ಮಗನಿಗೊಂದು ಚಿನ್ನದ ಚಿತ್ರ!


Team Udayavani, Mar 2, 2018, 6:35 AM IST

chinna-chitra.jpg

“ಅವಕಾಶ ಸಿಗದೆ ಮಗ ಮಾನಸಿಕವಾಗಿ ಖನ್ನತೆಗೊಳಗಾಗಿದ್ದ. ಅವನ ಸಂಕಟ ನೋಡಲಾರದೆ ನಾನೇ ಅವನಿಗಾಗಿ ಈ ಚಿತ್ರ ನಿರ್ಮಿಸಿದ್ದೇನೆ. ಒಳ್ಳೆಯ ಪ್ರಯತ್ನಕ್ಕೆ ನಿಮ್ಮೆಲ್ಲರ ಸಹಕಾರ ಬೇಕು …’

– ಹೀಗೆ ವಿನಮ್ರವಾಗಿ ಮನವಿ ಮಾಡಿಕೊಂಡರು ನಿರ್ಮಾಪಕ ಪಿ.ಕೃಷ್ಣಪ್ಪ. ಅವರು ತಮ್ಮ ಮಗನಿಗಾಗಿ ನಿರ್ಮಿಸಿದ ಮೊದಲ ಚಿತ್ರ ಇಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರ ಜೊತೆ ಮಾತುಕತೆಗೆ ಕುಳಿತಿದ್ದರು ಕೃಷ್ಣಪ್ಪ. “ಚಿನ್ನದ ಗೊಂಬೆ’ ಮೂಲಕ ನಿರ್ಮಾಣಕ್ಕಿಳಿದಿರುವ ಕೃಷ್ಣಪ್ಪ ಅವರಿಗೆ ಚಿತ್ರರಂಗ ಹೊಸದು. ಆದರೆ, ಯಾವುದೇ ಕಮರ್ಷಿಯಲ್‌ ಚಿತ್ರಗಳಿಗೆ ಕಡಿಮೆ ಇಲ್ಲವೆಂಬಂತೆ ಚಿತ್ರ ಮಾಡಿರುವ ಖುಷಿ ಅವರದು. ಚಿತ್ರಕ್ಕೆ ಕೀರ್ತಿಕೃಷ್ಣ ಹೀರೋ. ಸಾಕಷ್ಟು ಕಡೆ ಅವಕಾಶಕ್ಕಾಗಿ ಅಲೆದಾಡಿದ್ದ ಕೀರ್ತಿಕೃಷ್ಣ ಅವರ ಸಂಕಟ ನೋಡಲಾರದೆ, ಕೃಷ್ಣಪ್ಪ ಅವರೇ ಹಣ ಹಾಕಿ ಮಗನನ್ನು ಹೀರೋ ಮಾಡಿದ್ದಾರೆ.

ಇದೊಂದು ಸಿನಿಮಾದೊಳಗಿನ ಸಿನಿಮಾ ಕಥೆ. ಮದ್ಯಮ ವರ್ಗದ ಹುಡುಗಿಯೊಬ್ಬಳು ಸಿನಿಮಾ ಅವಕಾಶಕ್ಕಾಗಿ ಅಲೆಯುತ್ತಾಳೆ. ಕೆಲ ನಿರ್ದೇಶಕ, ನಿರ್ಮಾಪಕರು ಆಕೆಯನ್ನು ದುರುಪಯೋಗ ಪಡಿಸಿಕೊಳ್ಳಲು ಯತ್ನಿಸುತ್ತಾರೆ. ಕೊನೆಗೆ ಒಳ್ಳೆಯ ಅವಕಾಶ ಎದುರು ನೋಡುವ ಆಕೆಗೆ ಅಂಥದ್ದೊಂದು ಅವಕಾಶ ಬರುತ್ತೆ. ಚಿತ್ರೀಕರಣಕ್ಕೆಂದು ಒಂದು ಹಳ್ಳಿಗೆ ಹೋದಾಗ, ಆ ಹಳ್ಳಿಯ ಖಳನೊಬ್ಬನ ಕಣ್ಣಿಗೆ ಬೀಳುವ ಆಕೆ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗುತ್ತಾಳೆ. ಆಮೇಲೆ ಪ್ರೇತವಾಗಿ ಕಾಡುತ್ತಾಳೆ. ಮುಂದೆ ಏನೆಲ್ಲಾ ಆಗುತ್ತೆ ಎಂಬುದು ಕಥೆ. ಇನ್ನು, ನಿರ್ದೇಶಕ ಪಂಕಜ್‌ ಬಾಲನ್‌ ಅವರಿಗೆ ಇದು ಹೊಸ ಅನುಭವ. ಕನ್ನಡ ಬಾರದ ಅವರು ಐದು ವಾಕ್ಯಗಳಲ್ಲೇ ಚಿತ್ರದ ಬಗ್ಗೆ ಹೇಳಿ ಸುಮ್ಮನಾದರು.

ನಾಯಕ ಕೀರ್ತಿಕೃಷ್ಣ ಅವರಿಲ್ಲಿ, ಕಲಾವಿದ ಆಗುವ ಆಸೆಯಿಂದ ಅವಕಾಶಕ್ಕಾಗಿ ಅಲೆದಾಡುವ ಹುಡುಗನಾಗಿ ಕಾಣಿಸಿಕೊಂಡಿದ್ದಾರಂತೆ. ನಿಜ ಜೀವನದಲ್ಲೂ ಅಂತಹ ಸಮಸ್ಯೆ ಎದುರಿಸಿದ್ದ ಕೀರ್ತಿ ಕೃಷ್ಣ ಅವರಿಗೆ ಅಂತಹ ಪಾತ್ರ ಸಿಕ್ಕಿದ್ದರಿಂದ ನ್ಯಾಯ ಒದಗಿಸಲು ಸಾಧ್ಯವಾಗಿದೆಯಂತೆ. ಪೊಲೀಸ್‌ ಅಧಿಕಾರಿಯಾಗಿಯೂ ಅಲ್ಲಿ ಕಾಣಿಸಿಕೊಂಡಿದ್ದು, ಯಾಕೆ ಆ ಪಾತ್ರ ಬರುತ್ತೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು ಎನ್ನುತ್ತಾರೆ ಅವರು.

ಚಿತ್ರದಲ್ಲಿ ಲೀನಾ ಖುಷಿ ಮತ್ತು ಅಂಜಶ್ರೀ ನಾಯಕಿಯರು. ಈ ಪೈಕಿ ಅಂಜಶ್ರೀ ಮಾತ್ರ ಅಂದು ಆಗಮಿಸಿದ್ದರು. ಅವರದು ಡ್ರೀಮ್‌ಗರ್ಲ್ ಪಾತ್ರವಂತೆ. ಸಿನಿಮಾ ನಟಿಯಾಗಬೇಕು ಅಂತ ಅಲೆದಾಡುವ ಹುಡುಗಿ ಲೈಫ‌ಲ್ಲಿ ಏನೆಲ್ಲಾ ಆಗುತ್ತೆ ಎಂಬುದು ಕಥೆ’ ಎಂದರು ಅಂಜಶ್ರೀ.

ಅಂದು ಚಿತ್ರಕ್ಕೆ ಶುಭಕೋರಲು ನಿರ್ಮಾಪಕ ಕನಕಪುರ ಶ್ರೀನಿವಾಸ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ, ಕುಂಬಳಗೋಡು ಜಯಕರ್ನಾಟಕ ಅಧ್ಯಕ್ಷ ನಾಗರಾಜ್‌, ವಿತರಕ ಶಿವಪತಿ ಇತರರು ಆಗಮಿಸಿದ್ದರು. ಚಿತ್ರದಲ್ಲಿ ಗಡ್ಡಪ್ಪ, ಸೆಂಚುರಿ ಗೌಡ, ಪಂಕಜ್‌ ಬಾಲನ್‌, ಪೇನಮಣಿ, ಪಿ.ಕೃಷ್ಣಪ್ಪ, ನಾಗರಾಜ್‌, ಜ್ಯೋತಿ ಧನಲಕ್ಷ್ಮೀ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.