ಕೇಜ್ರಿ ಕ್ಷಮೆ ಕೇಳ್ಳೋವರೆಗೆ ಮೌನಾಡಳಿತಕ್ಕೆ ಮೊರೆ
Team Udayavani, Feb 27, 2018, 10:50 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಅಧಿಕಾರಿಗಳು ಹಾಗೂ ಆಮ್ ಆದ್ಮಿ ಪಕ್ಷದ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ಸರಕಾರದ ಮುಖ್ಯ ಕಾರ್ಯದರ್ಶಿ ಅನ್Ï ಪ್ರಕಾಶ್ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕುರಿತು ಸಿಎಂ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಾರ್ವಜನಿಕವಾಗಿ ಕ್ಷಮೆ ಕೋರದ ಹೊರತು ನಾವು ಅವರೊಂದಿಗೆ ಮೌಖೀಕವಾಗಿ ಸಂಭಾಷಣೆ ನಡೆಸುವುದಿಲ್ಲ. ಅಲ್ಲಿಯವರೆಗೆ ಎಲ್ಲ ಸಂವಹನವೂ ಲಿಖೀತ ರೂಪದಲ್ಲಷ್ಟೇ ನಡೆಯಲಿದೆ ಎಂದು ಐಎಎಸ್ ಹಾಗೂ ಇತರೆ ಅಧಿಕಾರಿಗಳು ಖಡಕ್ಕಾಗಿ ತಿಳಿಸಿದ್ದಾರೆ. ಸೋಮವಾರ ನಡೆದ ಸಭೆಯಲ್ಲಿ ದಿಲ್ಲಿ ಸರಕಾರಿ ನೌಕರರ ಜಂಟಿ ವೇದಿಕೆ ಈ ನಿರ್ಣಯ ಕೈಗೊಂಡಿದೆ.
ಅಷ್ಟೇ ಅಲ್ಲ, ಸಚಿವ ರಾಜೇಂದರ್ ಪಾಲ್ ಗೌತಮ್ ಅವರ ಸಂಧಾನ ಮಾತುಕತೆಗೂ ಅಧಿಕಾರಿಗಳು ಒಪ್ಪಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೌತಮ್, ಅಧಿಕಾರಿಗಳ ಈ ವರ್ತನೆ ಸರಿಯಲ್ಲ. ಪ್ರಸ್ತುತ ಬಿಕ್ಕಟ್ಟನ್ನು ಶಮನಗೊಳಿಸುವ ನಿಟ್ಟಿನಲ್ಲಿ ಸರಕಾರ ಕೈಗೊಂಡಿರುವ ಕ್ರಮಕ್ಕೆ ಅಧಿಕಾರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಬೇಕು ಎಂದಿದ್ದಾರೆ.
ಇನ್ನೊಂದೆಡೆ, ತಮ್ಮ ಪಕ್ಷದ ನಾಯಕರಾದ ಇಮ್ರಾನ್ ಹುಸೇನ್ ಮತ್ತು ಆಶಿಷ್ ಖೇತಾನ್ ಅವರ ಮೇಲೂ ಹಲ್ಲೆ ನಡೆದಿತ್ತು ಎಂದು ಆರೋಪಿಸಿರುವ ಆಪ್, ಸೋಮವಾರ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರನ್ನು ಭೇಟಿಯಾಗಿ, ದೂರು ಸಲ್ಲಿಸಿದೆ. ಜತೆಗೆ, ಹಲ್ಲೆ ನಡೆದ ವಿಡಿಯೋ ಸಾಕ್ಷ್ಯಗಳನ್ನೂ ಒದಗಿಸಿದೆ.
ತಿರುಚಿದ ದೃಶ್ಯ: ಏತನ್ಮಧ್ಯೆ, ಪ್ರಕರಣ ಸಂಬಂಧ ಕೇಜ್ರಿವಾಲ್ ನಿವಾಸದಲ್ಲಿ ವಶಪಡಿಸಿಕೊಳ್ಳಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ತಿರುಚಲಾಗಿದೆ ಎಂದು ದಿಲ್ಲಿ ಪೊಲೀಸರು ಕೋರ್ಟ್ಗೆ ಮಾಹಿತಿ ನೀಡಿ ದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಟಿವಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ, ಇನ್ನು ಮುಂದೆ ನಡೆಯುವ ಎಲ್ಲ
ಅಧಿಕೃತ ಸಭೆಗಳನ್ನೂ ನೇರ ಪ್ರಸಾರ ಮಾಡುವ ಬಗ್ಗೆ ಆಪ್ ಸರಕಾರ ಚಿಂತನೆ ನಡೆಸಿದೆ.
ಸಭೆಯ ವಿಡಿಯೋಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡುವ ಕುರಿತು ಚರ್ಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ