ದ್ವಿತೀಯ ಪಿಯು ಪರೀಕ್ಷೆ ಮೊದಲ ದಿನ ಸುಗಮ
Team Udayavani, Mar 2, 2018, 7:30 AM IST
ಬೆಂಗಳೂರು: ರಾಜ್ಯಾದ್ಯಂತ ಗುರುವಾರ ಆರಂಭವಾಗಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಯಾವುದೇ ಗೊಂದಲ ಇಲ್ಲದೇ ನಡೆದಿದೆ. ಅರ್ಥಶಾಸ್ತ್ರ ಮತ್ತು ಭೌತಶಾಸ್ತ್ರ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಪೈಕಿ ಅರ್ಥಶಾಸ್ತ್ರ ವಿಷಯದಲ್ಲಿ ಕಲಬುರಗಿಯ
ಇಬ್ಬರು ಡಿಬಾರ್ ಆಗಿದ್ದಾರೆ. ಇನ್ನು ಆರೋಗ್ಯ ಹಾಗೂ ಇತರೆ ಕಾರಣಕ್ಕಾಗಿ ಕೆಲವು ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಇದನ್ನು ಹೊರತುಪಡಿಸಿ ರಾಜ್ಯದ ಬೇರಾವ ಜಿಲ್ಲೆಯಲ್ಲೂ ಯಾವುದೇ ರೀತಿಯ ಪರೀಕ್ಷಾ ಅಕ್ರಮ ನಡೆದಿಲ್ಲ. ಪ್ರಶ್ನೆಪತ್ರಿಕೆಯಲ್ಲಿ ಯಾವುದೇ ಗೊಂದಲ ಇರಲಿಲ್ಲ. ಹಾಗೆಯೇ ನಿರೀಕ್ಷಿಸಿರುವ ಪ್ರಶ್ನೆಗಳು ಬಂದಿರಲಿಲ್ಲ. ಮೊದಲ ಪರೀಕ್ಷೆ ಸುಲಭವಾಗಿದೆ. ಉಳಿದ 5 ಪರೀಕ್ಷೆ ಕೂಡ ಸುಲಭವಾಗಿ ಇರಲಿದೆ ಎಂಬ ಭಾವನೆ ಇದೆ ಎಂದು ಮಲ್ಲೇಶ್ವರದ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ಹೊರಬಂದ ರಕ್ಷಾ ಪರೀಕ್ಷಾ ಅನುಭವ ಹೇಳಿಕೊಂಡರು.
ವಿದ್ಯಾರ್ಥಿಗಳ ಆಕ್ರೋಶ: ಗುರುವಾರ ಬೆಳಗ್ಗೆ 10.15ಕ್ಕೆ ಸರಿಯಾಗಿ ರಾಜ್ಯದ ಎಲ್ಲಾ 1004 ಕೇಂದ್ರದಲ್ಲಿ ಪರೀಕ್ಷೆ ಆರಂಭವಾಗಿತ್ತು. ಪರೀಕ್ಷಾ ಕೇಂದ್ರಕ್ಕೆ ಅರ್ಧಗಂಟೆ ತಡವಾಗಿ ಹೋದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಅರ್ಧಗಂಟೆ ನಂತರ ಹೋದ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಿಲ್ಲ. ಬೆಂಗಳೂರಿನ ಕೋಲ್ಸ್ಪಾರ್ಕ್ ಸಮೀಪದ ಗುಡ್ವಿಲ್ ಪರೀಕ್ಷಾ ಕೇಂದ್ರದಲ್ಲಿ ಸುಮಾರು 30ಕ್ಕೂ ಅಧಿಕ ವಿದ್ಯಾರ್ಥಿಗಳು ತಡವಾಗಿ ಪರೀಕ್ಷೆಗೆ ಹೋಗಿದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಹೀಗಾಗಿ ನೊಂದ ವಿದ್ಯಾರ್ಥಿಗಳು ಮತ್ತು ಪಾಲಕ-ಪೋಷಕರು ಪರೀಕ್ಷಾ ಕೇಂದ್ರದ ಮೇಲ್ವಿಚಾರಕರ ಮತ್ತು ಪಿಯು ಇಲಾಖೆ ಅಧಿಕಾರಿಗಳ ವಿರುದಟಛಿ ಆಕ್ರೋಶ ವ್ಯಕ್ತಪಡಿಸಿ, ಭೌತಶಾಸ್ತ್ರಉ ಹಾಗೂ ಅರ್ಥಶಾಸ್ತ್ರ ಪರೀಕ್ಷೆಯನ್ನು ಪುನಃ ನಡೆಸಬೇಕು ಎಂದು ಒತ್ತಾಯಿಸಿದರು.
ಪಿಯು ಇಲಾಖೆ ನಿರ್ದೇಶಕಿ ಸಿ.ಶಿಖಾ ಮಾತನಾಡಿ, ಕೋಲ್ಸ್ ಪಾರ್ಕ್ ಸಮೀಪದ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ತಡವಾಗಿ ಹೋಗಿರುವುದರಿಂದ ಅವಕಾಶ ನೀಡಿಲ್ಲ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿದ್ದು, 10.45ರ ಒಳಗೆ ಬಂದಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ಕೋಲ್ಸ್ ಪಾರ್ಕ್ ಸಮೀಪದ ಕೇಂದ್ರಕ್ಕೆ ವಿದ್ಯಾರ್ಥಿಗಳು 10.55ಕ್ಕೆ ಹೋಗಿದ್ದಾರೆ. ಡಿಡಿಪಿಐಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
MUST WATCH
ಹೊಸ ಸೇರ್ಪಡೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು