ಟಿ20 ಸರಣಿ ವಿಕ್ರಮನಾರಿಯರ ನಲಿದಾಟ


Team Udayavani, Feb 25, 2018, 6:00 AM IST

PTI2_24_2018_000197B.jpg

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತದ ವನಿತಾ ಕ್ರಿಕೆಟಿಗರು ಅವಳಿ ಇತಿಹಾಸ ಬರೆದಿದ್ದಾರೆ. ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡ ಬಳಿಕ ಟಿ20 ಸರಣಿಯನ್ನೂ ತನ್ನದಾಗಿಸಿಕೊಂಡಿದ್ದಾರೆ. ಶನಿವಾರದ 5ನೇ ಹಾಗೂ ಅಂತಿಮ ಚುಟುಕು ಪಂದ್ಯವನ್ನು 54 ರನ್ನುಗಳಿಂದ ಗೆದ್ದ ಹರ್ಮನ್‌ಪ್ರೀತ್‌ ಕೌರ್‌ ಪಡೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿತು. ಒಂದು ಪಂದ್ಯ ಮಳೆಯಿಂದ ರದ್ದುಗೊಂಡಿತ್ತು.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ಭಾರತ 4 ವಿಕೆಟಿಗೆ 166 ರನ್‌ ಪೇರಿಸಿ ಸವಾಲೊಡ್ಡಿದರೆ, ದಕ್ಷಿಣ ಆಫ್ರಿಕಾ 18 ಓವರ್‌ಗಳಲ್ಲಿ 112 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಶಿಖಾ ಪಾಂಡೆ, ರುಮೇಲಿ ಧರ್‌ ಮತ್ತು ರಾಜೇಶ್ವರಿ ಗಾಯಕ್ವಾಡ್‌ ತಲಾ 3 ವಿಕೆಟ್‌ ಕಿತ್ತು ಹರಿಣಗಳನ್ನು ಬೇಟೆಯಾಡಿದರು. ಮಿಥಾಲಿ ರಾಜ್‌ ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮಿಥಾಲಿ, ಜೆಮಿಮಾ ಭರ್ಜರಿ ಆಟ
ಮಿಥಾಲಿ ರಾಜ್‌ ಮತ್ತು ಯುವ ಆಟಗಾರ್ತಿ ಜೆಮಿನಾ ರೋಡ್ರಿಗಸ್‌ ಆತಿಥೇಯರ ದಾಳಿಯನ್ನು ದಿಟ್ಟ ರೀತಿಯಲ್ಲಿ ನಿಭಾಯಿಸಿ ಭಾರತದ ಇನ್ನಿಂಗ್ಸ್‌ ಬೆಳೆಸಿದರು. ಇವರಿಬ್ಬರ 2ನೇ ವಿಕೆಟ್‌ ಜತೆಯಾಟದಲ್ಲಿ 98 ರನ್‌ ಸಂಗ್ರಹಗೊಂಡಿತು. ಮಿಥಾಲಿ 50 ಎಸೆತಗಳಿಂದ ಸರ್ವಾಧಿಕ 62 ರನ್‌ ಬಾರಿಸಿದರು. ಅವರ ಬಿರುಸಿನ ಆಟದ ವೇಳೆ 3 ಸಿಕ್ಸರ್‌ ಹಾಗೂ 8 ಬೌಂಡರಿ ಸಿಡಿಯಿತು. ಜೆಮಿಮಾ ಕೊಡುಗೆ 44 ರನ್‌. 34 ಎಸೆತ ಎದುರಿಸಿದ ಜೆಮಿಮಾ 2 ಸಿಕ್ಸರ್‌ ಹಾಗೂ 3 ಬೌಂಡರಿ ಬಾರಿಸಿ ಮೆರೆದರು. ಇವರಿಬ್ಬರ ವಿಕೆಟ್‌ 4 ರನ್‌ ಅಂತರದಲ್ಲಿ ಉರುಳಿತು.

ಸ್ಮತಿ ಮಂಧನಾ 13 ರನ್‌ ಮಾಡಿ ಔಟಾದ ಬಳಿಕ ಮಿಥಾಲಿ-ಜೆಮಿಮಾ ಜತೆಗೂಡಿದ್ದರು. ಮಂಧನಾ-ಮಿಥಾಲಿ ಜೋಡಿಯ ಮೊದಲ ವಿಕೆಟ್‌ ಜತೆಯಾಟದಲ್ಲಿ 4.2 ಓವರ್‌ಗಳಿಂದ 32 ರನ್‌ ಬಂತು.

ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕೂಡ ಬಿರುಸಿನ ಆಟಕ್ಕಿಳಿದು 17 ಎಸೆತಗಳಿಂದ ಅಜೇಯ 27 ರನ್‌ ಸಿಡಿಸಿದರು (1 ಬೌಂಡರಿ, 2 ಸಿಕ್ಸರ್‌). 8 ರನ್‌ ಮಾಡಿದ ವೇದಾ ಕೃಷ್ಣಮೂರ್ತಿ ಇನ್ನಿಂಗ್ಸಿನ ಅಂತಿಮ ಎಸೆತದಲ್ಲಿ ರನೌಟಾದರು.

ದಕ್ಷಿಣ ಆಫ್ರಿಕಾ ಕುಸಿತ
ಭಾರತದ ಘಾತಕ ಬೌಲಿಂಗ್‌ ದಾಳಿಯನ್ನು ನಿಭಾಯಿಸಲು ಆರಂಭದಿಂದಲೇ ಪರದಾಡಿದ ದಕ್ಷಿಣ ಆಫ್ರಿಕಾ, 9ನೇ ಓವರ್‌ ವೇಳೆ 44 ರನ್ನಿಗೆ 5 ವಿಕೆಟ್‌ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಟ್ರಾಯಾನ್‌ ಮತ್ತು ಕಾಪ್‌ ನುಗ್ಗಿ ಬೀಸಲಾರಂಭಿಸಿದರೂ ಆಗಲೇ ಪಂದ್ಯ ಆತಿಥೇಯರ ಕೈಜಾರಿತ್ತು.

ಸಂಕ್ಷಿಪ್ತ ಸ್ಕೋರ್‌: ಭಾರತ-20 ಓವರ್‌ಗಳಲ್ಲಿ 4 ವಿಕೆಟಿಗೆ 166 (ಮಿಥಾಲಿ 62, ಜೆಮಿಮಾ 44, ಹರ್ಮನ್‌ಪ್ರೀತ್‌ ಔಟಾಗದೆ 27, ಮಂಧನಾ 13, ವೇದಾ 8, ಕಾಪ್‌ 22ಕ್ಕೆ 1, ಶಬಿ°ಂ 35ಕ್ಕೆ 1, ಖಾಕಾ 41ಕ್ಕೆ 1). ದಕ್ಷಿಣ ಆಫ್ರಿಕಾ-18 ಓವರ್‌ಗಳಲ್ಲಿ 112 (ಕಾಪ್‌ 27, ಟ್ರಯಾನ್‌ 25, ಡು ಪ್ರೀಝ್ 17, ಶಿಖಾ ಪಾಂಡೆ 16ಕ್ಕೆ 3, ರುಮೇಲಿ ಧರ್‌ 26ಕ್ಕೆ 3, ರಾಜೇಶ್ವರಿ ಗಾಯಕ್ವಾಡ್‌ 26ಕ್ಕೆ 3, ಪೂನಂ ಯಾದವ್‌ 25ಕ್ಕೆ 1). ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ಮಿಥಾಲಿ ರಾಜ್‌.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.