ಸರ್ವಜ್ಞರ ತತ್ವಾದರ್ಶ ಪರಿಚಯವಾಗಲಿ


Team Udayavani, Feb 21, 2018, 1:13 PM IST

vij-1.jpg

ವಿಜಯಪುರ: ತ್ರಿಪದಿ ವಚನಕಾರ ಸರ್ವಜ್ಞ ಶರಣರು ಸಮಾಜದ ಅವ್ಯವಸ್ಥೆ ಸುಧಾರಿಸಲು ವಚನಗಳ ಮೂಲಕ ಸಾರಿದ ತತ್ವ ಸಿದ್ಧಾಂತಗಳು ಪ್ರಸಕ್ತ ಸಂದರ್ಭದಲ್ಲಿ ಯುವ ಪೀಳಿಗೆಗೆ ತಿಳಿಸಿ ಹೇಳುವ ಕೆಲಸದ ಅಗತ್ಯವಿದೆ ಎಂದು ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ ಅಭಿಪ್ರಾಯಪಟ್ಟರು.

ಮಂಗಳವಾರ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ವಜ್ಞರು ಸಂಸ್ಕೃತ ಕಲಿತು ಪಂಡಿತರು ಎನಿಸಿಕೊಂಡವರಗಿಂತ ಅದ್ಭುತವಾದ ಸಂದೇಶಗಳನ್ನ ಅಪ್ಪಟ ಕನ್ನಡದಲ್ಲೇ ತ್ರಿಪದಿಗಳಲ್ಲೇ ಕಟ್ಟಿಕೊಟ್ಟರು. ಅಲ್ಲದೇ ಯಾವ ವಿಷಯ ಬಿಡದೇ ಎಲ್ಲ ಸಂಗತಿಗಳ ಕುರಿತು ವಚನ ರಚಿಸಿದ ಅವರನ್ನು ಇದೇ ಕಾರಣಕ್ಕೆ ಆಡು ತಿನ್ನದಿರುವ ಕಸವಿಲ್ಲ, ವಚನಗಳಲ್ಲಿ ಸರ್ವಜ್ಞರು ಹೇಳದ ವಿಷಯಗಳಿಲ್ಲ ಎಂದು ಬಣ್ಣಿಸಿದರು. 

ವಿಶೇಷ ಉಪನ್ಯಾಸ ನೀಡಿದ ಉಪನ್ಯಾಸಕ ಯು.ಎನ್‌. ಕುಂಟೋಜಿ, ಸರ್ವಜ್ಞ ಎಂದರೆ ಎಲ್ಲವನ್ನು ತಿಳಿದವನು ಎಂದರ್ಥ. ಅಂಥ ಹೆಸರಿನ ಅಂಕಿತ ಬಳಸಿಕೊಂಡು ವಚನಗಳನ್ನು ರಚಿಸಿದ ಸರ್ವಜ್ಞರು, ಜಗತ್ತು ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರು. ಪಂಪ, ರನ್ನ, ಜನ್ನ, ಪೊನ್ನ ಇವರೆಲ್ಲಾ ಸಾಹಿತಿಗಳು ಸಂಸ್ಕೃತ ಅಧ್ಯಯನ ಮಾಡಿದ ಪಂಡಿತರಾದರೆ, ಸರ್ವಜ್ಞರು ಅಪ್ಪಟ ಕನ್ನಡದ ಕವಿ ಎಂದು ವಿಶ್ಲೇಷಿಸಿದರು.

ಒಂದು ತುಂಡು ಬಟ್ಟೆಯನ್ನುಟ್ಟು ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದಿದ ಸರ್ವಜ್ಞರು ಇತಿಹಾಸದ ಸಾಹಿತ್ಯದಲ್ಲಿ ಲೋಕಜ್ಞಾನ ಬೆಳೆಸಿದವರು. ಅರಿಷಡ್ವರ್ಗಗಳನ್ನು ಮೀರಿದ ಈ ಶರಣ ಸಮಾಜಕ್ಕೆ ಬೆಳಕು ಚೆಲ್ಲಿದ ಮಹಾತ್ಮ ಎಂದು ವಿವರಿಸಿದರು. 

ಕಾಡಾ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ ಮಾತನಾಡಿ, ಕುಂಬಾರ ಸಮಾಜ ರಾಜಕೀಯವಾಗಿ ಬಹಳ ಹಿಂದುಳಿದಿದೆ. ಸಮಾಜದಲ್ಲಿ ಏನಾದರೂ ಬೆಳವಣಿಗೆ ಆಗಬೇಕಾದರೆ ನಾವು ಹಾಕಿಕೊಂಡಿರುವ ಯೋಚನೆ ಯೋಜನೆಗಳಾಗಿ ಅನುಷ್ಠಾನಕ್ಕೆ ಬರಬೇಕು. ಆಗಲೇ ಸರ್ವಜ್ಞ ಎಂಬ ಮಹಾತ್ಮನ ಬಡ ಸಮಾಜ ಅಭಿವೃದ್ಧಿ ಸಾಧಿ ಸಿ ಸಮಾಜದಲ್ಲಿ ಸುಧಾರಣೆ ಕಾರಣಲು ಸಾಧ್ಯ. ಸರ್ಕಾರ ಸರ್ವಜ್ಞರ ವೃತ್ತ, ಭವನವನ್ನು ನಿರ್ಮಿಸಬೇಕು. ಕುಂಬಾರ ಸಮಾಜದಲ್ಲಿ ಜನಿಸಿದ ಸರ್ವಜ್ಞ ಸಂತ ಸರ್ವ ಸಮಾಜದ ಆದರ್ಶ ಕಾಯಕವಾದಿ ಎಂದು ವಿವರಿಸಿದರು.

ಪಾಲಿಕೆ ಸದಸ್ಯ ಉಮೇಶ ವಂದಾಲ, ಆರ್‌. ಕುಂಬಾರ, ಜಿ.ವಿ. ದಶವಂತ, ಸಿ.ಬಿ. ಕುಂಬಾರ, ಎಸ್‌ .ಪಿ. ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ಎಸ್‌.ಜಿ. ಕುಂಬಾರ ಸೇರಿದಂತೆ ಇದ್ದರು. ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ
ಮಹೇಶ ಪೋತದಾರ ನಿರೂಪಿಸಿದರು. ಶಶಿಕಲಾ ಕುಲಹಳ್ಳಿ ಸುಗಮ ಸಂಗೀತ ಕಾರ್ಯಕ್ರಮ ನೀಡಿದರೆ, ನವರಸ ನೃತ್ಯ ಕಲಾ ಸಂಸ್ಥೆಯ ರಂಗನಾಥ ಬತ್ತಾಸೆ ನೇತೃತ್ವದಲ್ಲಿ ಕಲಾವಿದರು ಸರ್ವಜ್ಞರ ನೃತ್ಯ ರೂಪಕ ಪ್ರದರ್ಶಿಸಿದರು.

ಇದಕ್ಕೂ ಮೊದಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್‌ ಹನುಮಂತರಾಯ ರಂಗಮಂದಿರದವರೆಗೆ ಕುಂಭಮೇಳದೊಂದಿಗೆ ಮೆರವಣಿಗೆ ನಡೆಯಿತು. ಉಪ ವಿಭಾಗಾಧಿಕಾರಿ ಡಾ| ಶಂಕರ ವಣಕ್ಯಾಳ ಮೆರವಣಿಗೆಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.