ಸರಕಾರ ರಚನೆಗಾಗಿ ಹಿರಿಯ ಕೈ ನಾಯಕರು ಮೇಘಾಲಯಕ್ಕೆ
Team Udayavani, Mar 3, 2018, 12:03 PM IST
ಹೊಸದಿಲ್ಲಿ : ಮೇಘಾಲದಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಮೂಡಿ ಬರುವ ಖಚಿತ ಸಾಧ್ಯತೆಗಳಿರುವುದನ್ನು ಗಮನಿಸಿ ಅಲ್ಲಿ ಸರಕಾರ ರಚಿಸುವ ಅವಕಾಶಗಳನ್ನು ಅನ್ವೇಷಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ತನ್ನ ಉನ್ನತ ನಾಯಕರನ್ನು ಅಲ್ಲಿಗೆ ಕಳುಹಿಸುತ್ತಿದೆ.
ಮೂಲಗಳ ಪ್ರಕಾರ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಮತ್ತು ಕಮಲ್ ನಾಥ್ ಅವರು ಇಂದು ಬೆಳಗ್ಗೆ ಶಿಲ್ಲಾಂಗ್ಗೆ ತೆರಳಿದ್ದಾರೆ. ಸರಕಾರ ರಚಿಸುವ ನಿಟ್ಟಿನಲ್ಲಿ ಪಕ್ಷೇತರರೊಂದಿಗೆ ಸಂಭಾವ್ಯ ಹೊಂದಾಣಿಕೆಯನ್ನು ರೂಪಿಸುವುದು ಕಾಂಗ್ರೆಸ್ ತಂತ್ರವಾಗಿದೆ.
ಮೇಘಾಲಯದಲ್ಲಿ ಪ್ರಕೃತ ಕಾಂಗ್ರೆಸ್ ಆಡಳಿತಾರೂಢ ಪಕ್ಷವಾಗಿದೆ. ಇಂದು ಮತ ಎಣಿಕೆ ಜಾರಿಯಲ್ಲಿರುವಂತೆಯೇ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಮೂಡಿ ಬರಲಿರುವುದರಿಂದ ರಾಜ್ಯದಲ್ಲಿ ಮತ್ತೆ ಸರಕಾರ ರಚಿಸಲು ಹಿರಿಯ ಕಾಂಗ್ರೆಸ್ ನಾಯಕರು ಅಲ್ಲಿಗೆ ಧಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ