ಕಂಪ್ಯೂಟರ್‌ ಶಿಕ್ಷಣ ಬ್ರೇಕ್‌!


Team Udayavani, Feb 27, 2018, 4:01 PM IST

ra_y-1.jpg

ಹಟ್ಟಿ ಚಿನ್ನದ ಗಣಿ: ಜೆಸ್ಕಾಂನವರು ಗೌಡೂರು ವಲಯದ ಯಲಗಟ್ಟಾ ಸರ್ಕಾರಿ ಪ್ರೌಢಶಾಲೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಶಾಲೆ ಕಗ್ಗತ್ತಲಲ್ಲಿದ್ದು, ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣವೂ ದೊರೆಯದಂತಾಗಿದೆ.

2008-09ನೇ ಸಾಲಿನಲ್ಲಿ ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯಿಂದ ಶಾಲೆಗೆ 15 ಕಂಪ್ಯೂಟರ್‌ಗಳನ್ನು ಒದಗಿಸಲಾಗಿದೆ. ನಾಲ್ಕು ವರ್ಷ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ತರಬೇತಿ ನೀಡಲಾಗಿದೆ. ನಂತರ ನಿರ್ವಹಣೆ ಕೊರತೆಯಿಂದ ತರಬೇತಿ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ನಾಲ್ಕು ತಿಂಗಳ ಹಿಂದೆ ಶಾಲೆಯ ವಿದ್ಯುತ್‌ನೂ ಕಟ್‌ ಮಾಡಿದ್ದರಿಂದ ಕಂಪ್ಯೂಟರ್‌ ಹಾಗೂ ಯುಪಿಎಸ್‌ಗಳು ಧೂಳು ಹಿಡಿದಿದ್ದು, ಕೇಳುವವರೆ ಇಲ್ಲದಂತಾಗಿದೆ. ತರಬೇತಿ ನೀಡಲು ನಿಯುಕ್ತಿಗೊಳಿಸಿದ್ದ ಖಾಸಗಿ ಸಂಸ್ಥೆಯವರು 35,000 ವಿದ್ಯುತ್‌ ಬಿಲ್‌ ಪಾವತಿಸದ್ದರಿಂದ ಶಾಲೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ.

ಈ ಕುರಿತು ಶಾಲಾ ಸಿಬ್ಬಂದಿಗಳನ್ನು ವಿಚಾರಿಸಿದಾಗ ಕಂಪ್ಯೂಟರ್‌ ತರಬೇತಿ ಕೊಠಡಿ ಹಾಗೂ ಶಾಲೆಯ ವಿದ್ಯುತ್‌ ಮೀಟರ್‌ ಬೇರೆ ಇದೆ. ಕಂಪ್ಯೂಟರ್‌ ತರಬೇತಿ ಕೊಠಡಿ ನಿರ್ವಹಣೆ ಶಾಲೆಯ ವ್ಯಾಪ್ತಿಗೆ ಬರುವದಿಲ್ಲ. ಖಾಸಗಿ ಸಂಸ್ಥೆಯವರು ಬಿಲ್‌ ಪಾವತಿಸದಿದ್ದರೆ ಆ ಕೋಣೆಯ ವಿದ್ಯುತ್‌ ಸಂಪರ್ಕ ಮಾತ್ರ ಕಡಿತಗೊಳಿಸಬೇಕು ಮತ್ತು ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯವರು ತರಬೇತಿ ನೀಡುತ್ತಿರುವ ಸಂಸ್ಥೆ ವಿರುದ್ಧ ಕಾನೂನು ಕ್ರಮ ಜರುಗಿಸಿ ವಸೂಲಿ ಮಾಡುವುದನ್ನು ಬಿಟ್ಟು ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎನ್ನುವ ಹಾಗೆ ಶಾಲೆಯ ವಿದ್ಯುತ್‌ ಸಂಪರ್ಕವನ್ನೂ ಕಡಿತಗೊಳಿಸಿದ್ದಾರೆ ಎಂದು ದೂರಿದರು.

ಸಿಅರ್‌ಸಿ ಗುರನಗೌಡರನ್ನು ಸಂಪರ್ಕಿಸಿದರೆ ಮಕ್ಕಳ ಕಲಿಕೆ ದೃಷ್ಟಿಯಿಂದ ವಿದ್ಯುತ್‌ ಸಂಪರ್ಕ ನೀಡಬೇಕು. ವಿದ್ಯುತ್‌ ಕಡಿತದಿಂದ ಶಾಲೆಯಲ್ಲಿ ತೀವ್ರ ಸಮಸ್ಯೆಯುಂಟಾಗಿದೆ ಎಂದು ತಿಳಿಸಿದ್ದಾರೆ. ಶಾಲೆಯಲ್ಲಿ 242 ಮಕ್ಕಳು 10 ಜನ ಸಿಬ್ಬಂದಿ ಇದ್ದು,
ವಲಯದ ಮೂರು ಪ್ರೌಢಶಾಲೆಗಳ ಪೈಕಿ ಯಲಗಟ್ಟಾ ಶಾಲೆ ಶಿಕ್ಷಣ, ಕ್ರೀಡೆಯಲ್ಲಿ ಉತ್ತಮ ಹೆಸರು ಪಡೆದಿದೆ. ಆದರೆ ಶಿಕ್ಷಣ
ಇಲಾಖೆಯ ಬೇಜವಬ್ದಾರಿಯಿಂದ ಸರ್ಕಾರಿ ಶಾಲೆಯ ಕಲಿಕೆಗೆ ಹಿನ್ನಡೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ

ನಾವು ಹಲವು ಬಾರಿ ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಗೆ ಪತ್ರ ಬರೆದಿದ್ದೇವೆ. ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಎಜ್ಯುಸ್ಯಾಟ್‌ ತರಗತಿಗಳಿಗೆ ತೊಂದರೆಯಾಗಿದೆ. 
 ಅಯ್ಯಪ್ಪ, ಮುಖ್ಯ ಶಿಕ್ಷಕ ಯಲಗಟ್ಟಾ ಪ್ರೌಢಶಾಲೆ

ಶಿಕ್ಷಣ ಇಲಾಖೆ ಬೇಜವಾಬ್ದಾರಿತನ ದಿಂದ ಮಕ್ಕಳು ಕಂಪ್ಯೂಟರ್‌ ತರಬೇತಿಯಿಂದ ವಂಚಿತರಾಗುತ್ತಿದ್ದಾರೆ. ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ 4 ತಿಂಗಳಾದರೂ ಸಹಿತ ಯಾವುದೆ ಕ್ರಮಕ್ಕೆ ಮುಂದಾಗಿಲ್ಲ. ಸಾ.ಶಿ. ಇಲಾಖೆ ಉಪನಿರ್ದೇಶಕರು ಕೂಡಲೇ ಸಮಸ್ಯೆ ಇತ್ಯರ್ಥಪಡಿಸಬೇಕು.
ಅಣ್ಣಾರಾಯ, ಪಾಲಕರು.

ಯಲಗಟ್ಟಾ ಶಾಲೆ ವಿದ್ಯುತ್‌ ಬಿಲ್‌ 35,000 ರೂ. ಆಗಿದೆ. ಕಳೆದ 8 ವರ್ಷದಿಂದ ಬಿಲ್‌ ಪಾವತಿಸಿಲ್ಲ, ಹಲವು ಬಾರಿ ಎಚ್ಚರಿಕೆ ನೀಡಿದರೂ ನಿಗಾ ವಹಿಸಿಲ್ಲ, ಸಂಪರ್ಕ ಕಡಿತಗೊಳಿಸಿ 4 ತಿಂಗಳಾದರೂ ಈ ಬಗ್ಗೆ ಬಂದು ವಿಚಾರಿಸಿಲ್ಲ. ಇದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿ ತೋರಿಸುತ್ತದೆ.
 ದೇವರಾಜ, ಅಧಿಕಾರಿ ಜೆಸ್ಕಾಂ ಹಟ್ಟಿ ಚಿನ್ನದಗಣಿ.

ಶಾಲೆ ಮುಖ್ಯ ಶಿಕ್ಷಕರ ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು, ಬಿಲ್‌ ಪಾವತಿಸದಿದ್ದರೆ ಕಂಪ್ಯೂಟರ್‌ ತರಗತಿಯ ಕೊಠಡಿ ವಿದ್ಯುತ್‌ ಸಂಪರ್ಕ ಮಾತ್ರ ಕಡಿತಗೊಳಿಸಿ, ಶಾಲೆಗೆ ವಿದ್ಯುತ್‌ ಸಂಪರ್ಕ ಮುಂದುವರಿಸುವಂತೆ ಜೆಸ್ಕಾಂ ಇಲಾಖೆಗೆ ತಿಳಿಸಲಾಗುವುದು. 
 ನಂದನೂರು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು.

ಟಾಪ್ ನ್ಯೂಸ್

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.