ವೀಕ್ಷಕರ ಎದುರೇ ಕೈ ಕಾರ್ಯಕರ್ತರ ಕಾಳಗ
Team Udayavani, Feb 24, 2018, 8:15 AM IST
ಶಿವಮೊಗ್ಗ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಪಕ್ಷದ ವೀಕ್ಷಕರ ಎದುರೇ ಹಾಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.
ಎಐಸಿಸಿಯಿಂದ ವೀಕ್ಷಕರಾಗಿ ನಿಯೋಜಿಸಲ್ಪಟ್ಟ ಚಿತ್ರದುರ್ಗ ಲೋಕಸಭಾ ಸದಸ್ಯ ಬಿ.ಎಸ್. ಚಂದ್ರಪ್ಪ, ಮಾಜಿ ಸಂಸದ ಮಂಜುನಾಥ್ ಕುನ್ನೂರು, ಶುಕ್ರವಾರ ಬೆಳಗ್ಗೆ ಕಾಂಗ್ರೆಸ್ ಭವನಕ್ಕೆ ಆಗಮಿಸಿ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸುತ್ತಿದ್ದರು. ಈ ವೇಳೆ ಕೆ.ಬಿ. ಪ್ರಸನ್ನಕುಮಾರ್ಗೆ ಟಿಕೆಟ್ ನೀಡಬೇಡಿ ಎಂದು ಭದ್ರಾ ಕಾಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಗುಂಪು ಕೈಯಲ್ಲಿ ಪ್ರದರ್ಶನ ಫಲಕಗಳನ್ನು ಪ್ರದರ್ಶಿಸುತ್ತಾ ಕಚೇರಿ ಒಳಗೆ ಬಂದು ಅರ್ಜಿ ಸಲ್ಲಿಸಿ ಹೊರಹೋಯಿತು. ಸ್ಥಳದಲ್ಲಿದ್ದ ಶಾಸಕ ಪ್ರಸನ್ನಕುಮಾರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಜೊತೆಗೆ ಫಲಕ ಮುರಿದು ಹಾಕಿದರು. ವೇಳೆ ಕೆಲವರ ಬಟ್ಟೆ ಅರಿದು ಹೋಯಿತು. ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಸ್ಥಿತಿ ಸುಧಾರಿಸಿದರು.
ಶಾಸಕ ಕೆ.ಬಿ. ಪ್ರಸನ್ನಕುಮಾರ್ಗೆ ಸ್ವಪಕ್ಷದಲ್ಲಿಯೇ ಪ್ರಬಲ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕರ ಬೆಂಬಲಿಗರು ಪಕ್ಷದ ವೀಕ್ಷಕರ ಮುಂದೆ ಶಾಸಕರಿಗೆ ಟಿಕೆಟ್ ನೀಡುವಂತೆ ಅರ್ಜಿ ಸಲ್ಲಿಸಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ