ಮನುಷ್ಯ ಒಬ್ಬ; ವ್ಯಕ್ತಿತ್ವ ಹತ್ತು


Team Udayavani, Feb 23, 2018, 11:34 AM IST

manushya.jpg

ಉತ್ತರ ಕರ್ನಾಟಕದ ಮಠದವರೆಲ್ಲಾ ಈಗ ಸಾಯಿಪ್ರಕಾಶ್‌ರನ್ನು ಹುಡುಕಿಕೊಂಡು ಬಂದು ಅವರಿಂದ ಚಿತ್ರ ಮಾಡಿಸುತ್ತಿದ್ದಾರೆ. ಕಳೆದ ವರ್ಷ ಸಾಯಿಪ್ರಕಾಶ್‌ ಅವರು “ಅಬ್ಬೆ ತುಮಕೂರ ಸಿದ್ಧಿಪುರುಷ ವಿಶ್ವಾರಾಧ್ಯರು’ ಎಂಬ ಚಿತ್ರವನ್ನು ಮಾಡಿದ್ದರು. ಆ ಚಿತ್ರ ಇನ್ನೂ ಬಿಡುಗಡೆಯಾಗಬೇಕಿದೆ. ಅದಕ್ಕೂ ಮುನ್ನವೇ ಇಂಚಗೇರಿ ಮಠದ ಮಹಾದೇವರು ಅವರ ಕುರಿತಾದ “ಕ್ರಾಂತಿಯೋಗಿ ಮಹಾದೇವರು’ ಎಂಬ ಚಿತ್ರವನ್ನು ಶುರು ಮಾಡಿದ್ದಾರೆ.

“ಕ್ರಾಂತಿಯೋಗಿ ಮಹಾದೇವರು’ ಪಾತ್ರವನ್ನು ರಾಮ್‌ಕುಮಾರ್‌ ನಿರ್ವಹಿಸುತ್ತಿದ್ದು, ಚಿತ್ರ ಕಳೆದ ವಾರ ಸದ್ದಿಲ್ಲದೆ ಶುರುವಾಗಿದೆ.  ನಿರ್ಮಾಪಕ ಶ್ರೀಶೈಲ ಗಾಣಿಗೇರ ಅವರು ಬಂದು ಚಿತ್ರ ಮಾಡಿಕೊಡುವುದಕ್ಕೆ ಹೇಳಿದಾಗ, ಮತ್ತೂಂದು ಮಠದ ಚಿತ್ರವಿರಬಹುದು ಎಂದುಕೊಂಡರಂತೆ ಸಾಯಿಪ್ರಕಾಶ್‌. ಆ ನಂತರ ಇದೊಂದು ಐತಿಹಾಸಿಕ ಚಿತ್ರವಾಗಲಿದೆ ಎಂದನಿಸಿತಂತೆ. “ಇದೊಂದು ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯ ಸಿನಿಮಾ.

ಕ್ರಾಂತಿಯೋಗಿ ಮಹಾದೇವರು ಮಠದ ಗುರುಗಳಾಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಮಹಾತ್ಮ ಗಾಂಧಿ, ಸುಭಾಷ್‌ ಚಂದ್ರ ಬೋಸ್‌ ಅವರನ್ನು ಭೇಟಿ ಮಾಡಿದ್ದರು. ಬ್ರಿಟಿಷರಿಗೆ ಗೊತ್ತಿಲ್ಲದಂತೆ ಬಂದೂಕಿನ ಫ್ಯಾಕ್ಟರಿ ಶುರು ಮಾಡಿದ್ದರು. ಮಠದ ಭಕ್ತರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿದ್ದರು. ಸರ್ವೋದಯ ಮತ್ತು ಏಕೀಕರಣ ಚಳವಳಿಗಳಲ್ಲಿ ಭಾಗಿಯಾಗಿದ್ದರು. ಸಾವಿರಾರು ಅಂತಜಾìತಿ ವಿವಾಹ ಮಾಡಿಸಿದ್ದರು.

ಹೀಗೆ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದ ಅವರ ಕುರಿತು ಈ ಚಿತ್ರ ಮಾಡುತ್ತಿದ್ದೇನೆ. ಇಲ್ಲಿ ಮಠ, ಬಾಲ್ಯ ಮುಂತಾದ ವಿಷಯಗಳೆಲ್ಲಾ ಕಡಿಮೆ ಇರಲಿವೆ. ಅವರೊಬ್ಬ ಸ್ವಾತಂತ್ರ್ಯ ಹೋರಾಟಗಾರರಾಗಿ ಸ್ವರಾಜ್ಯಕ್ಕೆ ಹೇಗೆ ಹೋರಾಟ ಮಾಡಿದರು ಎಂಬುದರ ಕುರಿತು ಚಿತ್ರದ ಕಥೆ ಸಾಗಲಿದೆ. ಬೆಂಗಳೂರು ಮತ್ತು ಉತ್ತರ ಕರ್ನಾಟಕದಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯಲಿದೆ’ ಎಂದು ಮಾಹಿತಿಕೊಟ್ಟರು ಸಾಯಿಪ್ರಕಾಶ್‌.

 ಇದು ಒಬ್ಬ ಮನುಷ್ಯನ ಕಥೆಯಾದರೂ, ಹತ್ತು ವ್ಯಕ್ತಿತ್ವದ ಕಥೆಯಾಗಲಿದೆ ಎನ್ನುತ್ತಾರೆ ರಾಮ್‌ಕುಮಾರ್‌. “ಈ ತರಹ ಸಾಧನೆ ಮಾಡುವುದಕ್ಕೆ 10 ಜೀವಮಾನವಾದರೂ ಬೇಕು. ಆದರೆ, ಕ್ರಾಂತಿಯೋಗಿ ಮಹಾದೇವರು ಒಂದೇ ಜೀವಮಾನದಲ್ಲಿ ಅಷ್ಟೆಲ್ಲವನ್ನೂ ಮಾಡಿದ್ದಾರೆ. ಅವರ ಸಾಧನೆ ಕೇಳಿದ ಮೇಲೆ ಈ ಚಿತ್ರ ಮಾಡಲೇಬೇಕು ಅಂತನಿಸಿತು. ಆಧ್ಯಾತ್ಮಿಕ ಜೀವನದಿಂದ ಸ್ವಾತಂತ್ರ್ಯ ಹೋರಾಟಗಾರರಾಗಿ ಅವರು ಬದಲಾದ ರೀತಿ ನಿಜಕ್ಕೂ ಅದ್ಭುತ.

ಗಾಂಧೀಜಿ ಅವರಿಂದ ಪ್ರೇರೇಪಿತರಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಅವರು ಬಂದ ರೀತಿ, ಮೈಲಿಗಟ್ಟಲೆ ಓಡಾಡಿ ಜನರನ್ನು ಅವರು ಸಂಘಟಿಸುತ್ತಿದ್ದ ರೀತಿ ಇವೆಲ್ಲಾ ಬಹಳ ಮುಖ್ಯ. ಇಂಥ¨ªೊಂದು ಸಿನಿಮಾ ಮಾಡುವುದು ಅಷ್ಟು ಸುಲಭವಲ್ಲ. ಇಂಥ¨ªೊಂದು ಚಿತ್ರಕ್ಕೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಸಿಗಲಿ’ ಎಂದು ಹಾರೈಸಿದರು. ಛಾಯಾಗ್ರಾಹಕ ಜೆ.ಜಿ. ಕೃಷ್ಣ ಅವರಿಗೆ ಕಥೆ ಕೇಳಿ ಈ ಚಿತ್ರಕ್ಕೆ ಪ್ರಶಸ್ತಿ ಗಿಟ್ಟಿಸಿಕೊಳ್ಳಬಹುದು ಎಂದನಿಸಿತಂತೆ.

“ಇದು ಮಾಮೂಲಿ ಸಿನಿಮಾ ಅಲ್ಲ. ಬೇರೆ ತರಹದ ಛಾಯಾಗ್ರಹಣ, ಲೈಟಿಂಗ್‌ ಎಲ್ಲವರೂ ಬೇಕಿದೆ. ಅದಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ. “ನನ್ನಾಸೆಯ ಹೂವೇ’ ಚಿತ್ರಕ್ಕೆ 20 ವರ್ಷಗಳ ಹಿಂದೆ ಪ್ರಶಸ್ತಿ ಬಂದಿತ್ತು. ಈ ಚಿತ್ರಕ್ಕೂ ಪ್ರಶಸ್ತಿ ಬರಲಿ ಎಂದು ಮಾಡ್ತಿದ್ದೀನಿ’ ಎಂದರು. ಹಿರಿಯ ನಟ ಶಿವಕುಮಾರ್‌, ಈ ಚಿತ್ರದಲ್ಲಿ ಮಹಾದೇವರು ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಅವರು ಸಹ ಇದೊಂದು ಒಳ್ಳೆಯ ಚಿತ್ರವಾಗಲಿದೆ ಎಂದರು. “ಕ್ರಾಂತಿಯೋಗಿ ಮಹಾದೇವರು’ ಚಿತ್ರದಲ್ಲಿ ರಾಮ್‌ಕುಮಾರ್‌ ಮತ್ತು ಶಿವಕುಮಾರ್‌ ಜೊತೆಗೆ ರಮೇಶ್‌ ಭಟ್‌, ಸಿಹಿಕಹಿ ಚಂದ್ರು, ರವಿಚೇತನ್‌, ಸುಚಿತ್ರಾ, ಗಣೇಶ್‌ ರಾವ್‌ ಮುಂತಾದವರು ನಟಿಸುತ್ತಿದ್ದಾರೆ. ಮಾಧವಾನಂದ ಶೆಗುಣಸಿ ಚಿತ್ರಕ್ಕೆ ಕಥೆ ಬರೆದರೆ, ಬಿ. ಬಲರಾಂ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಶ್ರೀಶೈಲ ಗಾಣಿಗೇರ ಮತ್ತು ಯಲ್ಲಪ್ಪ ಮಹಿಷವಾಡಿಗಿ ಚಿತ್ರ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.