾಳಿ ನಡೆಸಿ ಸುಮಾರು 20ಕ್ಕೂ ಹೆಚ್ಚು ಜನರಿಗೆ ಕಡಿದು ಗಾಯಗೊಳಿಸಿತ್ತು. ಅಂದು ಕಾರ್ಯಾಚರಣೆ ನಡೆಸಿದ ಇಲಾಖೆಯ ತಂಡ ದಾಳಿ ನಡೆಸುತ್ತಿದ್ದ ಮಂಗವನ್ನು
ಹಿಡಿದು ಜನರು ನಿಟ್ಟುಸಿರು ಬಿಡುವಂತೆ ಮಾಡಿದರು. ಆದರೆ ಗ್ರಾಮದಲ್ಲಿ ಇದ್ದ ಮಂಗಗಳು ಒಂದು ವಾರದಿಂದ ಇದಕ್ಕಿದ್ದಂತೆ ಮತ್ತೆ ಜನರ ಮೇಲೆ ದಾಳಿ ನಡೆಸಿ ಸುಮಾರು 20ಕ್ಕೂ ಅಧಿಕ ಜನರಿಗೆ ಕಚ್ಚಿದ್ದು, ಜನರಲ್ಲಿ ಮತ್ತೆ ಆತಂಕ ಮೂಡಿಸಿತ್ತು.

ಗ್ರಾಮದಲ್ಲಿ ಮತ್ತೆ ಮಂಗಗಳು ದಾಳಿ ಮಾಡುತ್ತಿದೆ ಎನ್ನುವ ಮಾಹಿತಿ ಸಿಕ್ಕ ನಂತರ ಅರಣ್ಯ ಇಲಾಖೆಯ ಇಲ್ಲಿಯ ಆರ್‌ಎಫ್‌ಒ ಅಲಿಯೋದ್ದಿನ್‌ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ ಕಾರ್ಯಚರಣೆ ನಡೆಸಿ, ದಾಳಿ ನಡೆಸುತಿದ್ದ ಮಂಗವನ್ನು ಗುರುತಿಸಿ ಹಿಡಿಯುವಲ್ಲಿ ಯಶಸ್ವಿಯಾದರು. ಎಲ್ಲಾ ಮಂಗಗಳನ್ನು ಹಿಡಿಯುವ ವರೆಗೆ ತಂಡದವರು ಗ್ರಾಮದಲ್ಲಿಯೇ ಉಳಿದುಕೊಳ್ಳಲಿದ್ದಾರೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

60ಜನರಿಗೆ ಗಾಯ: ಬೆಟಬಾಲಕುಂದಾ ಗ್ರಾಮದಲ್ಲಿ ಮಂಗಗಳ ದಾಳಿಯಿಂದ ಗಾಯಗೊಂಡವರ ಸಂಖ್ಯೆ 60ಕ್ಕೆ
ತಲುಪಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ. ಕಳೆದ ಗುರುವಾರದಿಂದ ಇದುವರೆಗೆ ಸುಮಾರು 20 ಜನರಿಗೆ
ಮಂಗಗಳು ಕಚ್ಚಿವೆ. ಒಟ್ಟು ಸುಮಾರು 60 ಜನ ಗಾಯಗೊಂಡಿದ್ದು, ಇವರಲ್ಲಿ ಬಹುತೇಕ ಜನ ಬಸವಕಲ್ಯಾಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.