6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಹರ್ಷ


Team Udayavani, Mar 2, 2018, 12:29 PM IST

bid-3.jpg

ಬೀದರ: ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಗೆ ಅನುಗುಣವಾಗಿ ರಾಜ್ಯ ಸರ್ಕಾರ 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಿದ್ದು, ನೌಕರರ ವಲಯದಲ್ಲಿ ಹರ್ಷವನ್ನುಂಟು ಮಾಡಿದೆ ಎಂದು ಸಂಘದ ಜಿಲ್ಲಾ ಘಟಕ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದೆ.

ಸಂಘವು ರಾಜ್ಯಾದ್ಯಂತ ಸಂಘಟಿತ ಹೋರಾಟ ಮಾಡಿದ ಹಿನ್ನೆಲೆಯ ಫಲವಾಗಿ 6ನೇ ವೇತನ ಆಯೋಗ ರಚನೆಯಾಯಿತು. ಆಯೋಗವು ಶೇ.30ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಿತು. ಆಯೋಗದ ಶಿಫಾರಸ್ಸುಗಳನ್ನು 1-4-2018ರಿಂದ ಜಾರಿಗೊಳಿಸಲು ಸರ್ಕಾರವು ಇಂದು ಆದೇಶ ಹೊರಡಿಸಿದೆ. ಇದು ಸಹಜವಾಗಿ ಸರ್ಕಾರಿ ನೌಕರರ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ತರುವುದರಲ್ಲಿ ಸಂದೇಹವಿಲ್ಲ ಎಂದು ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ ಮಠಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ನೌಕರರ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಸಂಘದಿಂದ ಮಾ.3ರಂದು ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಆಡಳಿತ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. 

ಸಂಘದ ರಾಜ್ಯಾಧ್ಯಕ್ಷ ಮಂಜೇಗೌಡರ ನೇತೃತ್ವದಲ್ಲಿ ನಡೆಯಲಿರುವ ಈ ಸಮಾರಂಭವನ್ನು ಸಿಎಂ ಉದ್ಘಾಟಿಸಲಿದ್ದಾರೆ. ಮಹಾ ಸಮ್ಮೇಳನದಲ್ಲಿ ಭಾಗವಹಿಸಲು ಜಿಲ್ಲೆಯಿಂದ ಒಂದು ಸಾವಿರಕ್ಕೂ ಅಧಿಕ ನೌಕರರು ತೆರಳಲಿದ್ದು, ಬಸ್‌ ಮತ್ತು ರೈಲು ಮೂಲಕ ಮಾ.2ರಂದು ಪ್ರಯಾಣ ಬೆಳೆ‌ಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

6ನೇ ವೇತನ ಆಯೋಗದ ವರದಿಯಲ್ಲಿನ ಕೆಲವು ನ್ಯೂನತೆಗಳನ್ನು ಸರಿಪಡಿಸಲು ಮತ್ತು ವೇತನ ಹೆಚ್ಚಳವನ್ನು ಶೇ.30ರಿಂದ 45ಕ್ಕೆ ಹೆಚ್ಚಿಸಲು ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ಜೊತೆಗೆ ಹಲವು ವೃಂದಗಳ ವೇತನ ಶ್ರೇಣಿಗಳಲ್ಲಿ ಉಂಟಾಗಿರುವ ವೇತನ ತಾರತಮ್ಯ ಕುರಿತು ಅವರ ಗಮನಕ್ಕೆ ತರಲಾಗುವುದು. ಈ ಸಮ್ಮೇಳನದಲ್ಲಿ ಭಾಗವಹಿಸುವ ಜಿಲ್ಲೆಯ ನೌಕರರಿಗೆ ಮಾ.2 ಮತ್ತು 3ರಂದು ವಿಶೇಷ ಸಾಂದರ್ಭಿಕ ರಜೆಗಳನ್ನು ಸರ್ಕಾರ ಮಂಜೂರು ಮಾಡಿದ್ದು, ಜಿಲ್ಲೆಯ ನೌಕರರು ಸದುಪಯೋಗ ಪಡಿಸಿಕೊಂಡು ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ. 

ಟಾಪ್ ನ್ಯೂಸ್

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.