ಮೇಘಾಲಯದ ಪ್ರಮುಖ ಬಂಡುಕೋರ ಸೋಹನ್ ಹತ್ಯೆ
Team Udayavani, Feb 25, 2018, 7:00 AM IST
ಶಿಲ್ಲಾಂಗ್: ಮೇಘಾಲಯದ ಪ್ರಮುಖ ಬಂಡುಕೋರ, ನಿಷೇಧಿತ ಸಂಘಟನೆ ಗಾರೊ ನ್ಯಾಶನಲ್ ಲಿಬರೇಷನ್ ಆರ್ಮಿ (ಜಿಎನ್ಎಲ್ಎ)ಯ ಸ್ವಘೋಷಿತ ಮುಖ್ಯಸ್ಥ ಸೋಹನ್ ಡಿ. ಶಿರಾನನ್ನು ಭದ್ರತಾ ಪಡೆಗಳು ಶನಿವಾರ ಎನ್ಕೌಂಟರ್ ನಡೆಸಿ ಹತ್ಯೆಗೈದಿವೆ. ಈಸ್ಟ್ ಗಾರೊ ಹಿಲ್ಸ್ ಜಿಲ್ಲೆಯ ಡೊಬು ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಎನ್ಸಿಪಿ ಅಭ್ಯರ್ಥಿ ಜೋನಾಥನ್. ಎನ್. ಸಂಗ್ಮಾರನ್ನು ಸುಧಾರಿತ ಸ್ಫೋಟಕ ದಾಳಿಯಿಂದ ಹತ್ಯೆ ಮಾಡಿದ ಪ್ರಕರಣದ ಬಳಿಕ ಸೋಹನ್ ತಲೆಗೆ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಹತ್ಯೆ ಹಿನ್ನೆಲೆಯಲ್ಲಿ ಬಂಡುಕೋರ ನಿಗ್ರಹ ಕಾರ್ಯಾಚರಣೆಯನ್ನೂ ತೀವ್ರಗೊಳಿಸಲಾಗಿತ್ತು. ಡೊಬು ಪ್ರದೇಶದ ಅಚಕ್ಪೆಕ್ ಗ್ರಾಮದಲ್ಲಿ ಕೆಲ ಜಿಎನ್ಎಲ್ಎ ಬಂಡುಕೋರರು ಇದ್ದಾರೆ ಎಂಬ ಮಾಹಿತಿ ಮೇರೆಗೆ ಬಂಡುಕೋರ ನಿಗ್ರಹ ಪಡೆ ತತ್ಕ್ಷಣ ದಾಳಿ ನಡೆಸಿ ಎನ್ಕೌಂಟರ್ ನಡೆಸಿತು. ಈ ವೇಳೆ ಸೋಹನ್ ಮೃತನಾದನು ಎಂದು ಕಾರ್ಯಾಚರಣೆ ನಡೆಸಿದ ತಂಡದಲ್ಲಿದ್ದ ಹಿರಿಯ ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ