ಪಡುಬಿದ್ರಿ:ರೌಡಿಶೀಟರ್‌ನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು


Team Udayavani, Mar 1, 2018, 8:24 AM IST

murder.jpg

ಪಡುಬಿದ್ರಿ: ರೌಡಿಶೀಟರ್‌ ನವೀನ್‌ ಡಿ’ ಸೋಜಾ(38)ನ ಮೇಲೆ ಬುಧವಾರ ರಾತ್ರಿ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ ಕೊಚ್ಚಿ ಕೊಲೆಗೈದಿದೆ. ಪಡುಬಿದ್ರಿ-ಕಾರ್ಕಳ ಹೆದ್ದಾರಿಯ  ಕಾಂಜರಕಟ್ಟೆ ಸಮೀಪದ ಬಾರ್‌ ಎದುರು ಈ ಕೃತ್ಯ ನಡೆದಿದೆ. ನವೀನ್‌ ತನ್ನ ಇತರ ಇಬ್ಬರು ಗೆಳೆಯರೊಂದಿಗೆ ಬಾರ್‌ಗೆ ಹೋಗಿ ಕುಡಿದು ರಾತ್ರಿ 10 ಗಂಟೆ ಸುಮಾರಿಗೆ ಹೊರಗೆ ಬಂದು ಬೈಕ್‌ ಏರಲು ತಯಾರಿ ನಡೆಸುತ್ತಿದ್ದಾಗ ಕಾದು ಕುಳಿತಿದ್ದ ತಂಡ ಏಕಾಏಕಿ ದಾಳಿ ನಡೆಸಿದೆ. ಆಗ ಜತೆಗಿದ್ದ ಇಬ್ಬರು ಓಡಿ ತಪ್ಪಿಸಿಕೊಂಡಿದ್ದಾರೆ. 

ಇದೊಂದು ಪೂರ್ವ ದ್ವೇಷದ ಮತ್ತು ಪೂರ್ವ ಯೋಜಿತ ಕೊಲೆ ಎಂಬಂ ತಿದ್ದು,  ನವೀನ್‌ನ ಚಲನವಲನದ ಮೇಲೆ ನಿಗಾ ಇರಿಸಿ ಕೃತ್ಯ ಎಸಗಲಾ ಗಿದೆ.  ತಂಡದಲ್ಲಿ ಮೂರರಿಂದ ನಾಲ್ಕು ಮಂದಿ ಇದ್ದ ಬಗ್ಗೆ ಶಂಕೆ ಇದೆ ಎಂದು  ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ. 

ಆರೋಪಿಗಳು ಯದ್ವಾತದ್ವಾ ಕಡಿದಿದ್ದು, ನವೀನ್‌ ಸ್ಥಳದಲ್ಲಿಯೇ ಸಾವಿಗೀಡಾದ. ಆತನ ಕಿವಿಯೊಂದು ತುಂಡಾಗಿ ಸ್ಥಳದಲ್ಲಿ ಬಿದ್ದಿತ್ತು.

ರಾಜಕೀಯ ಪಕ್ಷವೊಂದರ ನಾಯಕ ಸಹಿತ ಹಲವು ಮಂದಿಗೆ ಹಲ್ಲೆ ನಡೆಸಿದ ಪ್ರಕರಣಗಳು ಈತನ ಮೇಲಿವೆ. ಕಾರ್ಕಳ, ಪಡುಬಿದ್ರಿ ಮಾತ್ರವಲ್ಲದೆ ಬೆಂಗಳೂರಿನಲ್ಲಿಯೂ ಈತನ ವಿರುದ್ಧ ಕೇಸು ದಾಖಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹಿಂದೆ ಪಡುಬಿದ್ರಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲವು ಸಮಯ ಬಾರ್‌ನಲ್ಲಿಯೂ ನೌಕರಿ ನಡೆಸಿದ್ದ. ಕಳೆದ ವರ್ಷ ನಡೆದಿದ್ದ ಫಿಲಿಪ್‌ ಕೊಲೆ ಪ್ರಕರಣದಲ್ಲೂ ಈ ಓರ್ವ ಆರೋಪಿಯಾಗಿದ್ದ. ಬಾರ್‌ನಲ್ಲಿ ಕುಡಿದು ಆಗಾಗ್ಗೆ ಮಿತ್ರರೊಂದಿಗೂ ಗಲಾಟೆ ನಡೆಸುತ್ತಿದ್ದು, ಅವರೊಳಗೂ ವೈರತ್ವ ಕಟ್ಟಿಕೊಂಡಿದ್ದ ಎಂದು ತಿಳಿದು ಬಂದಿದೆ.

ನಿರ್ಜನ ಪ್ರದೇಶ
ಈ ಹಿಂದೆ ಹೆದ್ದಾರಿ ಬದಿಯಲ್ಲಿಯೇ ಇದ್ದ ಬಾರ್‌ ಸರಕಾರದ ಹೊಸ ಕಾನೂನಿನ ಬಳಿಕ ಸ್ವಲ್ಪ ದೂರಕ್ಕೆ ಇತ್ತೀಚೆಗೆ ಸ್ಥಳಾಂತರಗೊಂಡಿತ್ತು. ಈ ಪರಿಸರದಲ್ಲಿ ಜನರ ಓಡಾಟ ವಿರಳವಾಗಿದೆ.

ನವೀನ್‌ ಮೃತದೇಹವನ್ನು ಮಣಿಪಾಲ ಶವಾಗಾರಕ್ಕೆ ಸ್ಥಳಾಂ ತರಿಸಲಾಗಿದೆ. 
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಡಿಸಿಐಬಿ ಇನ್‌ಸ್ಪೆಕ್ಟರ್‌ ಸಂಪತ್‌ ಕುಮಾರ್‌, ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿ ರಾವ್‌, ಪಡುಬಿದ್ರಿ ಪಿಎಸ್‌ಐ ಸತೀಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.