ಸಮಬಾಳು-ಸಮಪಾಲು ತತ್ವ ಪ್ರತಿಪಾದಿಸಿದ್ದ ಶರಣರು


Team Udayavani, Mar 3, 2018, 12:13 PM IST

bid-2.jpg

ಬೀದರ: ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ತತ್ವ ಹಾಗೂ ಸ್ವತ್ಛ ಸಮಾಜದ ಕನಸನ್ನು ಅಂದು ಬಸವಾದಿ ಶರಣರು ಕಂಡಿದ್ದರು. ಆ ಕನಸು ನನಸು ಮಾಡಿಸಿ ತೋರಿಸಿ ವಿಶ್ವಕ್ಕೆ ಶರಣರು ಮಾದರಿಯಾದರು ಎಂದು ಮಾತೆ ಸತ್ಯಾದೇವಿ ನುಡಿದರು.

ನಗರದ ಬಸವ ಮಂಟಪದಲ್ಲಿ ಜಿಲ್ಲಾ ರಾಷ್ಟ್ರೀಯ ಬಸವ ದಳ ಮತ್ತು ಲಿಂಗಾಯತ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಮಾಸಿಕ ಕಲ್ಯಾಣ ಕ್ರಾಂತಿ ಹುಣ್ಣಿಮೆ ಮತ್ತು ಬಸವ ಜ್ಯೋತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಜಾತಿ, ವರ್ಣ ಮತ್ತು ವರ್ಗರಹಿತ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಸಮಗಾರ ಹರಳಯ್ಯನವರ ಮಗ ಶೀಲವಂತನಿಗೂ, ಬ್ರಾಹ್ಮಣರ ಮಧುವರಸರ ಮಗಳು ಲಾವಣ್ಯಳಿಗೂ ಅಂತರ್ಜಾತಿ ಮದುವೆ ಮಾಡಿಸಿದರು. ಇದಕ್ಕಾಗಿ ಅವರನ್ನು ಆನೆ ಕಾಲಿಗೆ ಕಟ್ಟಿ ಎಳೆಹೂಟೆ ಶಿಕ್ಷೆ ವಿ ಧಿಸಲಾಯಿತು. ಶರಣರೆಲ್ಲ ಕಲ್ಯಾಣದಿಂದ ಚದುರಿದರು. ವಚನ ಸಾಹಿತ್ಯವನ್ನು ಸುಡಲಾಯಿತು. ಹೀಗೆ ಕಲ್ಯಾಣ ಕ್ರಾಂತಿಯ ನೆನಪಿಗಾಗಿ ಈ ಹುಣ್ಣಿಮೆಯನ್ನು ಕಲ್ಯಾಣ ಕ್ರಾಂತಿ ಹುಣ್ಣಿಮೆ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದರು.

ಸಮಾಜ ಸೇವಕ ದಶಪ್ಪ ಬೋರಗೊಂಡ ಮಾತನಾಡಿ, ಬಸವಾದಿ ಶರಣರ ಷಡ್‌ಗಣಾಧೀಶರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಕೂಡಾ ಒಬ್ಬರಾಗಿದ್ದರು. ಹಾದಿ ಹಾದಿಗೆ ಗುಡಿಗಳನ್ನು ಕಟ್ಟುತ್ತ, ಬೀದಿ ಬೀದಿಗೆ ಕೆರೆಗಳನ್ನು ಕಟ್ಟಿಸುತ್ತ ಸಾಗಿದ್ದರು. ಅಜ್ಞಾನ ಅಂಧಕಾರದಲ್ಲಿ ಮುಳುಗಿದ್ದ ಸಿದ್ಧರಾಮರನ್ನು ಅಲ್ಲಮಪ್ರಭು ಮತ್ತು ಬಸವಣ್ಣನವರು ಪರಿವರ್ತಿಸಿ, ಚೆನ್ನಬಸವಣ್ಣನವರಿಂದ ಲಿಂಗದೀಕ್ಷೆ ಕೊಡಿಸಿ ಶಿವಯೋಗಿಯನ್ನಾಗಿ ಮಾಡಿದರು. ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಸಿದ್ಧರಾಮರ ಕೊಡುಗೆ ಅಪಾರವಾಗಿತ್ತು. ಹಾಗಾಗಿ ಶರಣ ಸಂಕುಲದಲ್ಲಿ ಅವರ ಹೆಸರು ಅಮರವಾಗಿ ಉಳಿದಿದೆ ಎಂದು ಹೇಳಿದರು.

ಡಾ| ನಾಗಶೆಟ್ಟಿ ಪಾಟೀಲ ಗಾದಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಕುಶಾಲರಾವ್‌ ಪಾಟೀಲ ಖಾಜಾಪುರ ಅಧ್ಯಕ್ಷತೆ ವಹಿಸಿದ್ದರು. ಶಿವರಾಜ ಪಾಟೀಲ ಅತಿವಾಳ ಧ್ವಜಾರೋಹಣ ನೆರವೇರಿಸಿದರು. ನಾಗಶೆಟ್ಟಿ ದಾಡಗಿ, ಕಾಶಪ್ಪ, ಸೀತಾ ಅಡಿವೆಪ್ಪ ಪಟೆ° ವೇದಿಕೆಯಲ್ಲಿದ್ದರು. 

ಈ ಸಂದರ್ಭದಲ್ಲಿ ಬಸವ ತತ್ವಕ್ಕಾಗಿ ದುಡಿದ ಹಿರಿಯ ನಾಗರಿಕರಾದ ಅಣ್ಣೆಪ್ಪ ಮಂಗಲಗಿ, ಬಂಡೆಪ್ಪ ಅಳ್ಳಿ, ಶಿವಕುಮಾರ ಪಾಟೀಲ ಹಾರೂರಗೇರಿ ದಂಪತಿಗಳನ್ನು ಸನ್ಮಾನಿಸಲಾಯಿತು. ಗಣಪತಿ ದೇಶಮುಖ, ಗಣಪತಿ ಬಿರಾದಾರ, ಮನ್ಮಥಯ್ಯ ಸ್ವಾಮಿ, ಅಶೋಕ ಶೀಲವಂತ, ವಿವೇಕ ಪಟೆ°, ಶಾಂತಾದೇವಿ ಬಿರಾದಾರ, ಚಂದ್ರಕಲಾ ದಾಡಗಿ, ಮಹಾಲಿಂಗ ಸ್ವಾಮಿ, ಕಾಶಿನಾಥ ಸೂರ್ಯವಂಶಿ ಮತ್ತಿತರರು ಇದ್ದರು. ಸುರೇಶ ಸ್ವಾಮಿ ಸ್ವಾಗತಿಸಿದರು. ಮಹಾರುದ್ರ ಡಾಕುಳಗಿ ನಿರೂಪಿಸಿದರು. ರವಿ ಪಾಪಡೆ ವಂದಿಸಿದರು. 

ಟಾಪ್ ನ್ಯೂಸ್

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.