ರಾಹುಲ್‌ ಎಸ್‌ಪಿಜಿ ಭದ್ರತಾ ಸಿಬ್ಬಂದಿ ಕಿರಿಕಿರಿ


Team Udayavani, Feb 25, 2018, 3:17 PM IST

vij-3.jpg

ವಿಜಯಪುರ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಜಯಪುರ ಜಿಲ್ಲೆಯ ಎರಡು ದಿನಗಳ ಪ್ರವಾಸದ ಮೊದಲ ದಿನವೇ ಎಸ್‌ಪಿಜಿ ಭದ್ರತಾ ಸಿಬ್ಬಂದಿಯ ಕಟ್ಟುನಿಟ್ಟಿನ ನಿಯಮದಿಂದಾಗಿ ಹಲವು ರೀತಿಯಲ್ಲಿ ಕಿರಿ ಕಿರಿ ಅನುಭವಿಸಿದರು.

ಶನಿವಾರ ತಿಕೋಟಾದಲ್ಲಿ ರಾಹುಲ್‌ ಗಾಂಧಿ ಅವರು ಸ್ತ್ರೀಶಕ್ತಿ ಸಮಾವೇಶದಲ್ಲಿ ಮಹಿಳೆಯರನ್ನು ಉದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವಿತ್ತು, ಇದಕ್ಕಾಗಿ ಸುಮಾರು 70 ಸಾವಿರ ಮಹಿಳೆಯರನ್ನು ಕರೆತರಲಾಗಿತ್ತು.

ರಾಹುಲ್‌ ಅವರಿಗೆ ಝಡ್‌ ಭದ್ರತೆ ಇರುವ ಕಾರಣ ಅವರ ಭದ್ರತೆಗೆ ನಿಯೋಜಿತ ಎಸ್‌ಪಿಜಿ ಸಿಬ್ಬಂದಿ ಭಾರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರು. ಕಾರ್ಯಕ್ರಮಕ್ಕೆ ಬೆಂಕಿ ಪೊಟ್ಟಣ, ಸಿಗರೇಟು, ತಂಬಾಕು ಹೀಗೆ ಹಲವು ವಸ್ತುಗಳನ್ನು ನಿಷೇಧಿಸಿದ್ದರು. ಅಲ್ಲದೇ ಬಾಟಲಿ ನೀರನ್ನೂ ಕೊಂಡೊಯ್ಯಲು ನಿರ್ಬಂಧಿಸಿದ್ದರು. ಹೆಜ್ಜೆ ಹೆಜ್ಜೆಗೂ ಸ್ಥಳೀಯ ಪೊಲೀಸರ ತಕರಾರುಗಳೂ ಇದ್ದವು.

ಹೀಗಾಗಿ ಬೆಳಗ್ಗೆಯಿಂದಲೇ ರಾಹುಲ್‌ಗಾಂಧಿ ಆಗಮಕ್ಕೆ ಕಾದು ಕುಳಿತಿದ್ದ ಜನರು ಕುಡಿಯಲು ನೀರೂ ಇಲ್ಲದೇ ಪರದಾಡಿದರು. ವೇದಿಕೆ ಪಕ್ಕದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರಿಗಾಗಿ ಊಟ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರೂ ವೇದಿಕೆಗೆ ಆವರಣಕ್ಕೆ ನೀರು ತರಲು ನಿರ್ಬಂಧಿಸಿದ್ದರು.

ಇದರಿಂದಾಗಿ ಮಕ್ಕಳು, ವೃದ್ಧರೊಂದಿಗೆ ಆಗಮಿಸಿದ್ದ ಮಹಿಳೆಯರು ಬಿಸಿಲಿನ ಧಗೆ ತಣಿಸಿಕೊಳ್ಳಲು ಕುಡಿಯುವ ನೀರೂ ಸಿಗದೇ ಪರದಾಡಿದರು. ಕೆಲವರು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಪ್ರಾಯೋಗಿಕ ಪರೀಕ್ಷೆಗಾಗಿ ಗಂಗಾ ಪೂಜೆಗೆ ತಂದಿದ್ದ ಕುಂಭಗಳ ನೀರನ್ನೇ ಕುಡಿದು ಕೆಲವರು ದಾಹ ನೀಗಿಕೊಂಡರು.

ರಾಹುಲ್‌ ಕಾರ್ಯಕ್ರಮಕ್ಕಾಗಿ ಭಾರಿ ಪ್ರಮಾಣದಲ್ಲಿ ವಾಹನಗಳು ಆಗಮಿಸಿದ್ದವು. ಅದರಲ್ಲೂ ಸಂಘಟಕರು ಸಮಾವೇಶಕ್ಕೆ ಮಹಿಳೆಯರನ್ನು ಕರೆ ತರಲು ಬಸ್‌ ವ್ಯವಸ್ಥೆ ಮಾಡಿದ್ದರು. ದ್ವಿಚಕ್ರ, ಲಘು ಹಾಗೂ ಭಾರಿ ವಾಹನಗಳ ನಿಲುಗಡೆ ಪ್ರತ್ಯೇಕ ವ್ಯವಸ್ಥೆ ಮಾಡಿದ್ದರು. ಆದರೆ ತಿಕೋಟಾ ಬಳಿಕ ರಾಹುಲ್‌ ಅವರು ವಿಜಯಪುರವರೆಗೆ ಸುಮಾರು 25 ಕಿ.ಮೀ. ರಸ್ತೆ ಮಾರ್ಗದ ಸಂಚಾರ ಹಾಗೂ ರೋಡ್‌ ಶೋ ಹಮ್ಮಿಕೊಂಡಿದ್ದರು. ಇದರಿಂದ ಈ ಮಾರ್ಗದ ರಸ್ತೆಗಳಲ್ಲಿ ಎಲ್ಲೆಲ್ಲೂ ಟ್ರಾಫಿಕ್‌ ಜಾಮ್‌ನಿಂದಾಗಿ ಕಿ.ಮೀ. ವರೆಗೆ ಇಕ್ಕೆಲಗಳಲ್ಲಿ ಬಸ್‌ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಇನ್ನು ವಿಜಯಪುರ ನಗರದಲ್ಲಿ ರೋಡ್‌ ಶೋ ಇದ್ದ ಕಾರಣ ರಾಹುಲ್‌ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿರುವ ಸರ್ಕಾರಿ ಪ್ರವಾಸಿ ಮಂದಿರದಿಂದ ಮಹಾತ್ಮ ಗಾಂಧಿಧೀಜಿ ವೃತ್ತದವರೆಗೆ ಹಾಗೂ ಅಲ್ಲಿಂದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದವರೆಗೆ ಬಹುತೇಕ ರಸ್ತೆ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಿದ್ದರು. ಇದರಿಂದಾಗಿ ಸಾರ್ವಜನಿಕರು
ಪರದಾಡುವಂತಾಯಿತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.