ಚಾಂದಿನಿ ಶಾಶ್ವತ ವಿದಾಯ


Team Udayavani, Mar 1, 2018, 8:15 AM IST

s-24.jpg

ಮುಂಬೈ: ಬಾಲಿವುಡ್‌ ತಾರೆ ಶ್ರೀದೇವಿ ಅಂತ್ಯ ಸಂಸ್ಕಾರ ಬುಧವಾರ, ಸರ್ಕಾರಿ ಗೌರವಗಳೊಂದಿಗೆ ಮುಂಬೈನ ವಿಲೆ ಪಾರ್ಲೆ ಸೇವಾ ಸಮಾಜದ ಚಿತಾಗಾರದಲ್ಲಿ ನೆರವೇರಿತು. ಶ್ರೀದೇವಿ ಪತಿ ಬೋನಿ ಕಪೂರ್‌ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಪುತ್ರಿಯರಾದ ಜಾಹ್ನವಿ, ಖುಷಿ ಜತೆಯಲ್ಲಿದ್ದರು. 

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀದೇವಿ ಅವರಿಗೆ ಅವರ ಅಚ್ಚುಮೆಚ್ಚಾದ ಕಡುಕೆಂಪು ಬಣ್ಣದ ಕಾಂಜೀವರಂ ರೇಷ್ಮೆ ಸೀರೆ ಉಡಿಸಲಾಯಿತು. ಚಿನ್ನಾಭರಣಗಳನ್ನು ತೊಡಿಸಲಾಯಿತು. ಮುಖಕ್ಕೆ ಮೇಕಪ್‌ ಮಾಡಿ, ಹಣೆಗೆ ಕಡುಕೆಂಪು ಬಣ್ಣದ ಬಿಂದಿ ಹಚ್ಚಲಾಯಿತು. ಇಹಲೋಕದಿಂದ ಶಾಶ್ವತವಾಗಿ ದೂರವಾಗುವ ಮುನ್ನ ಸೌಂದರ್ಯದ ಖನಿಯಾಗಿದ್ದ ಶ್ರೀದೇವಿ ಅವರನ್ನು ಸೌಂದರ್ಯವತಿಯಾಗಿಯೇ ಸಿಂಗರಿ ಸಿದ್ದು ಅನೇಕ ಅಭಿಮಾನಿಗಳ ಕಣ್ಣಂಚಿನಲ್ಲಿ ನೀರು ತರಿಸಿತು. 

ಬೆಳಗ್ಗೆ ಅಂತಿಮ ದರ್ಶನ: ದುಬೈನಿಂದ ಮಂಗಳವಾರ ರಾತ್ರಿ ಮುಂಬೈಗೆ ಆಗಮಿಸಿದ್ದ ಶ್ರೀದೇವಿಯವರ ಮೃತದೇಹವನ್ನು ಮೊದಲು, ಲೋಖಂಡ್‌ವಾಲಾದಲ್ಲಿರುವ ಶ್ರೀದೇವಿ ನಿವಾಸಕ್ಕೆ ಕೊಂಡೊಯ್ಯಲಾಗಿತ್ತು.  ಬೆಳಗ್ಗೆ 9 ಗಂಟೆಯಿಂದ ಅಂಧೇರಿಯ ಸೆಲೆಬ್ರೇಷನ್‌ ನ್ಪೋರ್ಟ್ಸ್ ಕ್ಲಬ್‌ನಲ್ಲಿ ಅವರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಹಾಗೂ ಚಿತ್ರತಾರೆಗಳು ಅಪಾರ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ನೆಚ್ಚಿನ ನಟಿಗೆ ಅಂತಿಮ ನಮನ ಸಲ್ಲಿಸಿದರು. 

ದಕ್ಷಿಣ ಭಾರತದ ತಾರೆಯರಾದ ಚಿರಂಜೀವಿ, ವೆಂಕಟೇಶ್‌, ಪ್ರಕಾಶ್‌ ರೈ ಸೇರಿದಂತೆ ಶಾರೂಖ್‌ ಖಾನ್‌, ದೀಪಿಕಾ ಪಡುಕೋಣೆ, ಜಾಕಿ ಶ್ರಾಫ್, ಶಾಹೀದ್‌ ಕಪೂರ್‌, ನಿರ್ದೇಶಕರಾದ ರಾಕೇಶ್‌ ರೋಷನ್‌, ಡೇವಿಡ್‌ ಧವನ್‌, ಸಂಜಯ್‌ ಲೀಲಾ ಬನ್ಸಾಲಿ, ಮಹಿಮಾ ಚೌಧರಿ, ಜಯಾ ಬಚ್ಚನ್‌, ಐಶ್ವರ್ಯ ರೈ, ವಿವೇಕ್‌ ಓಬೆರಾಯ್‌, ವಿದ್ಯಾ ಬಾಲನ್‌ ಸೇರಿದಂತೆ ಇಡೀ ಬಾಲಿವುಡ್‌ ಚಿತ್ರರಂಗವೇ ಅಲ್ಲಿ ನರೆದಿತ್ತು. 

ಮಧ್ಯಾಹ್ನದ ಹೊತ್ತಿಗೆ ಮಹಾರಾಷ್ಟ್ರ  ಸರ್ಕಾರ, ಶ್ರೀದೇವಿ ಅವರಿಗೆ ಸರ್ಕಾರಿ ಗೌರವ ನೀಡಲು ನಿರ್ಧರಿಸಿತು. ಸಮಾಜ ಸೇವೆ, ಕಲೆ, ಸಾಹಿತ್ಯ ರಂಗಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರು ನಿಧನರಾದಾಗ ತನ್ನ ವಿವೇಚನೆ ಮೇರೆಗೆ ಸರ್ಕಾರಿ ಗೌರವ ನೀಡುವ ಅಧಿಕಾರ ಹೊಂದಿದೆ. 2013ರಲ್ಲಿ ಪದ್ಮಶ್ರೀ ಗೌರವ ಪಡೆದಿದ್ದ ಶ್ರೀದೇವಿಯವರ ಅಂತ್ಯ ಸಂಸ್ಕಾರವನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ತೀರ್ಮಾನಿಸಲಾಯಿತು. ಈ ಹಿನ್ನೆಲೆಯಲ್ಲಿ, ಸೆಲೆಬ್ರೇಷನ್‌ ನ್ಪೋರ್ಟ್ಸ್ ಕ್ಲಬ್‌ನಲ್ಲಿದ್ದ ಶ್ರೀದೇವಿ ಪಾರ್ಥಿವ ಶರೀರದ ಮೇಲೆ ತ್ರಿವರ್ಣ ಧ್ವಜ ಹೊದಿಸಿ, ಕುಶಾಲ ತೋಪು ಸಿಡಿಸಲಾಯಿತು. 

ರಸ್ತೆಗಳಲ್ಲಿ ಜನಸಾಗರ
ಮಧ್ಯಾಹ್ನ 2:12ರ ಹೊತ್ತಿಗೆ, ಶ್ರೀದೇವಿಯವರ ಅಂತಿಮ ಯಾತ್ರೆ ಆರಂಭವಾಯಿತು. ಹೂಗಳಿಂದ ಅಲಂಕೃತವಾಗಿದ್ದ ವಾಹನದಲ್ಲಿ ಅವರ ಪಾರ್ಥಿವ ಶರೀರ ಸಾಗುತ್ತಿದ್ದಾಗ ಬಾಲಿವು ಡ್‌ನ‌ ತಾರೆಗಳು ಸೇರಿದಂತೆ ಸಾವಿರಾರು ಮಂದಿ ವಾಹನವನ್ನು ಕಾಲ್ನಡಿಗೆಯಲ್ಲೇ ಹಿಂಬಾಲಿಸಿದರು. ಪಾರ್ಥಿ ವ ಶರೀರ ವಿಲೆ ಪಾರ್ಲೆ ಪ್ರಾಂತ್ಯ ತಲುಪುವಷ್ಟರಲ್ಲಿ, ಸಂಜೆ 3 ಗಂಟೆಯಾಗಿತ್ತು. ಬಾಲಿವುಡ್‌ ತಾರೆಗಳಾದ ಶಾರೂಖ್‌ ಖಾನ್‌, ಕತ್ರಿನಾ ಕೈಫ್, ವಿದ್ಯಾ ಬಾಲನ್‌, ಅನುಪಮ್‌ ಖೇರ್‌, ಅನಿಲ್‌ ಅಂಬಾನಿ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಆಗಮಿಸಿದ್ದರು. ಅಲ್ಲಿ ಯೂ ಕೆಲ ಹೊತ್ತು ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾ ಗಿತ್ತು. ಚಿತಾಗಾರ ಸೇರಿದ ನಂತರ, ಶ್ರೀದೇವಿಯವ ಪಾರ್ಥಿಕ ಶರೀರಕ್ಕೆ ಕೊನೆಯ ಅಲಂಕಾರ, ಇತರ ಧಾರ್ಮಿಕ ವಿಧಿವಿಧಾ ನಗಳು, ಭಜನೆ ಗಳು ನೆರವೇರಿದವು. ಆನಂತರ, ಗಣ್ಯರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾ ಯಿತು. ಈ ಸಂದರ್ಭದಲ್ಲಿ, ಅನೇಕರು ಗದ್ಗದಿತರಾಗಿ ಕಂಬನಿಯ ನಮನ ಸಲ್ಲಿಸಿದ್ದು ಶ್ರೀದೇವಿಯವರ ಜನಪ್ರಿಯತೆಗೆ ಸಾಕ್ಷಿಯೆನಿಸಿತು. 

ಕರ್ನಾಟಕದಿಂದಲೂ ಭೇಟಿ
 ನಟಿಯ ಅಂತಿಮ ದರ್ಶನ ಪಡೆಯಲು ಕರ್ನಾಟಕದಿಂದಲೂ ನೂರಾರು ಮಂದಿ ಭೇಟಿ ನೀಡಿದ್ದರು. ಈ ಗುಂಪಿನಲ್ಲೊಬ್ಬರು ಸುದ್ದಿಸಂಸ್ಥೆ ಜತೆಗೆ ಮಾತನಾಡಿ  ನಟ ಅನಿಲ್‌ ಕಪೂರ್‌ ನಿವಾಸಕ್ಕೂ ತೆರಳಿದ್ದಾಗಿ ತಿಳಿಸಿದ್ದಾರೆ.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀದೇವಿಗೆ ಕಾಂಚೀವರಂ ಸೀರೆ, ಒಡವೆ, ಮೇಕಪ್‌
ಅಗಲಿದ ಜನಪ್ರಿಯ ಕಲಾವಿದೆಗೆ ಮಹಾರಾಷ್ಟ್ರ ರಾಜ್ಯದಿಂದ ಸರ್ಕಾರಿ ಗೌರವ
ಕೋಟ್ಯಂತರ ಅಭಿ ಮಾನಿಗಳ ಸಮ್ಮು ಖದಲ್ಲಿ ಭೌತಿಕ ವಾಗಿ ಮರೆಯಾದ ಮೋಹಕ ನಟಿ

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.