ವೇಣೂರು:ಕೋಳಿ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ
Team Udayavani, Feb 23, 2018, 11:59 AM IST
ವೇಣೂರು: ಇಲ್ಲಿನ ಶ್ರೀರಾಮ ನಗರದ ಮೂಡಬಿದಿರೆ ತಿರುವಿನ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು,ಕೋಳಿ ಸಾಗಾಟದ ಲಾರಿ ಬದಿಗೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಕ್ಕೆ ಢಿಕ್ಕಿ ಹೊಡೆದು ಚಲಿಸುತ್ತಿದ್ದ ಬೈಕ್ ಮೇಲೆ ಸಂಚರಿಸಿ ಮಗುಚಿ ಬಿದ್ದಿದೆ. ಅವಘಡದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದು, ಮಕ್ಕಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ದುರ್ದೈವಿ ವೇಣೂರು ಕರಿಮಣೇಲು ನಿವಾಸಿ ಉದಯ ಕುಮಾರ್ ಸೇಮಿತ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದಾರೆ.
ಬೈಕ್ನಲ್ಲಿದ್ದ ಪುತ್ರಿ ಸೇರಿದಂತೆ ಇನ್ನೋರ್ವ ವಿದ್ಯಾರ್ಥಿನಿ ಅಲ್ಪ ಪ್ರಮಾಣದ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.
ಬೆಳಿಗ್ಗೆ 7.30 ರ ಸುಮಾರಿಗೆ ಉದಯ ಕುಮಾರ್ ಸೇಮಿತ ಅವರು ಕಾಲೇಜಿಗೆ ತೆರಳುವ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಕುಳ್ಳಿರಿಸಿ ಕರಿಮಣೇಲುವಿನಿಂದ ವೇಣೂರು ಮುಖ್ಯಪೇಟೆಗೆ ತಲುಪುತ್ತಿದ್ದಂತೆ ಅಜಾಗರುಕತೆಯಿಂದ ಎದುರಿನಿಂದ ಬಂದ ಕೋಳಿ ಸಾಗಾಟದ ಲಾರಿ ಪೊಲೀಸ್ ವಾಹನಕ್ಕೆ ಢಿಕ್ಕಿ ಹೊಡೆದು ಬಳಿಕ ಇವರ ಬೈಕ್ಗೆ ಗುದ್ದಿದೆ.
ಘಟನೆ ನಡೆದ ಕೆಲ ಹೊತ್ತಿನಲ್ಲಿ ಅಂಬ್ಯುಲೆನ್ಸ್ ಮೂಲಕ ಇಬ್ಬರು ಮಕ್ಕಳನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಕೋಳಿ ಸಾಗಾಟದ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣವೆನ್ನಲಾಗಿದೆ.
ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ದೃಶ್ಯಾವಳಿಗಳು ಸ್ಥಳೀಯ ಕಾಂಪ್ಲೆಕ್ಸ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ