ತ್ರಿಪುರದಲ್ಲಿ ಬಿಜೆಪಿ ಸುನಾಮಿ, ಇನ್ನೆರಡರಲ್ಲಿ ಅಧಿಕಾರದ ಮೇಲೆ ಕಣ್ಣು


Team Udayavani, Mar 3, 2018, 4:15 PM IST

Modi-Sunami-700.jpg

ಚುನಾವಣಾ ಫ‌ಲಿತಾಂಶಗಳು:

ತ್ರಿಪುರ 59/59 :  ಬಿಜೆಪಿ+ 43, ಕಾಂಗ್ರೆಸ್‌ 0, ಸಿಪಿಎಂ 16, ಸಿಪಿಐ 0, ಇತರರು 0.

ಮೇಘಾಲಯ : 59/59 : ಬಿಜೆಪಿ 2, ಕಾಂಗ್ರೆಸ್‌ 21, ಯುಡಿಪಿ 6, ಎನ್‌ಪಿಪಿ 19, ಇತರರು 11.

ನಾಗಾಲ್ಯಾಂಡ್‌ 60/60 : ಬಿಜೆಪಿ + 29, ಕಾಂಗ್ರೆಸ್‌ 0, ಎನ್‌ಪಿಎಫ್ 25, ಎನ್‌ಸಿಪಿ 0, ಇತರರು 6

ಹೊಸದಿಲ್ಲಿ : ಬಿಜೆಪಿ ಅಲೆ ಭಾರತದ ಮೂರು ಈ ಶಾನ್ಯ ರಾಜ್ಯಗಳಾದ ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ನಲ್ಲಿ ಪ್ರಬಲವಾಗಿ ಬೀಸುತ್ತಿದ್ದು ತ್ರಿಪುರದಲ್ಲಿ ಕಳೆದ ಎರಡು ದಶಕಗಳಿಂದ ಅಧಿಕಾರದಲ್ಲಿರುವ ಸಿಪಿಎಂ-ನೇತೃತ್ವದ ಸರಕಾರ ಧೂಳಿಪಟವಾಗಿದೆ. ತ್ರಿಪುರದಲ್ಲಿ ಸರಕಾರ ರಚಿಸಲಿರುವ ಬಿಜೆಪಿ, ನಾಗಾಲ್ಯಾಂಡ್‌ ಮತ್ತು ಮೇಘಾಲಯದಲ್ಲೂ ಸರಕಾರ ರಚಿಸುವ ಸಾಧ್ಯತೆಗಳಿವೆ. 

ತ್ರಿಪುರದಲ್ಲಿ ಚುನಾವಣೆಗೆ ಒಳಪಟ್ಟ 59 ಸ್ಥಾನಗಳ ಪೈಕಿ ಬಿಜೆಪಿ 43 ಸ್ಥಾನಗಳಲ್ಲಿ ಮುಂದಿದ್ದು ಅದು ಸರಕಾರ ರಚಿಸುವುದು ಖಚಿತವೇ ಇದೆ. 

ಹಿಂದಿನ ತ್ರಿಪುರ ಸರಕಾರದಲ್ಲಿ 50 ಸ್ಥಾನಗಳನ್ನು ಹೊಂದಿದ್ದ ಎಡ ಪಕ್ಷ ಈ ಬಾರಿ ಕೇವಲ 16 ಸ್ಥಾನಗಳಲ್ಲಿ ಮುಂದಿದೆ. ಚಾರ್ಲಿಯಾಮ್‌ ಕ್ಷೇತ್ರದಲ್ಲಿ ಓರ್ವ ಅಭ್ಯರ್ಥಿ ಮೃತಪಟ್ಟ ಕಾರಣ ಅಲ್ಲಿನ ಚುನಾವಣೆಯನ್ನು ಮುಂದೂಡಲಾಗಿತ್ತು. ಅದನ್ನು ಇನ್ನು ಇದೇ ಮಾರ್ಚ್‌ 12ರಂದು ನಡೆಸಲಾಗುವು. 

ತ್ರಿಪುರದಲ್ಲಿ ಐದನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಮಾಣಿಕ್‌ ಸರ್ಕಾರ ಅವರ ಕನಸು ಭಗ್ನವಾಗಿದೆ; ಎಡ ಪಕ್ಷಕ್ಕೆ ಆ ಮೂಲಕ ಭಾರೀ ದೊಡ್ಡ ಹೊಡೆತ ನೀಡಲಾಗಿದೆ. ಈ ವರೆಗೆ ದೇಶದಲ್ಲಿ ತ್ರಿಪುರ ಮತ್ತು ಕೇರಳದಲ್ಲಿ ಮಾತ್ರವೇ ಎಡ ಪಕ್ಷದ ಆಳ್ವಿಕೆ ಇತ್ತು. ಬಿಜೆಪಿಯ ರಾಮ ಮಾಧವ್‌ ಹೇಳಿರುವ ಪ್ರಕಾರ, ತ್ರಿಪುರ ಸುಂದರಿ ಮಾತೆಯ ಆಶೀರ್ವಾದದಿಂದಾಗಿ ಬಿಜೆಪಿ ತ್ರಿಪುರದಲ್ಲಿ ಕ್ರಾಂತಿಕಾರಿ ಫ‌ಲಿತಾಂಶ ಸಾಧಿಸಿದೆ.

ಮೇಘಾಲಯದಲ್ಲಿ :

ಮೇಘಾಲಯದಲ್ಲಿ ಈಗ ಲಭ್ಯವಿರುವ ಟ್ರೆಂಡ್‌ಗಳ ಪ್ರಕಾರ ಕಾಂಗ್ರೆಸ್‌ 20 ಸ್ಥಾನಗಳಲ್ಲಿ ಮುಂದಿದೆ; ಆದರೆ ಸರಕಾರ ರಚಿಸಲು ಅಗತ್ಯವಿರುವ 31ರ ಮ್ಯಾಜಿಕ್‌ ನಂಬರ್‌ ಸಾಧಿಸಲು ವಿಫ‌ಲವಾಗಿದೆ. 

ಇಲ್ಲಿಯೂ ಕೂಡ 59 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ವಿಲಯಂನಗರ ಕ್ಷೇತ್ರದ ಅಭ್ಯರ್ಥಿಯ ಹತ್ಯೆಯಾದ ಕಾರಣ ಚುನಾವಣೆಯನ್ನು ರದ್ದುಪಡಿಸಲಾಗಿತ್ತು.

ಮುಖ್ಯಮಂತ್ರಿ ಮುಕುಲ್‌ ಸಂಗ್ಮಾ ನೇತೃತ್ವದ ಕಾಂಗ್ರೆಸ್‌ ಏಕೈಕ ದೊಡ್ಡ ಪಕ್ಷವಾಗಿ ಮೂಡಿ ಬಂದಿರುವ ಹೊರತಾಗಿಯೂ ಅದು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಬೇಕಾದ ಅನಿವಾರ್ಯತೆ ಒದಗಿದೆ. 

ಇಲ್ಲಿನ ಅಂತಿಮ ಟ್ರೆಂಡ್‌ಗಳ ಪ್ರಕಾರ ಕಾಂಗ್ರೆಸ್‌ 21 ಸ್ಥಾನಗಳಲ್ಲಿ ಮುಂದಿದೆ; ಕೇಂದ್ರದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ, ಮಾಜಿ ಲೋಕಸಭಾ ಸ್ಪೀಕರ್‌ ಪಿ ಎ ಸಂಗ್ಮಾ ಸಂಸ್ಥಾಪಿತ ಎನ್‌ಪಿಪಿ 19 ಸ್ಥಾನಗಳಲ್ಲಿ ಮುಂದಿದೆ; ಬಿಜೆಪಿ 2ರಲ್ಲಿ ಮುಂದಿದೆ. 

ಎನ್‌ಡಿಎ ಪಾಲುದಾರನಾಗಿರುವ ಹಾಗೂ ಪ್ರತ್ಯೇಕವಾಗಿ ಚುನಾವಣಾ ಕಣಕ್ಕೆ ಇಳಿದಿರುವ ಯುಡಿಪಿ, ಆರು ಸ್ಥಾನಗಳಲ್ಲಿ ಮುಂದಿದೆ;  ನಿರ್ಣಾಯಕರಾಗಬಲ್ಲ ಪಕ್ಷೇತ್ರರು 11 ಸ್ಥಾನಗಳಲ್ಲಿ ಮುಂದಿದ್ದಾರೆ !

ಕಾಂಗ್ರೆಸ್‌ ಪಕ್ಷವನ್ನು ಹೊರಗಿಡುವ ಸಲುವಾಗಿ ಇಲ್ಲಿ ಎನ್‌ಡಿಎ ಪಾಲುದಾರ ಪಕ್ಷಗಳು ಚುನಾವಣೋತ್ತರ ಹೊಂದಾಣಿಕೆ ನಡೆಸುವ ಸಂಭವವಿದೆ. ಇದನ್ನು ಬಿಜೆಪಿಯ ಮೇಘಾಲಯ ಪ್ರಭಾರ ನಳಿನ್‌ ಕೊಹ್ಲಿ ವ್ಯಕ್ತಪಡಿಸಿದ್ದಾರೆ : ಮೇಘಾಲಯದಲ್ಲಿ  ಜನರು ಕಾಂಗ್ರೆಸ್‌ ವಿರುದ್ಧ ಮತ ಹಾಕಿದ್ದಾರೆ; ಅಂತೆಯೇ ಕಾಂಗ್ರೆಸ್‌ ಹೊರಗಿಡಲು ಬಿಜೆಪಿ ಮತ್ತು ಇತರ ಪಕ್ಷಗಳು ಸೇರಿಕೊಂಡು ಚುನಾವಣೋತ್ತರ ಮೈತ್ರಿ ನಡೆಸಲಿದ್ದಾರೆ.

ನಾಗಾಲ್ಯಾಂಡ್‌ನ‌ಲ್ಲಿ :

ನಾಗಾಲ್ಯಾಂಡ್‌ನ‌ಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾಗಿರುವ ಹೊಸದಾಗಿ ಸಂಸ್ಥಾಪಿಸಲ್ಪಟ್ಟ  ಎನ್‌ಡಿಪಿಪಿ ಮುಂದಿವೆ. ಎನ್‌ಡಿಪಿಪಿ 26 ಸ್ಥಾನಗಳಲ್ಲಿ ಮುಂದಿದೆ. ಎನ್‌ಡಿಪಿಪಿ ಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ನೀಫಿಯೂ ರಿಯೋ ಅವರೇ ನಾಗಾಲ್ಯಾಂಡ್‌ನ‌ ಮುಂದಿನ ಮುಖ್ಯಮಂತ್ರಿಯಾಗುವ ನಿರೀಕ್ಷೆ ಇದೆ. 

ಮುಖ್ಯಮಂತ್ರಿ ಟಿಆರ್‌ ಝೆಲಿಯಾಂಗ್‌ ಅವರ ಎನ್‌ಪಿಎಫ್ 28 ಸ್ಥಾನಗಳಲ್ಲಿ ಮುಂದಿದೆ. ಹಿಂದೆ ಎನ್‌ಪಿಎಫ್ ಬಿಜೆಪಿ ಜತೆ ಮೈತ್ರಿ ಹೊಂದಿತ್ತು. ಆದರೆ ಚುನಾವಣೆಗೆ ಮುನ್ನ ಬಿಜೆಪಿ ಆ ಮೈತ್ರಿಯನ್ನು ಮುರಿದು, ಎನ್‌ಡಿಪಿಪಿ ಜತೆಗೆ ಮೈತ್ರಿ ಬೆಳೆಸಿಕೊಂಡಿತು. 

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.