ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
Team Udayavani, Feb 21, 2018, 1:17 PM IST
ವಿಜಯಪುರ: ಕರ್ನಾಟಕ ಲಲಿತ ಕಲಾ ಅಕಾಡೆಮಿ ಸಹಾಯ ಧನದಲ್ಲಿ ಫೆ. 24ರಂದು ಧಾರವಾಡದಲ್ಲಿ ಯುವ ಕಲಾವಿದ ವರ್ಧಮಾನ ಕೇದ್ರಾಪುರ ಇವರ ಏಕವ್ಯಕ್ತಿ ಚಿತ್ರಕಲಾ ಕೃತಿಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಧಾರವಾಡದ ಸರ್ಕಾರಿ ಸರಕಾರಿ ಚಿತ್ರಕಲಾ ಆರ್ಟ್ ಗ್ಯಾಲರಿಯಲ್ಲಿ ಅಂದು ಬೆಳಗ್ಗೆ 10:30ಕ್ಕೆ ಚಿತ್ರಕಲಾ ಪ್ರದರ್ಶನಕ್ಕೆ ಹಿರಿಯ ಕಲಾವಿದ ಎಂ.ಆರ್. ಬಾಳಿಕಾಯಿ ಚಾಲನೆ ನೀಡಲಿದ್ದು, ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯ ಎಫ್.ವಿ. ಚಿಕ್ಕಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಕಲಾವಿದ ಡಾ| ಪಿ.ಎಸ್. ಕಡೆಮನಿ, ಬಿ.ಎಚ್. ಕುರಿ ಪಾಲ್ಗೊಳ್ಳಲಿದ್ದಾರೆ.
ವಿಜಯಪುರ ಜಿಲ್ಲೆಯ ಸಿದ್ದಾಪುರ (ಕೆ) ಗ್ರಾಮದ ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದಿರುವ ವರ್ಧಮಾನ ಅವರು, ಹಲವು ಚಿತ್ರಕಲೆ ಪ್ರದರ್ಶನದಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದ್ದು ಬಹುಮಾನ-ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಇವರು ರಚಿಸಿದ ಕಲಾಕೃತಿ ಕೃಷ್ಣನ ಬಾಲ್ಯ ಲೀಲೆಗಳು, ಪ್ರೇಮಿ, ಕನಸು, ತ್ರಿ ಇಡಿಯಟ್, ಹಾಳು ಗೇಡಿಸುವ ಮಂಗ, ಬೀದಿಯ ಮಗು, ಇಂದಿನ ರಾಜಕೀಯ, ನೀರಿಗಾಗಿ ಪರದಾಡುವ ಕಾಗೆ ಹಾಗೂ ಮಂಗಗಳು, ಹಳ್ಳಿಯ ಬದುಕು,
ಡೊಳ್ಳು ಕುಣಿತ, ನದಿಯಲ್ಲಿ ಸ್ನಾನ ಮಾಡಿ ಪುಡಿಯಿಂದ ದೇವಾಲಯಕ್ಕೆ ಹೋಗುತ್ತಿರುವ ಮಹಿಳೆ ಶಿಲೆ ಮತ್ತು ಮಹಿಳೆ ಮುಂತಾದ ಕಲಾಕೃತಿಗಳು ಸದರಿ ಪ್ರದರ್ಶನದಲ್ಲಿ ಬೆಳಕು ಕಾಣಲಿರುವ ಕಲಾಕೃತಿಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ