ರಸ್ತೆ ಬದಿಯ ಹೋಟೆಲ್‌ನಲ್ಲಿ ಟೀ ಕುಡಿದ ರಾಹುಲ್‌


Team Udayavani, Feb 25, 2018, 3:03 PM IST

vij-2.jpg

ವಿಜಯಪುರ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಜಯಪುರ ಜಿಲ್ಲೆಯ ಪ್ರವಾಸದ ವೇಳೆ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಲ್ಲದೇ, ರಸ್ತೆ ಬದಿ ಹೋಟೆಲ್‌ಗೆ ಅನಿರೀಕ್ಷಿತ ಪ್ರವೇಶಿಸಿ ಟೀ ಸವಿದು ಅಚ್ಚರಿ ಮೂಡಿಸಿದರು.

ತಿಕೋಟಾ ಕಾರ್ಯಕ್ರಮದ ಬಳಿಕ ವಿಜಯಪುರ ನಗರದಲ್ಲಿ ರೋಡ್‌ ಶೋ ಕಾರ್ಯಕ್ರಮ ಇತ್ತು. ಈ ವೇಳೆ ರಾಹುಲ್‌ ಅನಿರೀಕ್ಷಿತವಾಗಿ ಪ್ರವಾಸಿ ಮಂದಿರದ ಎದುರಿಗೆ ಇರುವ ಸಲೀಂ ಎಂಬುವರ ರಸ್ತೆ ಬದಿ ತಟ್ಟಿ ಹೋಟೆಲ್‌ಗೆ ಪ್ರವೇಶಿಸಿ ಟೀ ರುಚಿ ನೋಡಿ, ಬಿಸ್ಕತ್‌ ಸ್ವಾದ ನೋಡಿದರು.

ಟೀ ಸೇವನೆ ಬಳಿಕ ಎರಡು ಸಾವಿರ ರೂ. ನೀಡಲು ರಾಹುಲ್‌ ಮುಂದಾದರೂ “ನಿಮ್ಮಂಥ ನಾಯಕ ನನ್ನ ಹೋಟೆಲ್‌ ಪ್ರವೇಶಿಸಿ ಟೀ ಸೇವನೆ ಮಾಡಿದ್ದೇ ನನ್ನ ಅದೃಷ್ಟ ‘ ಎಂದ ಹೋಟೆಲ್‌ ಮಾಲೀಕ ಸಲೀಂ ಹಣ ಪಡೆಯಲು ನಿರಾಕರಿಸಿದರು. ಈ ಹಂತದಲ್ಲಿ ಜತೆಗಿದ್ದ ಜಲಸಂಪನ್ಮೂಲ ಸಚಿವ ಡಾ|ಎಂ.ಬಿ.ಪಾಟೀಲ ಅವರು ಸರ್‌ ನೀವು ಹಣ ಕೊಡುವುದು ಬೇಡ ನಾನು ಕೊಡುತ್ತೇನೆ ಎಂದು ಅವರು ಕೂಡ ಎರಡು ಸಾವಿರ ರೂ. ನೋಟು ನೀಡಿದರು. ರಾಹುಲ್‌ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ|
ಜಿ.ಪರಮೇಶ್ವರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಇತರರು ಸಾಥ್‌ ನೀಡಿದರು.

ಮತ್ತೂಂದೆಡೆ ರಾಹುಲ್‌ ಗಾಂಧಿ ಅವರು ವಿಜಯಪುರ ರೋಡ್‌ ಶೋ ಬಳಿಕ ನಗರದ ಗಾಂಧೀಜಿ ವೃತ್ತದಲ್ಲಿ ಸಣ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇದಿಕೆ ಏರುವ ಮುನ್ನ ರಾಹುಲ್‌ ಅವರು ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹೂಮಾಲೆ ಹಾಕಿ ನಮನ ಸಲ್ಲಿಸಿದರು.

ತಿಕೋಟಾ ಸಮಾವೇಶದ ಬಳಿಕ ತೊರವಿ ಗ್ರಾಮಕ್ಕೆ ಆಗಮಿಸುತ್ತಲೇ ರಸ್ತೆಯ ಇಕ್ಕೆಲದಲ್ಲಿ ನಿಂತಿದ್ದ ಜನರು ರಾಹುಲ್‌ ಅವರನ್ನು ಸ್ವಾಗತಿಸಿದರು. ಬಳಿಕ ಅಲ್‌ ಅಮೀನ್‌ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಸ್ತೆಗಳಲ್ಲಿ ನಿಂತು ರಾಹುಲ್‌ ಅವರತ್ತ ಕೈ ಬೀಸಿದಾಗ, ಕೆಲವು ವಿದ್ಯಾರ್ಥಿಗಳು ರಾಹುಲ್‌ ಅವರ ಕೈ ಕುಲುಕಿ ಪುಳಕಗೊಂಡರು. ಪಕ್ಕದಲ್ಲೇ ಹಮ್ಮಿಕೊಂಡಿದ್ದ ಸಣ್ಣ ಕಾರ್ಯಕ್ರಮದಲ್ಲಿ ಸೇರಿದ್ದ ಬಂಜಾರಾ ಸಮುದಾಯದ ಜನರು ಹೂಗುಚ್ಚ ನೀಡಿ ಸಂಭ್ರಮಿಸಿದರು.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.